ಸಹಜ ಸ್ಥಿತಿಗೆ ಮರಳಿದ ಕುಂದಾನಗರಿ ಬೆಳಗಾವಿ
Team Udayavani, Dec 19, 2021, 10:17 AM IST
![ಸಹಜ ಸ್ಥಿತಿಗೆ ಮರಳಿದ ಕುಂದಾನಗರಿ ಬೆಳಗಾವಿ](https://www.udayavani.com/wp-content/uploads/2021/12/belagavi-5-620x342.jpg)
![ಸಹಜ ಸ್ಥಿತಿಗೆ ಮರಳಿದ ಕುಂದಾನಗರಿ ಬೆಳಗಾವಿ](https://www.udayavani.com/wp-content/uploads/2021/12/belagavi-5-620x342.jpg)
ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದಕ್ಕೆ ಗಲಭೆ ಕಂಡಿದ್ದ ಕುಂದಾನಗರಿ ಬೆಳಗಾವಿ ರವಿವಾರ ಸಹಜ ಸ್ಥಿತಿಗೆ ಮರಳಿದೆ. ಎಂದಿನಂತೆ ಸಹಜ ಜನಜೀವನ ಆರಂಭಗೊಂಡಿದೆ.
ಮಹಾನ್ ಪುರುಷರ ಪ್ರತಿಮೆಗಳಿಗೆ ಅವಮಾನ ಮಾಡಿ ಶಾಂತಿ ಕದಡುತ್ತಿದ್ದವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದಲ್ಲಿ ಎಲ್ಲವೂ ಶಾಂತವಾಗಿದ್ದು, ಆತಂಕವಿಲ್ಲದೇ ಜನರು ಓಡಾಟ ನಡೆಸಿದ್ದಾರೆ. ವ್ಯಾಪಾರ-ವಹಿವಾಟು ಎಂದಿನಂತೆ ಶುರುವಾಗಿದೆ.
ಚಳಿಗಾಲ ಅಧಿವೇಶನಕ್ಕೆ ಬಂದಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆದಿದ್ದರಿಂದ ದ್ವೇಷಮಯ ವಾತಾವರಣ ನಿರ್ಮಾಣವಾಗಿದ್ದ ಬೆಳಗಾವಿಯಲ್ಲಿ ಈಗಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ
ಘಟನೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಹಿಂದೂಸ್ಥಾನ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ, ಎಂಇಎಸ್ ಮುಖಂಡ ಶುಭಂ ಶೇಳಕೆ ಸೇರಿದಂತೆ 27 ಮಂದಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!](https://www.udayavani.com/wp-content/uploads/2025/02/belag-150x83.jpg)
![Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!](https://www.udayavani.com/wp-content/uploads/2025/02/belag-150x83.jpg)
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
![Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ](https://www.udayavani.com/wp-content/uploads/2025/02/15-8-150x90.jpg)
![Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ](https://www.udayavani.com/wp-content/uploads/2025/02/15-8-150x90.jpg)
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
![Belagavi: Rpe, mrder have increased due to the court system: Muthalik](https://www.udayavani.com/wp-content/uploads/2025/02/mutalik-150x84.jpg)
![Belagavi: Rpe, mrder have increased due to the court system: Muthalik](https://www.udayavani.com/wp-content/uploads/2025/02/mutalik-150x84.jpg)
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
![Belagavi: Return to public life in two weeks: Minister Lakshmi Hebbalkar](https://www.udayavani.com/wp-content/uploads/2025/02/laxmi-150x84.jpg)
![Belagavi: Return to public life in two weeks: Minister Lakshmi Hebbalkar](https://www.udayavani.com/wp-content/uploads/2025/02/laxmi-150x84.jpg)
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್