Belagavi; ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ; ಅಸ್ವಸ್ಥ ವಿದ್ಯಾರ್ಥಿಗಳು ಆಸ್ಪತ್ರಗೆ ದಾಖಲು
Team Udayavani, Jan 11, 2024, 2:03 PM IST
ಬೆಳಗಾವಿ: ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ ಶಾಲಾ ಬಾಲಕರು ಅಸ್ವಸ್ಥರಾದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉ. ಖಾನಾಪುರ ಗ್ರಾಮದಲ್ಲಿ ನಡೆದಿದೆ. ಬಾಲಕರನ್ನು ಸಂಕೇಶ್ವರದ ಸರಕಾರಿ ಸೇರಿ ಕೆಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರಕಾರಿ ಶಾಲೆಯೊಂದರಲ್ಲಿ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯ ಹಾಲು ನೀಡಲಾಗಿತ್ತು. ಆದರೆ ಹಾಲಿನಲ್ಲಿ ಹಲ್ಲಿ ಬಿದ್ದಿರುವ ವಿಷಯವು ಮಕ್ಕಳು ಹಾಲು ಕುಡಿದ ಬಳಿಕ ಬಹಿರಂಗವಾಗಿತ್ತು.
ಬಳಿಕ ಎರಡು ಅಂಬ್ಯುಲನ್ಸ್ ಹಾಗೂ ಕೆಲವು ಖಾಸಗಿ ವಾಹನಗಳ ಮೂಲಕ ಸಂಕೇಶ್ವರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಲ್ವರು ಮಕ್ಕಳನ್ನು ಹುಕ್ಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:Puttige Paryaya: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜನ್ಮಭೂಮಿಯ ಗೌರವಾಭಿನಂದನೆ
ಘಟನೆಯ ಸುದ್ದಿ ತಿಳಿದ ಬಳಿಕ ಮಕ್ಕಳ ಪಾಲಕರು ಗಾಬರಿಗೊಂಡು ಸಂಕೇಶ್ವರ ಸರಕಾರಿ ಆಸ್ಪತ್ರೆಗೆ ಧಾವಿಸಿ ಮಕ್ಕಳ ಮುಖ ನೋಡಲು ಪರದಾಡುತ್ತಿದ್ದಾರೆ. ಸುದ್ದಿ ತಿಳಿದ ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.