ಬೈಲಹೊಂಗಲ: ದೃಷ್ಟಿ ವಿಶೇಷ ಚೇತನರಿಗೆ ಹೊಸ ತಂತ್ರಾಂಶ


Team Udayavani, Jul 29, 2024, 4:54 PM IST

ಬೈಲಹೊಂಗಲ: ದೃಷ್ಟಿ ವಿಶೇಷ ಚೇತನರಿಗೆ ಹೊಸ ತಂತ್ರಾಂಶ

ಉದಯವಾಣಿ ಸಮಾಚಾರ
ಬೈಲಹೊಂಗಲ: ದೃಷ್ಟಿ ದೋಷ ಇರುವವರಿಗೆ ಕಂಪ್ಯೂಟರ್‌ ಬಳಕೆ ಸರಾಗಗೊಳಿಸಲು ಭಾರತೀಯ ಮೂಲದ ಅಮೆರಿಕದ ಕ್ಯಾಲಿಫೋರ್ನಿಯಾ ನಿವಾಸಿಯೊಬ್ಬರು ಅಭಿವೃದ್ಧಿಪಡಿಸಿದ ತಂತ್ರಾಂಶಕ್ಕೆ ಕನ್ನಡ ಭಾಷೆ ಅಳವಡಿಸುವ ಕಾರ್ಯದಲ್ಲಿ ಪಟ್ಟಣದ ತಾಪಂ ಉದ್ಯೋಗಿ, ದೃಷ್ಟಿ ವಿಶೇಷಚೇತನ ಸಿದ್ಧಲಿಂಗೇಶ್ವರ ಇಂಗಳಗಿ ಅಪಾರ ನೆರವು ನೀಡಿದ್ದಾರೆ.

ಅಮೆರಿಕದಲ್ಲಿ ವಾಸವಿರುವ ಸುರೇಶ್‌(65) ಎಂಬುವರು ದೃಷ್ಟಿ ವಿಶೇಷಚೇತನರ ಅನುಕೂಲಕ್ಕಾಗಿ ಹಲವು ಕಾರ್ಯ ಕೈಗೊಂಡಿದ್ದಾರೆ. ದೃಷ್ಟಿ ವಿಶೇಷ ಚೇತನರಿಗೆ ಕಂಪ್ಯೂಟರ್‌ ಬಳಕೆ ಸರಳಗೊಳಿಸುವ ಸಲುವಾಗಿ ಸುರೇಶ್‌ ಅವರು ಹಿಯರ್‌ ಟು ರೀಡ್‌ ತಂತ್ರಾಂಶ ಅಭಿವೃದ್ಧಿಪಡಿಸಿದ್ದಾರೆ. ತಂತ್ರಾಂಶದಲ್ಲಿ ಕನ್ನಡ ಭಾಷೆಯ ಸಮರ್ಪಕ ಅಳವಡಿಕೆಗೆ ದೃಷ್ಟಿವಿಶೇಷ ಚೇತನ ಸಿದ್ಧಲಿಂಗೇಶ್ವರ ಇಂಗಳಗಿ ಅವರು ಸುರೇಶ ಅವರಿಗೆ ನೆರವಾಗಿದ್ದಾರೆ.

ತಂತ್ರಾಂಶದಲ್ಲಿ ಕನ್ನಡ ಭಾಷೆ ಬಳಸುವಾಗ ಉಂಟಾಗುವ ಸಮಸ್ಯೆಗಳ ಪರಿಹಾರ ಕುರಿತು ಸುರೇಶ್‌ ಅವರು ಸಿದ್ಧಲಿಂಗೇಶ್ವರ ಅವರ ನೆರವು ಪಡೆದಿದ್ದು ಇದೀಗ ಹಿಯರ್‌ ಟು ರೀಡ್‌ ತಂತ್ರಾಂಶ ಕನ್ನಡ ಭಾಷೆಯಲ್ಲಿ ಅತ್ಯಂತ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿದೆ. ಹಿಯರ್‌ 2 ರೀಡ್‌ ತಂತ್ರಾಂಶಕ್ಕೆ ಯಾವುದೇ ಶುಲ್ಕ ಇಲ್ಲ. ತಂತ್ರಾಂಶವನ್ನು ಅವರ ಜಾಲತಾಣ https://hear2read.orgಕ್ಕೆ ಹೋಗಿ ಮೊದಲು nvda screenreader ತಂತ್ರಾಂಶವನ್ನು nvaccess.org ಜಾಲತಾಣದಿಂದ download ಮಾಡಿ ಇನ್ಸ್ಟಾಲ್‌ ಮಾಡಬೇಕು. ಈ ಬಗ್ಗೆ ಸಿದ್ಧಲಿಂಗೇಶ್ವರ ಮೊ. 8792639989 ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ತಂತ್ರಾಂಶ ಮಾಡುವುದೇನು?: ಈ ತಂತ್ರಾಂಶ ಕಂಪ್ಯೂಟರ್‌ ಪರದೆ ಮೇಲೆ ಮೂಡುವ ಅಕ್ಷರ, ಶಬ್ದಗಳನ್ನು ಓದಿ ಹೇಳುತ್ತದೆ. ಇದರಿಂದ ದೃಷ್ಟಿ ವಿಶೇಷ ಚೇತನರಿಗೆ ಕಂಪ್ಯೂಟರ್‌ನಲ್ಲಿ ಯಾವುದೇ ದೋಷವಿಲ್ಲದೆ ಟೈಪ್‌ ಮಾಡಲು ಅನುಕೂಲ ಮಾಡಿಕೊಡುತ್ತದೆ. ಕನ್ನಡ ಸೇರಿದಂತೆ ಬಹುತೇಕ ಭಾರತೀಯ ಭಾಷೆಗಳಲ್ಲಿ ಈ ತಂತ್ರಾಂಶ ಮೂಲಕ ಕಾರ್ಯ ನಿರ್ವಹಿಸ ಬಹುದಾಗಿದೆ. ಕನ್ನಡ ಭಾಷೆ ಅಳವಡಿಕೆಗೆ ಬೇಕಾದ ಅಗತ್ಯ ಸಹಕಾರವನ್ನು ಸಿದ್ಧಲಿಂಗೇಶ್ವರ ನೀಡಿದ್ದಾರೆ.

ಸಾಧನೆ ಮಾಡಬೇಕಾದರೆ ಯಾವುದೂ ಕೂಡ ಕಠಿಣವಲ್ಲ. ಸತತ ಪರಿಶ್ರಮದಿಂದ ಹಿಯರ್‌ ಟು ರೀಡ್‌ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ದೃಷ್ಟಿ ವಿಶೇಷಚೇತನವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಇದು ತುಂಬಾ ಅನುಕೂಲವಾಗಿದೆ. ಇದರಿಂದ ವೆಬ್‌ ಜಾಲತಾಣದಲ್ಲಿ ಬರುವ ಪಠ್ಯಪುಸ್ತಕಗಳನ್ನು ಡೌನ್‌ ಲೋಡ್‌ ಮಾಡಿಕೊಳ್ಳಲು ಮತ್ತು ಓದಲು ನೆರವಾಗುತ್ತದೆ.
●ಸಿದ್ಧಲಿಂಗೇಶ್ವರ ಇಂಗಳಗಿ,
ದೃಷ್ಟಿ ವಿಶೇಷಚೇತನರು, ತಾಪಂ ಉದ್ಯೋಗಿ, ಬೈಲಹೊಂಗಲ.

*ಎಂ.ಆರ್.ಬಡೇಘರ

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.