Belagavi: ಬರ ಪಟ್ಟಿಯಲ್ಲಿಲ್ಲ ಬೆಳಗಾವಿ-ಖಾನಾಪುರ ತಾಲೂಕು
ಕಬ್ಬು, ಶೇಂಗಾ ಮತ್ತಿತರೆ ಬೆಳೆ ಬೆಳೆದವರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
Team Udayavani, Sep 16, 2023, 5:48 PM IST
ಬೆಳಗಾವಿ: ನಿರೀಕ್ಷೆ ಮಾಡಿದಂತೆ ಗಡಿ ಜಿಲ್ಲೆ ಬೆಳಗಾವಿಯ 13 ತಾಲೂಕುಗಳು ಬರ ಪೀಡಿತ ಪ್ರದೇಶಗಳೆಂದು ಸರಕಾರದಿಂದ ಘೋಷಣೆಯಾಗಿವೆ. ಆದರೆ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿ-ಖಾನಾಪುರ ತಾಲೂಕುಗಳು ಈ ಪಟ್ಟಿಯಿಂದ ಕೈಬಿಟ್ಟು ಹೋಗಿರುವುದು ಸಹಜವಾಗಿ ರೈತ ಸಮುದಾಯದಲ್ಲಿ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದೆ.
ಹಾಗೆ ನೋಡಿದರೆ ಮಲೆನಾಡಿನ ಸೆರಗಿನಲ್ಲಿರುವ ಬೆಳಗಾವಿ ಮತ್ತು ಖಾನಾಪುರ ತಾಲೂಕಿನಲ್ಲಿ ಮಳೆ ಕೊರತೆಯಾಗಿದ್ದು ಬಹಳ ಕಡಿಮೆ. ಉತ್ತಮ ಮಳೆಯಿಂದ ಯಾವಾಗಲೂ ಈ ತಾಲೂಕುಗಳಲ್ಲಿ ಸಮೃದ್ಧ ಬೆಳೆ ಕಂಗೊಳಿಸುತ್ತದೆ. ಆದರೆ ಈ ಬಾರಿ ಮಾತ್ರ ಎರಡೂ ತಾಲೂಕುಗಳು ಮಳೆಯ ಕೊರತೆ ಎದುರಿಸಿವೆ. ಅದರಲ್ಲೂ ದಟ್ಟ ಅರಣ್ಯ ಪ್ರದೇಶ ಹೊಂದಿರುವ ಖಾನಾಪುರ ತಾಲೂಕಿನಲ್ಲೇ ಮಳೆ ಕೊರತೆ ಸಾಕಷ್ಟು ಆತಂಕ ಉಂಟು ಮಾಡಿತ್ತು.
ಇದೇ ಕಾರಣದಿಂದ ಬೆಳಗಾವಿ-ಖಾನಾಪುರ ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು ಎಂಬ ಒತ್ತಾಯಗಳು ಇಲ್ಲಿಯ ಜನಪ್ರತಿನಿಧಿಗಳು ಮತ್ತು ರೈತ ಸಮುದಾಯದಿಂದ ಕೇಳಿ ಬಂದಿತ್ತು. ಆದರೆ ಕೇಂದ್ರದ ಮಾನದಂಡ, ನಿಯಮಾವಳಿ ಪ್ರಕಾರ ಈ ತಾಲೂಕುಗಳು ಬರ ಪಟ್ಟಿಯಿಂದ ಹೊರಗುಳಿದಿದ್ದು ರೈತರಲ್ಲಿ ಆಕ್ರೋಶ ಹುಟ್ಟು ಹಾಕಿದೆ.
ಸರಕಾರ ಈಗ ಘೋಷಣೆ ಮಾಡಿರುವ ಮೊದಲ ಹಂತದ ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ, ಹುಕ್ಕೇರಿ, ರಾಮದುರ್ಗ, ರಾಯಬಾಗ, ಸವದತ್ತಿ, ಚನ್ನಮ್ಮನ ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ, ಯರಗಟ್ಟಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಗುರುತಿಸಲಾಗಿದೆ. ಬೆಳಗಾವಿ,ಖಾನಾಪುರ ತಾಲೂಕು ಈ ಪಟ್ಟಿಯಲ್ಲಿ ಇಲ್ಲ. ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ 13 ತಾಲೂಕುಗಳ ನೈಜ ಪರಿಸ್ಥಿತಿ ವರದಿ ನೀಡಲು ಸಮೀಕ್ಷೆ ಕಾರ್ಯ ಕೈಗೊಂಡಿದ್ದವು.
ಪ್ರತಿ ತಾಲೂಕಿನಲ್ಲಿ 10 ಗ್ರಾಮಗಳು ಮತ್ತು ಐದು ಬೆಳೆಗಳನ್ನು ಆಯ್ಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗಿತ್ತು. ಈ ಸಮೀಕ್ಷೆ ಬಿತ್ತನೆ ಪ್ರಮಾಣ, ಬಿತ್ತನೆ ಮಾಡಿದ ಬೆಳೆ, ಮಳೆ ಮತ್ತು ತೇವಾಂಶ ಕೊರತೆಯಿಂದ ಬೆಳೆಗಳ ಮೇಲೆ ಉಂಟಾಗಿರುವ
ಪರಿಣಾಮವನ್ನೊಳಗೊಂಡಿತ್ತು.
