
ಹೋರಾಟದಲ್ಲಿ ಪಾಲ್ಗೊಳ್ಳಲು ಮನವಿ
ಅಕಾಲಿಕ ಮಳೆಗೆ ನಾಶವಾಗಿರುವ ಬೆಳೆಗೆ ಪರಿಹಾರ ಘೋಷಣೆ ಮಾಡಬೇಕು.
Team Udayavani, Dec 10, 2021, 6:05 PM IST

ಅಡಹಳ್ಳಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ವೇಳೆ ಸರ್ಕಾರಕ್ಕೆ ತಮ್ಮ ಅಹವಾಲನ್ನು ಹೋರಾಟದ ಮೂಲಕ ಸಲ್ಲಿಸಿ ಸರ್ಕಾರದ ಗಮನ ಸೆಳೆಯಲಾಗುವುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಜಿಲ್ಲಾ ಅಧ್ಯಕ್ಷ ಈರನಗೌಡ ಪಾಟೀಲ ಮನವಿ ಮಾಡಿದರು.
ಕಟಗೇರಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ನಡೆದ ರೈತ ಸಂಘ ಹಾಗೂ ಹಸಿರುಸೇನೆ ಸಂಘದ ಸದಸ್ಯರುಗಳ ಸಭೆಯಲ್ಲಿ ಅವರು ಮಾತನಾಡಿದರು. ಬೆಳಗಾವಿಯಲ್ಲಿ ಡಿ.13ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಜಿಲ್ಲಾದ್ಯಂತ ಅಕಾಲಿಕ ಮಳೆಗೆ ನಾಶವಾಗಿರುವ ಬೆಳೆಗೆ ಪರಿಹಾರ ಘೋಷಣೆ ಮಾಡಬೇಕು.
ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಯವರು ಕಬ್ಬಿನ ದರ ನಿಗದಿ ಪಡಿಸಬೇಕು, ಸಿ2 ಪ್ಲಸ್ 50% ಕನಿಷ್ಟ ಬೆಂಬಲ ಬೆಲೆ ಕಾನೂನಾತ್ಮಕವಾಗಿ ಜಾರಿಗೊಳಿಸಿ ವಿದ್ಯುತ್ ಖಾಸಗೀಕರಣ ಹಿಂಪಡೆಯಬೇಕು, ರಾಜ್ಯ ಸರ್ಕಾರದ ಭೂ ಸುಧಾರಣೆ, ಕಾರ್ಮಿಕರ, ಜಾನುವಾರ ಮಾರಾಟ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು, ಶಿವಸಾಗರ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಿಸಿ ರೈತರ ಕಬ್ಬಿನ ಬಾಕಿ ಹಣ ನೀಡಬೇಕು, ರಾಮದುರ್ಗ ತಾಲೂಕಿನ ಪ್ಯಾರಿ ಶುಗರ್ನವರು ರೈತರಿಂದ 2500 ರೂ. ಕಬ್ಬಿನ ದರದ ಒಪ್ಪಿಗೆ ಪತ್ರ ಪಡೆದು ಕಬ್ಬು ಕಟಾವಿಗೆ ಆದೇಶ ನೀಡುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಮದುರ್ಗ ಸುತ್ತಲಿನ ಸಕ್ಕರೆ ಕಾರ್ಖಾನೆಯವರು ನೀಡುವ ಸ್ಪರ್ಧಾತ್ಮಕ ದರ 2700 ನೀಡುವಂತೆ ಪ್ಯಾರಿ ಶುಗರ್ನವರಿಂದಲೂ 2700 ರೂ. ದರ ಕೋಡಿಸಬೇಕು. ಮುಧೋಳ ರನ್ನ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ತೇರದಾಳ ಸಾವರಿನ್ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಬರಬೇಕಾದ 21 ಕೋಟಿ ರೂ. ಕಬ್ಬಿನ ಬಾಕಿ ಹಣ ಕೊಡಿಸಿ ಪುನಃ ಕಾರ್ಖಾನೆ ಪ್ರಾರಂಭಿಸುವ ಕುರಿತು ಸರ್ಕಾರದ ಗಮನ ಸೆಳೆಯಲು ರೈತರ ಆಂದೋಲನ ನಡೆಸಲಾಗುತ್ತಿದ್ದು, ಡಿ.12ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯ ಹಿಂಭಾಗದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಆಂದೋಲನದಲ್ಲಿ ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ ಹಾಗೂ ಹಾವೇರಿ ಜಿಲ್ಲೆಯ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕು ಅಧ್ಯಕ್ಷ ಬಾಳಪ್ಪ ಬಿರಾದಾರಪಾಟೀಲ, ಅಥಣಿ ತಾಲೂಕು ಅಧ್ಯಕ್ಷ ರಾವಸಾಬ ಜಗತಾಪ, ರೈತ ಮುಖಂಡ ಶಿವಪುತ್ರ ಜಕಬಾಳ, ಯಮನಪ್ಪ ಚಿಂಚನೂರ, ಉದಕುಮಾರ ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.