ಬೈಲಹೊಂಗಲ: ಮೌಲಾನಾ ಅಬ್ದುಲ್‌ ಕಲಾಂ ಆಝಾದ ಹೈಸ್ಕೂಲ್‌ ಉಳಿಸಲು ಕರೆ


Team Udayavani, Sep 11, 2024, 10:50 AM IST

Udayavani Kannada Newspaper

ಉದಯವಾಣಿ ಸಮಾಚಾರ
ಬೈಲಹೊಂಗಲ: ಪಟ್ಟಣದ ಮೌಲಾನಾ ಅಬ್ದುಲ್‌ ಕಲಾಮ್‌ ಆಝಾದ ಹೈಸ್ಕೂಲ್‌ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ
ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿದೆ. ಶಾಲೆಯ ಅಭಿವೃದ್ಧಿಯ ಚಿಂತನೆ ಮಾಡಬೇಕಾಗಿದೆ ಎಂದು ಕರ್ನಾಟಕ ಉರ್ದು
ಅಕಾಡೆಮಿ ನಿರ್ದೇಶಕ ಶರೀಫ ಮೊಕಾಶಿ, ಹಳೆಯ ವಿದ್ಯಾರ್ಥಿ ನಜೀರ ತೊಲಗಿ ಹೇಳಿದರು.

ಪಟ್ಟಣದ ಇಂಚಲ ರಸ್ತೆಯ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬ್ದುಲ್‌ ಕಲಾಮ ಆಝಾದ ಹೈಸ್ಕೂಲ್‌ ಸ್ಟುಡೆಂಟ್‌
ಅಲ್ಯಮಿನಿ ಅಸೋಷಿಯನ್‌ ಏರ್ಪಡಿಸಿದ್ದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.

ನಮ್ಮ ಸಮಾಜದ ಮಕ್ಕಳ ಉಜ್ವಲ ಭವಿಷ್ಯದ ಬಗ್ಗೆ ಚಿಂತಿಸುವ ಅವಶ್ಯಕತೆ ಇದೆ. ನಮ್ಮ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಶಾಲೆಯ ಅಭಿವೃದ್ಧಿಗೆ ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಕಮೀಟಿಯವರ ವೈಯಕ್ತಿಕ ಹಿತಾಸಕ್ತಿಯಿಂದ ಶಾಲೆಯ ಅಭಿವೃದ್ಧಿ ಕುಂಠಿತವಾಗಿದೆ.

ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಎರಡು ಕಮೀಟಿಯವರು ಹಿಂಪಡೆಯಬೇಕು. ಎರಡೂ ಕಮೀಟಿಗಳು ರಾಜೀನಾಮೆ ನೀಡಬೇಕೆಂದು ಸಮಾಜ ಬಾಂಧವರು ಆಗ್ರಹಿಸಿದ್ದಾರೆ ಎಂದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಾಜೀದ ಬಾಬಣ್ಣವರ, ನಿರ್ದೇಶಕ ರಫೀಕ ದೇಶನೂರ ಮಾತನಾಡಿ, ನಮ್ಮ ಹಳೆಯ
ವಿದ್ಯಾರ್ಥಿಗಳ ಸಂಘದಿಂದ ಯಾವುದೇ ಅಧ್ಯಕ್ಷ, ಕಮೀಟಿ ಮಾಡುವುದಿಲ್ಲ. ನಮ್ಮ ಮುಖ್ಯ ಉದ್ದೇಶ ಶಾಲೆಯ ಅಭಿವೃದ್ಧಿ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮುಸ್ಲಿಂ ಸಮಾಜದ ಮುಖಂಡರು ಎರಡು ಕಮೀಟಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಅಂಜುಮನ್‌ ಎ-ಇಸ್ಲಾಂ
ಕಮಿಟಿಯವರು ಸೂಕ್ತ ನಿರ್ಧಾರ ಮಾಡಿ, ಶಾಲೆಯನ್ನು ಉಳಿಸಬೇಕು ಎಂದು ಸಲಹೆ ನೀಡಿದರು. ಎರಡು ಕಮೀಟಿಯವರು
ರಾಜೀನಾಮೆ ನೀಡುವುದಾಗಿ ಸಭೆಯಲ್ಲಿ ಘೋಷಿಸಿದರು. ನಂತರ ಒಂದು ಕಮೀಟಿಯ ಅಬ್ದುಲರೆಹಮಾನ ನಂದಗಡ, ಬಾಬಾಸಾಬ ಸುತಗಟ್ಟಿ, ಹಾರೂನ್‌ ಕಿತ್ತೂರ, ಸಮೀವುಲ್ಲಾ ನೇಸರಗಿ, ನಜೀರ ಕಿತ್ತೂರ ರಾಜೀನಾಮೆ ನೀಡಿದರು. ಇನ್ನೊಂದು ಕಮೀಟಿಯ 11 ಜನ ಸದಸ್ಯರಲ್ಲಿ ಅಧ್ಯಕ್ಷರು ಹಾಗೂ ಇನ್ನಿಬ್ಬರು ಮಾತ್ರ ರಾಜೀನಾಮೆ ನೀಡಿದ್ದು, ಉಳಿದವರ ರಾಜೀನಾಮೆ ಪಡೆಯುವುದಾಗಿ ಅಂಜುಮನ್‌ ಎ-ಇಸ್ಲಾಂ ತಿಳಿಸಿದೆ.

ಅಂಜುಮನ್‌ ಎ-ಇಸ್ಲಾಂ ಕಮಿಟಿ ಅಧ್ಯಕ್ಷ ಡಾ.ಐಜಾಜ ಬಾಗೇವಾಡಿ, ಇಮ್ತಿಯಾಜ ನೇಸರಗಿ, ಮದರಸಾದ ಮುಖ್ಯಸ್ಥ ಶೌಕತಲಿ
ಬಾದಿ, ಪುರಸಭೆ ಉಪಾಧ್ಯಕ್ಷ ಬುಡ್ಡೆಸಾಬ ಶಿರಸಂಗಿ, ಶಬ್ಬೀರ ಕುದರಿ, ಅಣ್ಣಾಸಾಹೇಬ ಮಾನೂರಶೇಖ, ಜಮೀಲಹ್ಮದ ಸಂಗೊಳ್ಳಿ,
ಇಮಾಮಸಾಬ ನದಾಫ, ಮೌಲಾನಾ ಅಕೀಲ್‌, ಬುಡ್ಡೆಸಾಬ ದಾಸ್ತಿಕೊಪ್ಪ, ಮಹ್ಮದಷಾ ನದಾಫ, ರಿಯಾಜಹ್ಮದ ಮಿರ್ಜನ್ನವರ ಸೇರಿದಂತೆ ಸಮಾಜದದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.