ಗುರುವಿನ ಕೃಪೆಗಾಗಿ ಅಂತರಂಗ ಶುದ್ಧಿ ಅಗತ್ಯ: ಶ್ರೀ

ತಂತ್ರಜ್ಞಾನದ ಆಧುನಿಕ ದಿನಗಳಲ್ಲಿ ಆಧ್ಯಾತ್ಮಿಕ ಒಲವು ಹೊಂದಿರುವ ಇಲ್ಲಿಯ ಜನರು ಧನ್ಯರು

Team Udayavani, Aug 30, 2022, 6:37 PM IST

ಗುರುವಿನ ಕೃಪೆಗಾಗಿ ಅಂತರಂಗ ಶುದ್ಧಿ ಅಗತ್ಯ: ಶ್ರೀ

ಮೂಡಲಗಿ: ಅಂತರಂಗವನ್ನು ಶುದ್ಧವಾಗಿರಿಸಿಕೊಂಡು ಗುರುವಿನ ಜ್ಞಾನದ ಮಾರ್ಗದಲ್ಲಿ ಸಾಗಿದರೆ ಮಾತ್ರ ದೈವಿ ಕೃಪೆಯಾಗುವುದು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಡಾ| ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ಕಲ್ಲೋಳಿಯ ಶ್ರೀ ಸಿದ್ಧಾರೂಢ ಮಠದ ವೇದಾಂತ ಪರಿಷತ್ತಿನ ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ಮನಸ್ಸು ಸ್ವತ್ಛವಾಗಿರಬೇಕು ಎಂದರು.ಜಗತ್ತಿನಲ್ಲಿ ಹೊರ ಕಾಣುವ ಲೌಕಿಕ ಸಂಗತಿಗಳನ್ನು ಪ್ರಾಪ್ತಗೊಳಿಸಿಕೊಳ್ಳುವುದು ಸುಲಭವಾಗಿದೆ.

ಆದರೆ ಮನುಷ್ಯನ ಆಂತರಿಕ ಶುದ್ಧಿಯು ಕೇವಲ ಗುರುವಿನಿಂದ ಆಗುವಂತದ್ದು. ಅಂತಹ ಸಾತ್ವಿಕ ಸ್ವರೂಪವನ್ನು ಮನಷ್ಯನು ತನ್ನೊಳಗೆ ಕಾಣಲು ಸತು³ರುಷರು, ಗುರುಗಳ ನುಡಿ ಬೇಕು ಎಂದರು. ಸಿದ್ಧಾರೂಢರಂತ ಮಹಾನ್‌ ದೈವಿ ಪುರುಷರು ಕಲ್ಲೋಳಿಯ ನೆಲವನ್ನು ಸ್ಪರ್ಷಿಸಿದ್ದರ ಕಾರಣಕ್ಕಾಗಿ 50 ವರ್ಷಗಳಿಂದ ವೇದಾಂತ ಪರಿಷತ್ತು ಸಾಗಿ ಬಂದಿರುವುದು ಇಲ್ಲಿಯ ಜನರ ದೈವ ಭಕ್ತಿ, ಸಂಸ್ಕಾರವನ್ನು ಬಿಂಬಿಸುತ್ತದೆ. ತಂತ್ರಜ್ಞಾನದ ಆಧುನಿಕ ದಿನಗಳಲ್ಲಿ ಆಧ್ಯಾತ್ಮಿಕ ಒಲವು ಹೊಂದಿರುವ ಇಲ್ಲಿಯ ಜನರು ಧನ್ಯರು ಎಂದು ಶ್ಲಾಘಿಸಿದರು.

ಇಂಚಲದ ಶ್ರೀ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ|ಶಿವಾನಂದ ಭಾರತಿ ಸ್ವಾಮೀಜಿ ಮಾತನಾಡಿ, ಜಗತ್ತಿನ ಮತ್ತು ದೇವಲೋಕದ ಎಲ್ಲವನ್ನು ಪಡೆದುಕೊಳ್ಳುವುದಕ್ಕೆ ಗುರುವಿನ ನಡೆಯಲ್ಲಿ ನಡೆಯುವುದಾಗಿದೆ.ಅಂಥ ಭಾಗ್ಯಕ್ಕಾಗಿ ಪಾವನ ಪುರುಷರ ಮಾರ್ಗದರ್ಶನ ಬೇಕು ಎಂದರು. ಹಂಪಿ ಹೇಮಕೂಟದ ಶಿವರಾಮಾವಧೂತ ಆಶ್ರಮದ ವಿದ್ಯಾನಂದ ಸ್ವಾಮೀಜಿ, ಮಹಾಲಿಂಗಪುರದ ಸಿದ್ಧಾರೂಢ ಆಶ್ರಮದ ಸಹಜಾನಂದ ಸ್ವಾಮೀಗಳು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ಚಿತ್ರದುರ್ಗದ ಶಿವಲಿಂಗಾನಂದ ಸ್ವಾಮೀಜಿ, ಖುರ್ದಕಂಚನಳ್ಳಿಯ ಸುಬ್ರಹ್ಮಣ್ಯ ಸ್ವಾಮೀಜಿ, ದಾವಣವೇರಿಯ ಶಿವಾನಂದ ಸ್ವಮೀಜಿ, ಹರಿದ್ವಾರದ ಆಚಾರ್ಯ ದಿವ್ಯಚೈತನ್ಯಜೀ ಮಹಾರಾಜ, ಹುಬ್ಬಳ್ಳಿ ಸಿದ್ಧಾರೂಢಮಠದ ಸಚ್ಚಿದಾನಂದ ಸ್ವಾಮೀಜಿ, ಹರಳಕಟ್ಟಿಯ ನಿಜಗುಣ ಸ್ವಾಮೀಜಿ, ಹುಬ್ಬಳ್ಳಿಯ ರಾಮಾನಂದ ಭಾರತಿ ಸ್ವಾಮೀಜಿ, ಚಿದಾನಂದ ಸ್ವಾಮೀಜಿ, ನಿಂಗಯ್ಯ ಸ್ವಾಮೀಜಿ, ತೊಂಡಿಕಟ್ಟಿಯ ಅಭಿನವ ವೆಂಕಟೇಶ ಮಹಾರಾಜರು, ಮಲ್ಲೇಶ್ವರ ಶರಣರು, ಇಂಚಲದ ಪೂರ್ಣಾನಂದ ಭಾರತಿ ಸ್ವಾಮೀಜಿ, ಮುಕ್ತನಂದ ಸ್ವಾಮೀಜಿ, ಹನುಮದಾಸ ಸ್ವಾಮೀಜಿ ವೇದಿಕೆಯಲ್ಲಿದರು. ಬೀದರದ ಗುರುದೇವ ಆಶ್ರಮದ ಗಣಪತಿ ಮಹಾರಾಜರು ನಿರೂಪಿಸಿದರು. ಸಮಾರಂಭದ ಪೂರ್ವದಲ್ಲಿ ಸಿದ್ಧಾರೂಢರ ರಥೋತ್ಸವ, ಸಿದ್ಧಾರೂಢರ ಭಾವಚಿತ್ರ ಮೆರವಣಿಗೆ ಜರುಗಿತು. ಅನ್ನ ಸಂತರ್ಪಣೆ ಜರುಗಿತು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

Belagavi1

Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.