ಚರ್ಚೆಗೆ ಕಾರಣವಾದ ಅರವಿಂದ ಪಾಟೀಲ ಮೌನ


Team Udayavani, Feb 1, 2021, 1:53 PM IST

Aravind Patil’s silence that caused the debate

ಖಾನಾಪುರ: ಮಾಜಿ ಶಾಸಕ ಅರವಿಂದನ ಪಾಟೀಲ ಬಿಜೆಪಿ ಸೇರ್ಪಡೆ ಕುರಿತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಎಂಇಎಸ್‌ದಲ್ಲಿ ಅಕ್ರೋಶ ವ್ಯಕ್ತವಾಗಿದ್ದರೂ ಮಾಜಿ ಶಾಸಕ ಅರವಿಂದ ಪಾಟೀಲ ಅದಕ್ಕೆ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿರುವುದು ಅಚ್ಚರಿಗೆ ಕಾರಣವಾಗಿದೆ. ತಮ್ಮ ಎಂಇಎಸ್‌ ನಿಷ್ಟೆ ಎಷ್ಟು ಎನ್ನುವದನ್ನು ಅವರು ಪ್ರದರ್ಶಿಸಬೇಕಾಗಿತ್ತಾದರೂ ಅವರು ಮೌನ ತಾಳಿರುವುದು ಉಪಮುಖ್ಯಮಂತ್ರಿಗಳ ಹೇಳಿಕೆಯನ್ನು ಅಪರೋಕ್ಷವಾಗಿ ಬೆಂಬಲಿಸಿದಂತಾಗಿದೆ.

ಅರವಿಂದ ಪಾಟೀಲ ತಮ್ಮ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಿ ತಾವು ಬಿಜೆಪಿ ಸೇರುವ ಗೊಂದಲಕ್ಕೆ ಕೊನೆ ಹಾಡಬಹುದಾಗಿತ್ತು. ಆದರೆ ಈ ಕುರಿತು ತುಟಿಪಿಟಕ್ಕೆನ್ನದೆ ಮೌನವಾಗಿದ್ದು ಒಂದು ಕಾಲು ಎಂಇಎಸ್‌ ಕಡೆಗೆ, ಇನ್ನೊಂದು ಕಾಲು ಬಿಜೆಪಿಯತ್ತ ಎನ್ನುವ ಅಚ್ಚರಿಯ ನಡುವಳಿಕೆ ಪ್ರದರ್ಶಿಸುತ್ತಿದ್ದಾರೆ. ಗಡಿ ಮತ್ತು ಭಾಷೆ ವಿಷಯಗಳ ಇವರ ಹೋರಾಟ ಎಷ್ಟು ನಾಟಕೀಯ ಎನ್ನುವದು ಇಲ್ಲಿ ಅನಾವರಣಗೊಂಡಿದೆ. ಡಿಸಿಎಂ ಲಕ್ಷ್ಮಣ ಸವದಿ ರೆಡ್‌ ಕಾಪೆìಟ್‌ ಹಾಸಿ ಇವರನ್ನು ಬಿಜೆಪಿಗೆ ಕರೆದಿದ್ದಾರಾದರೂ ತಾವು ನಂಬಿದ ತತ್ವ ಸಿದ್ಧಾಂತಗಳಿಗೆ ಬಲಿ ಕೊಟ್ಟು ಪಾಟೀಲ ಬಿಜೆಪಿಗೆ ಜಿಗಿಯುವರೇ ಎನ್ನುವುದು ಬಿಜೆಪಿ ಮತ್ತು ಎಂಇಎಸ್‌ ಪಕ್ಷಗಳಲ್ಲಿ ಭಾರಿ ಚರ್ಚೆ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ.

