ಮುಂಜಾಗ್ರತೆಯಿಂದ ಕೋವಿಡ್ ತಡೆ ಸಾಧ್ಯ


Team Udayavani, Sep 9, 2020, 3:15 PM IST

ಮುಂಜಾಗ್ರತೆಯಿಂದ ಕೋವಿಡ್ ತಡೆ ಸಾಧ್ಯ

ಯಮಕನಮರಡಿ: ಮುಂಜಾಗ್ರತೆಯಿಂದ ಕೊರೊನಾ ತಡೆ ಸಾಧ್ಯವಿದೆ. ಸೋಂಕಿಗೆ ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಲಿಂ| ಶ್ರೀ ಗುರುಸಿದ್ಧ ಮಹಾಸ್ವಾಮಿಗಳ ಸಭಾಮಂಟಪದಲ್ಲಿಜಿಲ್ಲಾಮಟ್ಟದ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸಿ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಯೋಧರಿಗೆ ಸೋಂಕು ತಪಾಸಣೆ ಮಾಡುವ ಕ್ರಮವನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಡಲಾಗಿದೆ. ಕೋವಿಡ್ ತಡೆಗಟ್ಟಲು ರಾಜ್ಯಾದ್ಯಂತ್ಯ ಕಾಂಗ್ರೆಸ್‌ ಪಕ್ಷದಿಂದ ಮುಂಜಾಗ್ರತೆ ಕ್ರಮಗಳನ್ನು ಹಮ್ಮಿಕೊಂಡು ಜಿಲ್ಲಾಮಟ್ಟದ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಾಳೆಯಿಂದ ಗೋಕಾಕ, ಚಿಕ್ಕೋಡಿಯಲ್ಲಿ ಆರಂಭಿಸಿ ಸಂಪೂರ್ಣವಾಗಿ ತಪಾಸಣೆ ಮಾಡಲಾಗುವುದು. ಯಮಕನಮರಡಿ ಕ್ಷೇತ್ರದ 33 ಗ್ರಾಪಂಗಳಲ್ಲಿ ಪ್ರತಿ ಇಬ್ಬರು ಯೋಧರನ್ನು ನೇಮಿಸಿ ಪ್ರತಿ ಮನೆ-ಮನೆಗೆತೆರಳಿ ಜನರ ಆರೋಗ್ಯ ತಪಾಸಣೆ ಮಾಡುವ ಕಾರ್ಯ ಆರಂಭಿಸಲಾಗುವುದು ಎಂದರು.

ಕೋವಿಡ್ ವೈರಸ್‌ ತಡೆಯುವಲ್ಲಿ ಶ್ರಮ ವಹಿಸಿದ ಯುವಕರಿಗೆ, ಯೋಧರಿಗೆ ಒಂದು ದಿನದ ತರಬೇತಿ ಹಾಗೂ ಕಿಟ್‌ ವಿತರಿಸುವ ಮೂಲಕ ಅವರಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ಆಸಕ್ತಿ ವಹಿಸಲು ಪ್ರೋತ್ಸಾಹಿಸುವುದರ ಜೊತೆ ಕಾಂಗ್ರೆಸ್‌ಪಕ್ಷ ಬೇರುಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಲಕ್ಷ್ಮಣರಾವ್‌ ಚಿಂಗಳೆ, ವೀರಕುಮಾರ ಪಾಟೀಲ, ರಾಮಣ್ಣಾ ಗುಳ್ಳಿ, ಅರುಣ ಕಟಾಂಬಳೆ, ಸುನೀಲ ಹಮ್ಮಣ್ಣವರ, ವೀರಣ್ಣಾ ಬಿಸಿರೊಟ್ಟಿ, ಸಿದ್ದಗೌಡ ಸುಣಗಾರ, ಮಹಾಂತೇಶ ಮಗದುಮ್ಮ, ರವೀಂದ್ರ ಜಿಂಡ್ರಾಳಿ, ದಸ್ತಗೀರ ಬಸ್ಸಾಪುರಿ, ಕಿರಣ ರಜಪೂತ, ಮಂಜುನಾಥ ಪಾಟೀಲ, ಮಲ್ಲಗೌಡ ಪಾಟೀಲ,ಮಾರುತಿ ಬೆನಕೊಳಿ, ಮಹಾದೇವ ಪಟೋಳಿ ಇದ್ದರು.

