ಮೈತ್ರಿ ಅಸ್ತಿತ್ವವೇ ಹಳ್ಳಿಗರಿಗೆ ಗೊತ್ತಿಲ್ಲ


Team Udayavani, Apr 21, 2019, 2:27 PM IST

Udayavani Kannada Newspaper
ಪ್ರಶ್ನೆ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದೆ ಮೋದಿ ಅಲೆ ಕೈಹಿಡಿಯುತ್ತಾ ?

ಉತ್ತರ: ಬೆಳಗಾವಿ ಜಿಲ್ಲೆಯಲ್ಲಿ ಅದರಲ್ಲೂ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೈತ್ರಿಯ ವಾತಾವರಣವೇ ಕಾಣುತ್ತಿಲ್ಲ. ಈ ಭಾಗದಲ್ಲಿ ಜೆಡಿಎಸ್‌ ತನ್ನ ಅಸ್ತಿತ್ವವನ್ನೇ ಕಳೆದು ಕೊಂಡಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಇದೆ ಎಂಬುದು ಬಹುತೇಕ ಹಳ್ಳಿಗಳಲ್ಲಿ ಗೊತ್ತೇ ಇಲ್ಲ. ಇಲ್ಲಿ ಏನೇ ಇದ್ದರೂ ಅದು ಮೋದಿ ಅಲೆ ಮಾತ್ರ.

ಪ್ರಶ್ನೆ: ರಾಷ್ಟ್ರೀಯವಾದ, ಸೈನಿಕರ ಸಾಧನೆ ಹೊರತುಪಡಿಸಿ ಸ್ಥಳೀಯವಾಗಿ ನಿಮ್ಮ ಸಾಧನೆ ಏನು..?

ಉತ್ತರ: ಬೆಳಗಾವಿ ನಗರದಲ್ಲಿ ವಾಹನ ಸಂಚಾರ ಸಮಸ್ಯೆಗೆ ಮುಕ್ತಿ ಹಾಡಲು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮೂರು ರೈಲ್ವೆ ಮೇಲು ಸೇತುವೆಗಳ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಹೊರದೇಶಗಳಿಗೆ ರಪ್ತು ಮಾಡಲು ಅನುಕೂಲವಾಗುವಂತೆ ಡಿಐಎಫ್‌ಟಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ವಿದ್ಯಾವಂತ ಯುವ ಸಮುದಾಯಕ್ಕೆ ಸಹಾಯವಾಗಲು ಪಾಸ್‌ಪೋರ್ಟ್‌ ಸೇವಾ ಕೇಂದ್ರ ತರಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣವನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಉಡಾನ್‌ ಯೋಜನೆಯಡಿ ಆಯ್ಕೆಯಾಗುವಂತೆ ಮಾಡಲಾಗಿದೆ. ಲೋಂಡಾ- ಮೀರಜ್‌ ದ್ವಿಪಥ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರದಿಂದ ಅನುದಾನ ಮಂಜೂರು ಮಾಡಿಸಲಾಗಿದೆ.

ಪ್ರಶ್ನೆ; ರಾಜ್ಯ ಸರಕಾರದ ಅಬ್ಬರ ಎದುರಿಸಲು ಪ್ರಚಾರದ ವೈಖರಿ ಹಾಗೂ ತಂತ್ರಗಾರಿಕೆ ಹೇಗಿದೆ ?

ಉತ್ತರ: ಕ್ಷೇತ್ರದ ಯಾವ ಭಾಗದಲ್ಲೂ ರಾಜ್ಯ ಸರಕಾರದ ಅಬ್ಬರ ಇಲ್ಲ. ಮೈತ್ರಿ ಸರಕಾರದ ಭರವಸೆಗಳು ಬರೀ ಸುಳ್ಳು ಎಂಬುದು ಜನರಿಗೆ ಗೊತ್ತಾಗಿದೆ. ನಾವು ಮನೆ ಮನೆಗೆ ಹೋಗಿದ್ದೇವೆ. ಜನರಿಗೆ ಮನವಿ ಮಾಡಿದ್ದೇವೆ. ಜನರಿಗೆ ಬಳಿಗೆ ಹೋಗುವುದು. ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದು. ಅವರ ಸ್ಪಂದನೆಯೇ ನಮಗೆ ಶ್ರೀರಕ್ಷೆ. ಕೆಲವು ಕಡೆ ನೀವು ನಮ್ಮ ಹಳ್ಳಿಗೆ ಬಂದೇ ಇಲ್ಲ ಎಂದು ಹೇಳಿದರು. ಅಸಮಾಧಾನ ವ್ಯಕ್ತಪಡಿಸಿದರು. ಆದರೂ ನಿಮಗೆ ಬೆಂಬಲ ನೀಡುತ್ತೇವೆ ಎಂದರು. ಅದೂ ಸಹ ನಮಗೆ ಆಶೀರ್ವಾದವೇ. ಹೀಗಿರುವಾಗ ಈ ಸರಕಾರವನ್ನು ಎದುರಿಸಲು ಹೊಸ ತಂತ್ರಗಾರಿಕೆಯ ಅಗತ್ಯವಿಲ್ಲ.

ಪ್ರಶ್ನೆ: ಪ್ರತ್ಯೇಕ ಲಿಂಗಾಯತ ಧರ್ಮ ಈ ಬಾರಿಯ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ?

ಉತ್ತರ: ಯಾವುದೇ ಕಾರಣಕ್ಕೂ ಇಲ್ಲ. ಭಾರತದಲ್ಲಿ ಹಿಂದೂ ಧರ್ಮ ಬಿಟ್ಟರೆ ಉಳಿದೆಲ್ಲವೂ ಗೌಣ. ನಮ್ಮದು ಅಖಂಡ ಹಿಂದೂ ರಾಷ್ಟ್ರ. ಯಾವುದೇ ಧರ್ಮದ ವಿಷಯ ಅವರವರಿಗೆ ಬಿಟ್ಟಿದ್ದು. ಅದು ಚುನಾವಣೆಯಲ್ಲಿ ಬರುವುದೇ ಇಲ್ಲ.

ಪ್ರಶ್ನೆ; ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಿಮ್ಮ ನೀಲನಕ್ಷೆ ಏನು ?

ಉತ್ತರ: ಮಹದಾಯಿ ನೀರನ್ನು ತ್ವರಿತವಾಗಿ ತರಬೇಕು ಎಂಬ ಆಲೋಚನೆ ಇದೆ. ಇದರಿಂದ ಸವದತ್ತಿ ಹಾಗೂ ರಾಮದುರ್ಗದ ಜನರಿಗೆ ಬಹಳ ಅನುಕೂಲವಾಗಲಿದೆ. ಇದಲ್ಲದೇ ಬೆಳಗಾವಿ ನಗರಕ್ಕೆ ವರ್ಷದ 12 ತಿಂಗಳೂ ನಿರಂತರವಾಗಿ ನೀರು ಸಿಗುವಂತೆ ಮಾಡಲು ಮಹಾರಾಷ್ಟ್ರದ ತಿಲಾರಿ ಡ್ಯಾಮ್‌ದಿಂದ ನೀರು ತರುವ ಯೋಜನೆ ಇದೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.