ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

ಇನ್ನೊಬ್ಬ ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.

Team Udayavani, Jun 3, 2023, 4:22 PM IST

ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್‌ ಬಂಧನ

ಬೆಳಗಾವಿ: 2 ಸಾವಿರ ಮುಖ ಬೆಲೆಯ ನೋಟುಗಳನ್ನು ಬದಲಾಯಿಸಲು ಹೆಚ್ಚುವರಿ ಒಂದು ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿ ವಂಚಿಸಿದ ಪೊಲೀಸ್‌ ಪೇದೆ ಸೇರಿ ಮೂವರನ್ನು ಬಂಧಿಸುವಲ್ಲಿ ಕಾಗವಾಡ ಠಾಣೆ ಪೊಲೀಸರು
ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರದ ಮಿರಜ್‌ ನಗರ ಠಾಣೆ ಪೊಲೀಸ್‌ ಪೇದೆ ಸಾಗರ ಸದಾಶಿವ ಜಾಧವ(31), ಆರೀಫ ಆಜಿಜ್‌ ಸಾಗರ(34) ಹಾಗೂ ಲಿಂಗನೂರನ ಲಕ್ಷ್ಮಣ ನಾಯ್ಕ(36) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯಲ್ಲೇ
ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಘಟನೆ ಹಿನ್ನೆಲೆ ಏನು?: ಸಾಂಗಲಿ ಜಿಲ್ಲೆಯ ತಾಸಗಾಂವ ತಾಲೂಕಿನ ಸಾವರ್ಣಿ ಗ್ರಾಮದ ಸಮೀರ್‌ ಭಾನುದಾಸ ಬೋಸಲೆ (40) ಎಂಬವರು ಶ್ಯುರ್‌ಶಾಟ್‌ ಇವೆಂಟ್‌ ಮ್ಯಾನೇಜ್‌ಮೆಂಟ್‌ನಲ್ಲಿ ಸ್ಟ್ರಕ್ಚರ್‌ ಮ್ಯಾನೇಜರ್‌ ಆಗಿ ಐದು ವರ್ಷಗಳಿಂದ ಕೆಲಸ
ಮಾಡುತ್ತಿದ್ದಾರೆ. 14 ತಿಂಗಳಿಂದ ಇವರ ಬಳಿ ಅಕ್ಷಯ ಉಫ್ì ಆಕಾಶ ಆನಂದ ಮಂಡಲೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ.

ವಾರದ ಹಿಂದೆ ಸಮೀರ್‌ ಅವರ ಬಳಿ ಬಂದ ಆಕಾಶ, ತನಗೆ ಅಸ್ಲಂ ಎಂಬ ವ್ಯಕ್ತಿ ಪರಿಚಯವಾಗಿದ್ದು, ಅವನ ಹತ್ತಿರ
ರಾಜಕೀಯ ವ್ಯಕ್ತಿಗಳ 2000 ಮುಖಬೆಲೆಯ ನೋಟುಗಳಿವೆ. ತಮಗೆ ಯಾರಾದರೂ  500 ಮುಖಬೆಲೆಯ 5 ಲಕ್ಷ ರೂ. ಕೊಟ್ಟರೆ
ಅವರಿಗೆ 2000 ಮುಖ ಬೆಲೆಯ 6 ಲಕ್ಷ ರೂ. ನೀಡುವುದಾಗಿ ಹೇಳಿದ್ದಾನೆ.

ಈ ಬಗ್ಗೆ ಅಕ್ಷಯ ಮತ್ತು ಸಮೀರ್‌ ಸೇರಿ ತಮ್ಮ ಮಾಲೀಕರಾದ ತಾಸಗಾಂವನ ಸಂದೀಪ ಶ್ಯಾಮರಾವ ಗಿಡ್ಡೆ ಅವರಿಗೆ ತಿಳಿಸಿದಾಗ
500 ರೂ. ಮುಖಬೆಲೆಯ 5 ಲಕ್ಷ ರೂ. ನೀಡುತ್ತೇನೆ. 2 ಸಾವಿರ ರೂ. ಮುಖಬೆಲೆಯ 6 ಲಕ್ಷ ರೂ. ವಾಪಸ್‌ ತರುವಂತೆ ತಿಳಿಸಿದ್ದಾರೆ.
ಅದರಂತೆ ಮೇ 30ರಂದು ಅಸ್ಲಂ ಎಂಬಾತನಿಗೆ ಕರೆ ಮಾಡಿ 5 ಲಕ್ಷ ರೂ. ಕೊಡುವುದಾಗಿ ಒಪ್ಪುತ್ತಾರೆ. ನಂತರ ಆರೋಪಿ ಜಾಧವ
ಫೋನ್‌ ಮಾಡಿ 5 ಲಕ್ಷ ರೂ. ನೊಂದಿಗೆ ಮೇ 31ರಂದು ಕರ್ನಾಟಕದ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಶ್ರೀ ಮಲ್ಲಯ್ಯನ ಗುಡಿ ಹತ್ತಿರ ಬರುವಂತೆ ಸೂಚಿಸುತ್ತಾನೆ.