………………………………………………………………………………………………………………………………………………………

 ಜನರ ಆರೋಗ್ಯದತ್ತ ಗಮನ ಹರಿಸಲು ಸೂಚನೆ : ಮೂಡಲಗಿ: ಕೋವಿಡ್‌-19ರ ಪ್ರವೇಶದಿಂದಾಗಿ ದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧೈರ್ಯಗುಂದಿದ ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಬಡವರಿಗೆ ಆರೋಗ್ಯಹಸ್ತ ಚಾಚಿದ್ದು, ಜನರ ಆರೋಗ್ಯ ಸುರಕ್ಷತೆಯ ಕಡೆಗೆ ಗಮನಹರಿಸಬೇಕೆಂದು ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯನಾವಲಗಟ್ಟಿ ಕರೆ ನೀಡಿದರು.

ಕೌಜಲಗಿ ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಜರುಗಿದ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪಕ್ಷದ ಕೋವಿಡ್‌-19ವಾರಿಯಾರ್ಸ್‌ಗಳ “ಆರೋಗ್ಯ ಹಸ್ತ’ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ಅಧಿ ಕಾರದಲ್ಲಿಲ್ಲದಿದ್ದರೂ ಜನಸಾಮಾನ್ಯರ ಸೇವೆಗೆ ಸದಾ ಕಂಕಣಬದ್ಧವಾಗಿದೆ. ಪ್ರತಿ ಗ್ರಾಮ ಮಟ್ಟದಲ್ಲಿ ಓರ್ವ ಕಾಂಗ್ರೆಸ್‌ ಪಕ್ಷದ “ಆರೋಗ್ಯ ಹಸ್ತ’ ಕಾರ್ಯಕರ್ತ ಸೇವೆ ಸಲ್ಲಿಸಲಿದ್ದಾನೆ ಎಂದು ನಾವಲಗಟ್ಟಿ ಹೇಳಿದರು.

ಆರೋಗ್ಯ ಹಸ್ತ ಕಾರ್ಯಕ್ರಮದ

ಅರಭಾವಿ ಕ್ಷೇತ್ರದ ಸಂಚಾಲಕ ಸದಾನಂದ ಡಂಗನವರ ಮಾತನಾಡಿ, ಕಾಂಗ್ರೆಸ್‌ ದೀನದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ, ಬಡವರ ಪಕ್ಷವಾಗಿದೆ. ಅವರ ಆರೋಗ್ಯ ರಕ್ಷಣೆಯೇ ಪಕ್ಷದ ಪ್ರಮುಖ ಕರ್ತವ್ಯವಾಗಿದೆ ಎಂದರು.

ಮುಖಂಡ ಅರವಿಂದ ದಳವಾಯಿ ಮಾತನಾಡಿದರು. ಡಾ|ಮಾರ್ಟಿನ್‌ ಅವರು ಆರೋಗ್ಯಹಸ್ತ ಕಾರ್ಯಕರ್ತರಿಗೆ ತರಬೇತಿ ನೀಡಿದರು. ಅರಭಾವಿ ಕ್ಷೇತ್ರದ 40 ಕಾರ್ಯಕರ್ತರಿಗೆ ಆರೋಗ್ಯ ಹಸ್ತ ಕಿಟ್‌ ವಿತರಿಸಲಾಯಿತು. ಅರಭಾವಿ ಕ್ಷೇತ್ರದ ನೂತನ ಪದಾಧಿ ಕಾರಿಗಳಿಗೆ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಅಧಿಕಾರ ಹಸ್ತಾಂತರಿಸಿದರು.

ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಇಮಾಮಸಾಬ ಹೂನ್ನೂರ, ಗುಲಾಬ್‌ ಬಾಳೇಕುಂದ್ರಿ, ವಿ.ಪಿ.ನಾಯಿಕ, ಗುರಪ್ಪ ಹಿಟ್ಟಣಗಿ, ಬಸನಗೌಡ ಪಾಟೀಲ (ಪಟಗುಂದಿ), ಸುರೇಶ ಮಗದುಮ್‌, ಚನ್ನಯ್ಯ ನಿರ್ವಾಣಿ,ಹನಮಂತಗೌಡ ಚಿಕ್ಕೇಗೌಡರ, ಶಂಕರ ಸಣ್ಣಮೇತ್ರಿ, ಮೆಹಬೂಬ ಮುಲ್ತಾನಿ, ಸಿದ್ದಪ್ಪ ಸಣ್ಣಕ್ಕಿ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.