Belagavi: ಗಣೇಶ ಮೂರ್ತಿಗಳು ಈ ಬಾರಿ ದುಬಾರಿ! ಶೇ.20-25 ದರ ಹೆಚ್ಚಳ

ಕರಾಡ, ಸಾತಾರಾ, ಇಚಲಕರಂಜಿಗಳಿಂದ ಗಣೇಶ ಮೂರ್ತಿಗಳು ಬಂದಿವೆ

Team Udayavani, Sep 4, 2023, 10:45 AM IST

Belagavi: ಗಣೇಶ ಮೂರ್ತಿಗಳುಈ ಬಾರಿ ದುಬಾರಿ! ಶೇ.20-25 ದರ ಹೆಚ್ಚಳ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲೆಡೆ ಗಣಪನನ್ನು ಶ್ರದ್ಧಾ-ಭಕ್ತಿಯಿಂದ ಪ್ರತಿಷ್ಠಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗಣೇಶ ಮೂರ್ತಿಗಳು ದುಬಾರಿಯಾಗಿವೆ. ಶೇ. 20ರಿಂದ 25 ಮೂರ್ತಿಗಳ ದರದಲ್ಲಿ ಏರಿಕೆ ಆಗಿದೆ.

ಬೆಳಗಾವಿಯ ಗಣೇಶೋತ್ಸವ ಎಂದರೆ ಕರ್ನಾಟಕ ರಾಜ್ಯದಲ್ಲಿಯೇ ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ನೆರವೇರುತ್ತದೆ. ಸುಮಾರು 119 ವರ್ಷಗಳ ಇತಿಹಾಸ ಹೊಂದಿರುವ ಬೆಳಗಾವಿ ಗಣೇಶನ ಹಬ್ಬ ವೈಭವ ವರ್ಷದಿಂದ ವರ್ಷಕ್ಕೆ
ಹೆಚ್ಚಾಗುತ್ತಲೇ ಸಾಗಿದೆ. ಈ ಬಾರಿ ಮಾರುಕಟ್ಟೆಯಲ್ಲಿ ಗಣೇಶ ಮೂರ್ತಿಗಳ ದರದಲ್ಲಿ ಏರಿಕೆ ಕಂಡು ಬಂದಿರುವುದರಿಂದ ಸಾರ್ವಜನಿಕರ ಜೇಬಿಗೆ ತುಸು ಕತ್ತರಿ ಬಿದ್ದಂತಾಗಿದೆ.

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿಗಳನ್ನು ಮನೆ-ಮನಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಹಳ್ಳಿ ಹಳ್ಳಿ, ಗಲ್ಲಿ, ಬೀದಿ, ಬಡಾವಣೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಈಗಾಗಲೇ ಸುಮಾರು ಐದಾರು ತಿಂಗಳಿಂದ ಮೂರ್ತಿ ತಯಾರಿಕೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಹಲವು ಕಡೆಗಳಲ್ಲಿ ಕಲಾವಿದರು ಗಣಪತಿ ಮೂರ್ತಿಗಳನ್ನು ತಯಾರಿಸುತ್ತಿದ್ದಾರೆ. ಸದ್ಯ ತಯಾರಿಕೆ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಬಣ್ಣ ಹಚ್ಚಿ ಅಂತಿಮ ರೂಪ ನೀಡುವಲ್ಲಿ ಕಲಾವಿದರು ನಿರತರಾಗಿದ್ದಾರೆ.

