![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 28, 2019, 10:30 AM IST
ಬೆಳಗಾವಿ: ಆಟೋ ರಿಕ್ಷಾದಲ್ಲಿ ಗರಿಷ್ಠ ಆರು ವಿದ್ಯಾರ್ಥಿಗಳನ್ನು ಕರೆದೊಯ್ಯುವಂತೆ ಪೊಲೀಸ್ ಕಮೀಷನರ್ ಹೊರಡಿಸಿರುವ ಆದೇಶ ವಿರೋಧಿಸಿ ಚಾಲಕರು ಗುರುವಾರದಿಂದ ಮೂರು ದಿನಗಳ ಕಾಲ ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳಿಸಿದ್ದು, ಇದರಿಂದ ವಿದ್ಯಾರ್ಥಿಗಳು, ಪಾಲಕರು ಪರದಾಡುವಂತಾಯಿತು.
ಆಟೊರಿಕ್ಷಾಗಳನ್ನು ಬಂದ್ ಮಾಡಿ ಹೋರಾಟಕ್ಕಿಳಿದಿರುವ ಚಾಲಕರಿಂದಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರು ಗುರುವಾರ ಪರದಾಡಿದರು. ನಗರದಲ್ಲಿರುವ ಎಲ್ಲ ಶಾಲೆಗಳ ಮುಂದೆ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಆಟೋಗಳಿಲ್ಲದೇ ಕೆಲ ವಿದ್ಯಾರ್ಥಿಗಳು ನಡೆದುಕೊಂಡೇ ಹೋಗಬೇಕಾದ ಅನಿವಾರ್ಯತೆ ಒದಗಿತು.
ಪಾಲಕರು ತಮ್ಮ ಕೆಲಸ ಕಾರ್ಯ ಬಿಟ್ಟು ವಿದ್ಯಾರ್ಥಿಗಳು ದ್ವಿಚಕ್ರ ವಾಹನ, ಕಾರಿನಲ್ಲಿ, ಸೈಕಲ್ ಮೇಲೆ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂತು. ಶಾಲೆಗಳ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು, ಕಾರುಗಳು ಧಾವಿಸಿದ್ದರಿಂದ ಕೆಲಹೊತ್ತು ಸಂಚಾರ ದಟ್ಟಣೆ ಆಗಿತ್ತು.
ಶಾಲೆ ಬಿಡುವ ಸಮಯದಲ್ಲಿ ಶಾಲೆಯ ಸುತ್ತಲೂ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದವು. ಸೇಂಟ್ ಮೇರಿ, ಸೇಂಟ್ ಕ್ಸೇವಿಯರ್, ಸೇಂಟ್ ಪಾಲ್, ಬಿ.ಕೆ. ಮಾಡೆಲ್ ಶಾಲೆ, ಉಷಾತಾಯಿ ಗೋಗಟೆ ಶಾಲೆ ಸೇರಿದಂತೆ ಅನೇಕ ಶಾಲೆಗಳ ಸುತ್ತಲೂ ವಾಹನಗಳು ಜಮಾವಣೆಗೊಂಡಿದ್ದವು. ಮಕ್ಕಳನ್ನು ಹತ್ತಿಸಿಕೊಂಡು ಮನೆ ಸೇರುವಷ್ಟರಲ್ಲಿಯೇ ವಿದ್ಯಾರ್ಥಿಗಳು ಹಾಗೂ ಪಾಲಕರು ಹೈರಾಣಾಗಿದ್ದರು.
ಕ್ಯಾಂಪ್ ಪ್ರದೇಶ ಬುಡಾಪಾ ಘರ್, ಗ್ಲೋಬ್ ಸರ್ಕಲ್, ರೈಲ್ವೆ ಓವರ್ ಬ್ರಿಡ್ಜ್ದಿಂದ ಆರ್ಪಿಡಿ ಕ್ರಾಸ್ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಕಾಂಗ್ರೆಸ್ ರಸ್ತೆಯಲ್ಲಿ ಒಂದು ಕಡೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ ನಿರ್ಮಾಣ ಆಗುತ್ತಿರುವುದರಿಂದ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿತ್ತು. ಕಾಲೇಜು ರಸ್ತೆ, ಚನ್ನಮ್ಮ ವೃತ್ತ, ಬೋಗಾರ್ವೇಸ್, ಆರ್ಟಿಒ ಸರ್ಕಲ್ನಲ್ಲಿಯೂ ದಟ್ಟಣೆ ಹೆಚ್ಚಾಗಿತ್ತು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.