ಕಾಡಿದ ಮಳೆ ಕೊರತೆ
ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ (ಜೂನ್ 1ರಿಂದ ಇದುವರೆಗೆ )514 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 456 ಮಿ.ಮೀ ಮಳೆಯಾಗಿದ್ದು, ಶೇ.11 ಮಳೆ ಕೊರತೆ ಉಂಟಾಗಿದೆ. ಪ್ರಸಕ್ತ ಹಂಗಾಮಿನಲ್ಲಿ 7.11 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಗುರಿಯಿದ್ದು, ಇದುವರೆಗೆ 6.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ ಶೇ 90 ಬಿತ್ತನೆಯಾಗಿದೆ ಎಂಬುದು ಕೃಷಿ ಇಲಾಖೆ ಅಧಿಕಾರಿಗಳ ಹೇಳಿಕೆ.
ಕೆಲ ತಾಲೂಕುಗಳಲ್ಲಿ ಪ್ರತಿಶತ 100 ಬಿತ್ತನೆಯಾಗಿದ್ದರೂ ನಂತರ ಮಳೆ ಬಾರದೆ ಇರುವುದು, ತೀವ್ರ ತೇವಾಂಶ ಕೊರತೆಯಿಂದ
ಬಿತ್ತನೆ ಮಾಡಿದ ಬೆಳೆಗಳೆಲ್ಲ ಹಾಳಾಗಿವೆ. ಕೆಲ ಕಡೆ ಬಿತ್ತನೆಯನ್ನೇ ಮಾಡಿಲ್ಲ. ಮಳೆ ಕೊರತೆ, ತೇವಾಂಶದ ಕೊರತೆಯಿಂದ ಹೆಸರು, ಉದ್ದು, ಸೋಯಾಬಿನ್, ಕಬ್ಬು, ಶೇಂಗಾ ಮತ್ತಿತರೆ ಬೆಳೆ ಬೆಳೆದವರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಬೆಳಗಾವಿ, ಖಾನಾಪುರ ತಾಲೂಕುಗಳಲ್ಲಿ ಹೆಚ್ಚಾಗಿ ಭತ್ತ ಬೆಳೆಯಲಾಗುತ್ತದೆ. ಆದರೆ ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ಈಗಾಗಲೇ ಇಳುವರಿ ಕುಸಿದಿದೆ. ಇನ್ನೊಂದು ವಾರದೊಳಗೆ ಉತ್ತಮ ಮಳೆಯಾಗದಿದ್ದರೆ ಈಗ ಬೆಳೆದು ನಿಂತಿರುವ ಪೈರು ಒಣಗಿ ಹೋಗಲಿದೆ. ಈ ಹಿನ್ನೆಲೆಯಲ್ಲಿ ಸರಕಾರ ಮತ್ತೂಮ್ಮೆ ಸಮೀಕ್ಷೆ ನಡೆಸಿ ಈ ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂಬುದು ರೈತರ ಒತ್ತಾಯ.
ಬೆಳಗಾವಿ ತಾಲೂಕಿನ ರೈತರು ಮೊದಲು ಬಳ್ಳಾರಿ ನಾಲಾ ಪ್ರವಾಹದಿಂದ ತತ್ತರಿಸಿ ಹೋಗಿದ್ದರು. ನಂತರ ಮಳೆ ಕೊರತೆ ಮತ್ತಷ್ಟು
ಸಂಕಷ್ಟಕ್ಕೆ ಗುರಿ ಮಾಡಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಿಂತಿವೆ. ಈ ಕಡೆ ಸರಕಾರ ಸಹ ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ, ಖಾನಾಪುರ ತಾಲೂಕುಗಳನ್ನು ಕೈಬಿಟ್ಟು ಮತ್ತಷ್ಟು ಅನ್ಯಾಯ ಮಾಡಿದೆ. ರೈತರ ಬಗ್ಗೆ ಸರಕಾರಕ್ಕೆ ಕಾಳಜಿ ಇದ್ದರೆ ಕೂಡಲೇ ಇನ್ನೊಂದು ಸಮೀಕ್ಷೆ ಮಾಡಿ ಎರಡೂ ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು.
ರಾಜು ಮಾರ್ವೆ,
ರೈತ ಸಂಘದ ತಾಲೂಕಾಧ್ಯಕ್ಷ
ವಾಸ್ತವ ಸ್ಥಿತಿ ಎಲ್ಲರ ಕಣ್ಮುಂದೆಯೇ ಇದೆ. ಆದರೆ ಅಧಿಕಾರಿಗಳಿಗೆ ಮಾತ್ರ ಇದು ಕಾಣದೇ ಇರುವುದು ಬಹಳ ಅಚ್ಚರಿ, ಆಘಾತ ಉಂಟು ಮಾಡಿದೆ. ಸರಕಾರಕ್ಕೆ ತಪ್ಪು ಮಾಹಿತಿ ನೀಡಿ ಸಾಮಾನ್ಯ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಾವ ರೀತಿಯ ಅಂಕಿ-ಅಂಶಗಳನ್ನು ಸರಕಾರಕ್ಕೆ ನೀಡಿದ್ದಾರೆಂಬುದು ತಿಳಿಯುತ್ತಿಲ್ಲ. ಮಳೆ ಆಧಾರಿತ ಎಲ್ಲ ಬೆಳೆಗಳು ನಾಶವಾಗಿವೆ. ಸರಕಾರ ಮರು ಸಮೀಕ್ಷೆ ನಡೆಸಿ ಸಣ್ಣ ರೈತರ ನೆರವಿಗೆ ಬರಬೇಕು.
ಅಪ್ಪಾಸಾಹೇಬ ದೇಸಾಯಿ,
ಬೆಳಗಾವಿ ತಾಲೂಕು ರೈತ ಮುಖಂಡ.
*ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ
Belagavi: ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್ ಜಾರಕಿಹೊಳಿ
Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ
Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ
ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.