ಮಳೆಯಲ್ಲಿ ನೆನೆದು ಹಾನಿ: ಮಹಾರಾಷ್ಟ್ರದ ಮುಂಬೈ ಸೇರಿದಂತೆ ವಿವಿಧ ಕಡೆಗೆ ಕಳೆದ ತಿಂಗಳು ಧಾರಾಕಾರ ಮಳೆ ಸುರಿದಿತ್ತು. ತಯಾರಾಗಿದ್ದ ಗಣೇಶ ಮೂರ್ತಿಗಳನ್ನು ಶೆಡ್‌ಗಳಲ್ಲಿ ಇಡಲಾಗಿತ್ತು. ಹಲವು ಕಡೆಗಳಲ್ಲಿ ನೀರು ನುಗ್ಗಿ ಭಾರೀ ಪ್ರಮಾಣದಲ್ಲಿ
ಮೂರ್ತಿಗಳು ನೆನೆದು ಹಾನಿಯಾಗಿದೆ. ಸಣ್ಣ ಪುಟ್ಟ ಮೂರ್ತಿಗಳು ಉಳಿದುಕೊಂಡಿದ್ದು, ದೊಡ್ಡ ಮೂರ್ತಿಗಳು ನೀರಿನಿಂದ ಹಾನಿಯಾಗಿವೆ. ಈಗ ಮತ್ತೆ ತಯಾರಿಸಿ ಬೇರೆ ಕಡೆಗೆ ಕಳುಹಿಸುವುದು ಕಷ್ಟಕರವಾಗಿದ್ದು, ಹೀಗಾಗಿ ಕಡಿಮೆ ಪ್ರಮಾಣದಲ್ಲಿ
ಮೂರ್ತಿಗಳು ಬೆಳಗಾವಿಗೆ ಬಂದಿವೆ. ಇದರಿಂದ ದರ ತುಸು ಹೆಚ್ಚಾಗಿದೆ ಎನ್ನುತ್ತಾರೆ ಮೂರ್ತಿ ಮಾರಾಟಗಾರರು.

ಜತೆಗೆ ಮೂರ್ತಿಗಳಿಗೆ ಅಗತ್ಯ ಇರುವ ಕಚ್ಚಾ ವಸ್ತುಗಳ ದರ ಏರಿಕೆ ಆಗಿದೆ. ಪ್ಲಾಸ್ಟರ್‌, ಜೇಡಿ ಮಣ್ಣು, ಗೋಕಾಕ ಹಾಗೂ ಖಾನಾಪುರ ಮಣ್ಣು, ಬಣ್ಣ, ಕಬ್ಬಿಣ, ಕಟ್ಟಿಗೆಯ ಪ್ಲೇಟ್‌, ಆ್ಯಂಗಲ್‌, ಪೈಪ್‌, ಹಗ್ಗದ ದರ ಹೆಚ್ಚಾಗಿದ್ದರಿಂದ ಮೂರ್ತಿ ತಯಾರಿಯ ವೆಚ್ಚವೂ ಹೆಚ್ಚಳವಾಗಿದೆ. ಇನ್ನು ಮೂರ್ತಿಗಳನ್ನು ತಯಾರಿಸಲು ಬೇರೆ ಬೇರೆ ಕಡೆಯಿಂದ ಕಾರ್ಮಿಕರು ಬಂದಿದ್ದಾರೆ.
ಕಾರ್ಮಿಕರ ವೇತನವೂ ಹೆಚ್ಚಳವಾಗಿದ್ದರಿಂದ ಅನಿವಾರ್ಯ ಮೂರ್ತಿಗಳ ದರ ಹೆಚ್ಚಳ ಮಾಡಲಾಗಿದೆ. ಹಗಲು-ರಾತ್ರಿ ಪಾಳಿಯಲ್ಲಿ ಕಾರ್ಮಿಕರು ಒಂದೆರಡು ತಿಂಗಳಿಂದ ದುಡಿಯುತ್ತಿದ್ದಾರೆ.

ಮಹಾರಾಷ್ಟ್ರದಿಂದ ಬಂದ ಮೂರ್ತಿಗಳು: ಜಿಲ್ಲೆಯ ಹಲವು ಕಡೆಗಳಲ್ಲಿ ಮೂರ್ತಿ ನಿರ್ಮಾಣ ಕಾರ್ಯ ನಡೆದಿದೆ. ಜತೆಗೆ ಬೆಳಗಾವಿಗೆ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಗಜಾನನ ಮೂರ್ತಿಗಳು ಲಗ್ಗೆ ಇಡುತ್ತವೆ. ಸದ್ಯ ಮಾರುಕಟ್ಟೆಯಲ್ಲಿ ಮೂರ್ತಿಗಳು ಬಂದಿಳಿದಿದ್ದು, ನಗರದ ಹಲವು ಕಡೆಗಳಲ್ಲಿ ಸಣ್ಣ ಸಣ್ಣ ಸ್ಟಾಲ್‌ಗ‌ಳನ್ನು ಹಾಕಿ ಮೂರ್ತಿಗಳನ್ನು ಇಟ್ಟಿದ್ದಾರೆ. ಮುಂಬೈ, ಪುಣೆ, ಕೊಲ್ಲಾಪುರ, ರತ್ನಾಗಿರಿ, ಕರಾಡ, ಸಾತಾರಾ, ಇಚಲಕರಂಜಿಗಳಿಂದ ಗಣೇಶ ಮೂರ್ತಿಗಳು ಬಂದಿವೆ. ಇನ್ನು ಸೆಪ್ಟೆಂಬರ್‌ ಮೊದಲ ವಾರದಿಂದ ಮೂರ್ತಿಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬರುತ್ತವೆ.