ಮಾಲೀಕರಾದ ಸಂದೀಪ ಶ್ಯಾಮರಾವ ಗಿಡ್ಡೆ ಅವರ ತಾಸಗಾಂವ ಯೂನಿಯನ್‌ ಬ್ಯಾಂಕ್‌ ಆಪ್‌ ಇಂಡಿಯಾ ಶಾಖೆಯಿಂದ ಚೆಕ್‌
ಮೂಲಕ 5 ಲಕ್ಷ ರೂ. ಹಣವನ್ನು ಸಮೀರ್‌ ಹಾಗೂ ಅಕ್ಷಯ ಡ್ರಾ ಮಾಡಿಕೊಂಡು ಕೊಲ್ಲಾಪುರದಿಂದ ನರಸಿಂಹವಾಡಿ
ಮಾರ್ಗವಾಗಿ ಬೈಕ್‌ ಮೇಲೆ ಮಂಗಸೂಳಿಗೆ ಮೇ 31ರಂದು ರಾತ್ರಿ 8 ಗಂಟೆ ಸುಮಾರಿಗೆ ಬಂದಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ಕಾರಿನಲ್ಲಿ ಇಬ್ಬರಿಗೆ ಹಣ ಕೊಟ್ಟಿದ್ದಾರೆ. ಹಣ ಎಣಿಕೆ ಮಾಡುವಾಗ ಇಬ್ಬರು ಬುಲೆಟ್‌ ಬೈಕ್‌ ಮೇಲೆ ಬಂದು ಹಿಡಿಯಿರಿ ಎಂದು ಲಾಠಿ ಹಿಡಿದು ಹೆದರಿಸಿದ್ದಾರೆ. ಆಗ ಕಾರು ಚಾಲಕ ವಾಹನ  ಚಲಾಯಿಸಿದ್ದಾನೆ. ಬುಲೆಟ್‌ನಲ್ಲಿ ಇದ್ದವರೂ ಕಾರು ಬೆನ್ನತ್ತಿ ಹೋಗಿದ್ದಾರೆ. ಯಾರೂ ವಾಪಸ್‌ ಬಾರದಿರುವುದರಿಂದ ಮೋಸ ಆಗಿರುವುದು ಖಾತ್ರಿ ಆಗುತ್ತಿದ್ದಂತೆ ಕಾಗವಾಡ ಠಾಣೆಯಲ್ಲಿ
ಸಮೀರ್‌ ದೂರು ದಾಖಲಿಸಿದ್ದಾರೆ.

ಪ್ರಕರಣದ ಬೆನ್ನತ್ತಿದ ಕಾಗವಾಡ ಪೊಲೀಸರು ಮಹಾರಾಷ್ಟ್ರದ ಮಿರಜ್‌ ನಗರ ಠಾಣೆ ಪೊಲೀಸ್‌ ಪೇದೆ ಸಾಗರ ಜಾಧವ ಸೇರಿದಂತೆ ಮೂವರನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ. ಬಂಧಿತರಿಂದ ಒಂದು ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಮೂವರು ಆರೋಪಿಗಳು ಇಂಥ ಮೂರು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಜತೆಗೆ ಹಣ ಬದಲಾಯಿಸಿರುವ ಬಗ್ಗೆ 500 ಮುಖಬೆಲೆ ನೋಟುಗಳನ್ನು
ಜನರಿಗೆ ತೋರಿಸಲು ಬ್ಯಾಗ್‌ ತುಂಬಿಕೊಂಡು ಬಂದಿದ್ದರು. ಅದರಲ್ಲಿ 500 ಹಾಗೂ 100 ರೂ. ನೋಟುಗಳು, 127 ಬಂಡಲ್‌ ಮಕ್ಕಳ ಆಟಿಕೆಯ ನೋಟುಗಳಾಗಿವೆ. ಇದರಲ್ಲಿ 10 ನೋಟುಗಳು ಮಾತ್ರ ಅಸಲಿ ಆಗಿವೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.