ವಿಚಿತ್ರ ಎಂದರೆ ಬಿಜೆಪಿಯಲ್ಲಿ ಕೂಡ ಒಳಗಡೆ ಇರುವ ಗುಂಪುಗಾರಿಕೆಯಿಂದ ಹಲವು ನಾಯಕರು ಮಾಜಿ ಶಾಸಕ ಅರವಿಂದ ಪಾಟೀಲರನ್ನು ಅಪ್ಪಿ ಕೊಂಡು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಹಲವರು ಅವರ ಆಗಮನ ವಿರೋ  ಧಿಸಲು ಸಜ್ಜಾಗುತ್ತಿದ್ದಾರೆ. ಎಂಇಎಸ್‌ ಹಾಗೂ ಬಿಜೆಪಿಯವರು ತಮ್ಮ ತಮ್ಮ ಹೈಕಮಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಖಾನಾಪುರ ಮತ ಕ್ಷೇತ್ರದಲ್ಲಿ ಮಾಜಿ ಶಾಸಕ ಅರವಿಂದ ಪಾಟೀಲರದೇ ಪ್ರಮುಖ ಚರ್ಚೆ ವಿಷಯವಾಗಿದೆ. ಎಂಇಎಸ್‌ ಕಟ್ಟಾ ಕಾರ್ಯಕರ್ತರಿಗೆ ಅರವಿಂದ ಪಾಟೀಲರ ಡಬಲ್‌ ಗೇಮ್‌ನಿಂದ ಶಾಕ್‌ ಆಗಿದ್ದರೆ ಅರವಿಂದ ಪಾಟೀಲರಿಗೆ ತಾವು ಬಿಜೆಪಿ ಸೇರ್ಪಡೆಯಾದರೆ ಎಲ್ಲಿ ಎಂಇಎಸ್‌ ಕಾರ್ಯಕರ್ತರು ತಮ್ಮಿಂದ ದೂರ ಸರಿಯುತ್ತಾರೊ ಎನ್ನುವ ಅಂಜಿಕೆ ಭಯ ಕೂಡ ಇದ್ದಂತಿದೆ.

ಇದನ್ನೂ ಓದಿ:ಕೇಂದ್ರ ಬಜೆಟ್ 2021 : ವೈಯಕ್ತಿಕ ತೆರಿಗೆದಾರರಿಗೆ ದೊಡ್ಡ ನಿರಾಶೆ !

ಹೀಗಾಗಿ ಅವರು ಕಾಯ್ದು ನೋಡುವ ತಂತ್ರಕ್ಕೆ ಶರಣಾದಂತಿದೆ. ಅಥವಾ ನಿಜವಾಗಿ ಅರವಿಂದ ಪಾಟೀಲರು ತಮ್ಮ ಮುಂದಿನ ನಡೆ ಬಗ್ಗೆ ತಾವೇ ಗೊಂದಲದಲ್ಲಿ ಇದ್ದಂತಿದೆ. ಕಳೆದ ವಿಧಾನಸಭೆ ಚುನಾವಣೆ ಕಾಲಕ್ಕೆ ಬಿಜೆಪಿ ಸೇರ್ಪಡೆ ವಿಚಾರ ಬಂದಾಗಲೂ ತಾವು ಬಿಜೆಪಿ ಸೇರ್ಪಡೆಯಾಗುತ್ತಿಲ್ಲ ಎಂದು ಹೇಳಿದ್ದರು. ಆದರೆ ಇದೀಗ ಅವರ ವರ್ತನೆ ಬದಲಾಗಿದ್ದು ಎಂಇಎಸ್‌ ಹೋರಾಟಕ್ಕೆ ತಿಲಾಂಜಲಿ ನೀಡುವ ಸಾಧ್ಯತೆ ದಟ್ಟಗಾಗಿ ಕಂಡು ಬರುತ್ತಿದೆ. ಇವರು ಎಂಇಎಸ್‌ನಲ್ಲಿ ಉಳಿದರೂ ಬಿಜೆಪಿ ಸೇರ್ಪಡೆಯಾದರೂ ಎರಡು ಕಡೆ ಪ್ರಬಲ ಬಂಡಾಯ ಎದುರಿಸಬೇಕಾಗುವುದರಲ್ಲಿ ಯಾವ ಅನುಮಾನವೂ ಇಲ್ಲ.

ಜಗದೀಶ ಹೊಸಮನಿ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.