ಮೂರ್ತಿಗಳ ಬುಕ್ಕಿಂಗ್‌ ಆರಂಭ
ಸದ್ಯ ಬೆಳಗಾವಿಗೆ ಬಂದಿರುವ ಮೂರ್ತಿಗಳಿಗೆ ಗ್ರಾಹಕರು ಬುಕ್ಕಿಂಗ್‌ ಆರಂಭಿಸಿದ್ದಾರೆ. ತಮಗೆ ಬೇಕಾದ ಸುಂದರ ಮತ್ತು ಆಕರ್ಷಕ ಮೂರ್ತಿಗಳಿಗೆ ಮುಂಗಡ ಹಣ ಕೊಟ್ಟು ಬುಕ್ಕಿಂಗ್‌ ಮಾಡಿಟ್ಟಿದ್ದಾರೆ. ಸಾರ್ವಜನಿಕ ಮೂರ್ತಿಗಳನ್ನು ನಾಲ್ಕೈದು ತಿಂಗಳ ಹಿಂದೆಯೇ ಜನರು ಕಾಯ್ದಿರಿಸಿದ್ದಾರೆ. ತಮಗೆ ಬೇಕಾದ ವಿವಿಧ ಅವತಾರಗಳ, ರೂಪಗಳ ಮೂರ್ತಿಗಳನ್ನು ತಯಾರಿಸಲು ಆರ್ಡ್‌ರ್‌ ಕೊಟ್ಟಿದ್ದಾರೆ. ದೊಡ್ಡ ಗಣಪತಿಗಳು 20 ಸಾವಿರರಿಂದ 1 ಲಕ್ಷ ರೂ. ದರವರೆಗೂ ತಯಾರಾಗಿವೆ.

ಮುಂಬೈ, ಕೊಲ್ಲಾಪುರ ಸೇರಿದಂತೆ ವಿವಿಧ ಭಾಗಗಳಿಂದ ಗಣೇಶ ಮೂರ್ತಿಗಳನ್ನು ತಂದು ನಾವು ಮಾರಾಟ ಮಾಡುತ್ತೇವೆ. ಈ ವರ್ಷ ಸುಮಾರು 300ಕ್ಕೂ ಹೆಚ್ಚು ಮೂರ್ತಿಗಳನ್ನು ನಾವು ಮಾರಾಟ ಮಾಡುತ್ತೇವೆ. ಒಂದೂವರೆ ಅಡಿ ಮೂರ್ತಿಗೆ ಸುಮಾರು 2800 ರೂ. ದರ ಇದೆ. ಮುಂಬೈ ಗಣಪತಿಗಳಿಗೆ ಬೇಡಿಕೆ ಹೆಚ್ಚಿದೆ.
ಗೌತಮ ಸಾವಂತ, ಮೂರ್ತಿ
ಮಾರಾಟಗಾರರು

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗಣೇಶ ಮೂರ್ತಿಗಳ ತಯಾರಿಕೆ ವೆಚ್ಚ ಹೆಚ್ಚಾಗಿದೆ. ಬಣ್ಣ, ಪ್ಲಾಸ್ಟರ್‌, ಕಟ್ಟಿಗೆ, ಕಬ್ಬಿಣದ
ದರ ಹೆಚ್ಚಾಗಿದ್ದರಿಂದ ಅನಿವಾರ್ಯವಾಗಿ ಮೂರ್ತಿಗಳ ದರ ಹೆಚ್ಚಿಸಿದ್ದೇವೆ. ಶೇ.20ರಿಂದ 25 ದರ ಏರಿಕೆ ಆಗಿದೆ. ನಾವು ಈ ವರ್ಷ
ಸುಮಾರು 500ಕ್ಕೂ ಹೆಚ್ಚು ಸಣ್ಣ ಗಣಪತಿ ಹಾಗೂ 30ಕ್ಕೂ ಹೆಚ್ಚು ಸಾರ್ವಜನಿಕ ಗಣಪತಿಗಳನ್ನು ತಯಾರಿಸಿದ್ದೇವೆ.
ಪ್ರಸಾದ ಪಾಟೀಲ, ಮೂರ್ತಿಕಾರರು.

*ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.