ಬೆಳಗಾವಿ: ಅಂಗನವಾಡಿಗಳಿಗೂ ಹೈಟೆಕ್‌ ಸ್ಪರ್ಶ-ಸಚಿವೆ ಹೆಬ್ಬಾಳಕರ


Team Udayavani, Aug 1, 2024, 5:52 PM IST

ಬೆಳಗಾವಿ: ಅಂಗನವಾಡಿಗಳಿಗೂ ಹೈಟೆಕ್‌ ಸ್ಪರ್ಶ-ಸಚಿವೆ ಹೆಬ್ಬಾಳಕರ

■ ಉದಯವಾಣಿ ಸಮಾಚಾರ
ಬೆಳಗಾವಿ: ದೇಶ ಬೆಳೆಯುತ್ತಿದೆ; ರಾಜ್ಯವೂ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಹಾಗೆಯೇ ನಮ್ಮ ಅಂಗನವಾಡಿಗಳೂ ಉನ್ನತೀಕರಣ ಆಗಬೇಕೆಂಬ ಆಶಯದಿಂದ ನಮ್ಮ ಇಲಾಖೆ  ಅಂಗನವಾಡಿಗಳನ್ನು ಆಧುನೀಕರಣಗೊಳಿಸುತ್ತಿದೆ
ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಹಾಗೂ ವಿಶೇಷಚೇತನರ ಇಲಾಖೆ ವತಿಯಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ಇದು ಪೈಪೋಟಿ ಯುಗ, ಆಧುನಿಕ ತಂತ್ರಜ್ಞಾನದ ಯುಗ. ಇಂತಹ ಯುಗದಲ್ಲಿ ಬಿಡುವಿಲ್ಲದೆ ದುಡಿಯುವ ಜನರ ಮಕ್ಕಳು, ರೈತರ ಮಕ್ಕಳೂ ನರ್ಸರಿ ಕಲಿಯಬೇಕೆಂಬ ಆಶಯದಿಂದ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ.ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಮಕ್ಕಳಿಗೆ ಕಲಿಸುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ 250 ಎಲ್‌ಕೆಜಿ, ಯುಕೆಜಿ ನರ್ಸರಿಗಳು ಚಾಲನೆಗೊಂಡಿವೆ ಎಂದು ಹೇಳಿದರು.

49 ವರ್ಷಗಳ ಹಿಂದೆ ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದ ಹೆಗ್ಗಳಿಕೆ ಕರ್ನಾಟಕದ್ದು. ಈಗ ಮತ್ತೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸುವ ಮೂಲಕ ಕರ್ನಾಟಕ ಇತಿಹಾಸದ ಸುವರ್ಣಾಕ್ಷರದಲ್ಲಿ ಬರೆಯುವಂತ ಹೊಸ ದಾಖಲೆ ಮಾಡಿದೆ.

ಬಡವರ, ಹಳ್ಳಿಯ ರೈತರ ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಯಲ್ಲಿ ಅವರಿಗೆ ಒಳ್ಳೆಯ ಶಿಕ್ಷಣ ಸಿಗಬೇಕು ಎಂಬ ಆಶಯದಿಂದ ದಿ. ಇಂದಿರಾ ಗಾಂಧಿಯವರು ಕರ್ನಾಟಕದಲ್ಲಿ ಅಂಗನವಾಡಿ ಸ್ಥಾಪಿಸಿದರು. ಮುಂದಿನ ವರ್ಷಕ್ಕೆ ಅಂಗನವಾಡಿಗಳು 50 ವರ್ಷ ತುಂಬಿ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸದ ವಿಷಯ ಎಂದರು.

ಅಂಗನವಾಡಿಗಳಲ್ಲಿ ಸರ್ಕಾರದ, ಇಲಾಖೆಯ ಅಶಯದಂತೆ ಕಾರ್ಯಕರ್ತೆಯರು ಕೆಲಸ ಮಾಡಬೇಕು. ಎಲ್ಲರೂ ತಮ್ಮ ಮಕ್ಕಳಂತೆ ಫೋಷಿಸಿ, ಅವರನ್ನು ಒಳ್ಳೆಯ ಶಿಕ್ಷಣವಂತರಾಗಿ ಬೆಳೆಯಲು ಸಹಕಾರ ನೀಡಬೇಕು. ಈಗ ಅಂಗನವಾಡಿಗಳಲ್ಲಿ ಕೆಲಸ ಮಾಡುವವರಿಗೆ ಪಿಯುಸಿ ಮಾನದಂಡ ಮಾಡಲಾಗಿದೆ. ಆದರೆ ಈಗಾಗಲೇ ಅಂಗನವಾಡಿಗಳಲ್ಲಿ ಎಂಎ, ಬಿಎ, ಬಿಎಡ್‌, ಬಿಇ ಕಲಿತವರು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.ಇದು ಹೆಮ್ಮೆಯ ಸಂಗತಿ ಎಂದು ಹೆಬ್ಬಾಳಕರ ಹೇಳಿದರು.

ಅಂಗನವಾಡಿಗಳೆಂದರೆ ಮಕ್ಕಳ ವಿದ್ಯಾಭ್ಯಾಸದ ಫ್ಯಾಕ್ಟರಿಯಾಗಿ ತಯಾರು ಮಾಡುವ, ಮಕ್ಕಳ ಮಾಡೆರ್ನ್ ಮಾಡುವುದಕ್ಕೆ
ಎಲ್ಲ ರೀತಿಯಿಂದಲೂ ಸನ್ನದ್ಧವಾಗಿವೆ. ಇದಕ್ಕೆ ಮುಖRಮಂತ್ರಿ ಸಿದ್ದರಾಮಯ್ಯನವರು ಆಶೀರ್ವಾದ ನೀಡಿದ್ದು, ಅಂಗನವಾಡಿಗಳಿಗೆ ಹೊಸ ರೂಪ, ಹೊಸ ಕಳೆ ತರಲು ಇಲಾಖೆ ಸನ್ನದ್ಧವಾಗಿದೆ ಎಂದು ಸಚಿವೆ ಹೆಬ್ಬಾಳಕರ ಹೇಳಿದರು.

ಗ್ರಾಮೀಣ ಕ್ಷೇತ್ರದಲ್ಲಿ ನೇಮಕಗೊಂಡ 43 ಜನ ಅಂಗನವಾಡಿ ಸಹಾಯಕಿಯರು ಹಾಗೂ 6 ಜನ ಕಾರ್ಯಕರ್ತೆಯರಿಗೆ ಸಚಿವರು ಆದೇಶ ಪತ್ರ ವಿತರಿಸಿದರು. ಕಾರ್ಯಕರ್ತೆಯರಿಗೆ ಹೊಸ ಮೊಬೈಲ್‌ ಹ್ಯಾಂಡ್‌ ಸೆಟ್‌ ವಿತರಿಸಲಾಯಿತು. ಇಲಾಖೆಯ ಉಪನಿರ್ದೇಶಕ ನಾಗರಾಜ, ಸಿಡಿಪಿಒ ಸುಮಿತ್ರಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

ರಾಜ್ಯಾದ್ಯಂತ 18 ಸಾವಿರ ಮಾಂಟೆಸ್ಸರಿ ಆರಂಭ
ಬಹಳ ವರ್ಷಗಳಿಂದ ಚಾಲ್ತಿಯಲ್ಲಿದ್ದ ನಮ್ಮ ಅಂಗನವಾಡಿ ಹೆಸರನ್ನೂ ಬದಲಾಯಿಸಿ ಈಗ ಸರ್ಕಾರಿ ಮಾಂಟೆಸ್ಸರಿ ಎಂದು ಹೆಸರು ಇಡಲಾಗಿದೆ. ಉತ್ತರ ಕರ್ನಾಟಕ ಜನರಿಗೆ ಗೊತ್ತಾಗಲೆಂದು ಎಲ್‌ಕೆಜಿ, ಯುಕೆಜಿ ಎಂದು ಕರೆಯಲಾಗುತ್ತದೆ. ದಕ್ಷಿಣ ಕರ್ನಾಟಕದ, ಮೈಸೂರು-ಕರ್ನಾಟಕ ಭಾಗದ ಕಡೆಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳೆಂದು ಕರೆಯಲಾಗುತ್ತದೆ.

ರಾಜ್ಯದಲ್ಲಿ 18 ಸಾವಿರ, ಬೆಳಗಾವಿ ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು, ಅದರಲ್ಲೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ 300ಕ್ಕೂ ಅಧಿಕ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು. ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮದಲ್ಲಿ ಮಾಂಟೆಸ್ಸರಿಗಳನ್ನು ತೆರೆಯಲಾಗುತ್ತಿದ್ದು, ಇಲಾಖೆ ವತಿಯಿಂದ ಮಕ್ಕಳಿಗೆ ಯುನಿಫಾರಂ, ಸ್ಕೂಲ್‌ ಬ್ಯಾಗ್‌, ನೋಟ್‌ ಪುಸ್ತಕ, ಕಲಿಕಾ ಪುಸ್ತಕಗಳನ್ನು ವಿತರಿಸಲಾಗುವುದು. ಮುಂದಿನ ತರಗತಿಗಳಿಗೆ ಹೋಗಲು ಟಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.