ಬೆಳಗಾವಿ: ಕೆರೆಗಳ ಪುನರುಜೀವನಕ್ಕೆ ನೆರವಾದ ಅಮೃತ “ಖಾತ್ರಿ

ನೀರಿನ ಸಂರಕ್ಷಣೆ, ಸದ್ಬಳಕೆ ಕುರಿತು ಅರಿವು ಮೂಡಿಸುವುದು ಈ ಅಮೃತ ಸರೋವರ ಯೋಜನೆಯ ಆಶಯ.

Team Udayavani, Jul 15, 2023, 6:05 PM IST

ಬೆಳಗಾವಿ: ಕೆರೆಗಳ ಪುನರುಜೀವನಕ್ಕೆ ನೆರವಾದ ಅಮೃತ “ಖಾತ್ರಿ

ಬೆಳಗಾವಿ: ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆದು ನಿಲ್ಲಿಸಿ ಅದನ್ನು ಪರಿಪೂರ್ಣವಾಗಿ ಬಳಕೆ ಮಾಡಬೇಕು.
ಸುತ್ತಲಿನ ಪ್ರದೇಶದ ಅಂತರ್ಜಲ ಹೆಚ್ಚಿಸುವದರ ಜೊತೆಗೆ ಜನ ಮತ್ತು ಜಾನುವಾರುಗಳ ದಾಹ ತೀರಿಸಬೇಕು. ಈ ರೀತಿಯ ಜಲಜಾಗೃತಿ ಎಷ್ಟು ಮಾಡಿದರೂ ಕಡಿಮೆಯೇ. ಆದರೆ ಇದ್ದ ಸಂಪನ್ಮೂಲಗಳನ್ನು ಬಳಸಿಕೊಂಡು ಸುಂದರ ಕೆರೆ ನಿರ್ಮಿಸಿ ನೀರು
ಸಂಗ್ರಹ ಮಾಡುವದು ನಿಜಕ್ಕೂ ಹೆಮ್ಮೆ ಪಡುವ ಸಾಧನೆಯೇ ಎನ್ನಬಹುದು.

ಅಂತಹ ಒಂದು ಹೆಮ್ಮೆಯ ಕೆಲಸ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿಯಡಿ
ಅಮೃತ ಸರೋವರ ಯೋಜನೆಯ ಹೆಸರಿನಲ್ಲಿ ಹೆಮ್ಮೆಪಡುವ ಈ ಮಾದರಿ ಕಾರ್ಯವಾಗಿದೆ. ಇಂತಹ ಒಂದು ಒಳ್ಳೆಯ ಮಾದರಿ ಕೆಲಸಕ್ಕೆ ಪರಿಸರವಾದಿಗಳು ಮತ್ತು ಗ್ರಾಮೀಣ ಪ್ರದೇಶದ ಜನರು ಭೇಷ್‌ ಎಂದಿದ್ದಾರೆ. ಅಂತರ್ಜಲ ಮೂಲಗಳನ್ನು ಅಭಿವೃದ್ಧಿ
ಪಡಿಸುವುದು, ಮುಂಬರುವ ದಿನಗಳಲ್ಲಿ ನೀರಿಗಾಗಿ ನಡೆಸುವ ಪೈಪೋಟಿಯನ್ನು ತಪ್ಪಿಸುವುದು, ಜಲ ಸಂರಕ್ಷಣೆಯಿಂದ ಕೃಷಿ
ಚಟುವಟಿಕೆ, ಅರಣ್ಯೀಕರಣ ಅಭಿವೃದ್ಧಿ ಹಾಗೂ ಪರಿಸರ ಸಮತೋಲನವನ್ನು ರಕ್ಷಿಸಿ ಗ್ರಾಮೀಣ ಜನರ ಆರೋಗ್ಯ
ಸುಧಾರಿಸುವುದು, ಉದ್ಯೋಗಾವಕಾಶವನ್ನು ಕಲ್ಪಿಸುವುದು, ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದು, ಗ್ರಾಮೀಣ ಸಮುದಾಯದಲ್ಲಿ ಸಮರ್ಪಕ ನೀರಿನ ಸಂರಕ್ಷಣೆ, ಸದ್ಬಳಕೆ ಕುರಿತು ಅರಿವು ಮೂಡಿಸುವುದು ಈ ಅಮೃತ ಸರೋವರ ಯೋಜನೆಯ ಆಶಯ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, 15ನೇ ಹಣಕಾಸು ಆಯೋಗದ ಅನುದಾನ, ಗ್ರಾಪಂನ ಸ್ವಂತ ಸಂಪನ್ಮೂಲದ ನೆರವಿನಿಂದ ಅಮೃತ ಸರೋವರ ಯೋಜನೆಯಡಿ ಕೆರೆಗಳ ನಿರ್ಮಾಣ ಮಾಡಲಾಗಿದೆ. ಇದಲ್ಲದೆ ನರೇಗಾ
ಯೋಜನೆಯಡಿ ಕೆರೆಗೆ ನೀರು ಹರಿದು ಬರುವ ಕಾಲುವೆಗಳ ಪುನಶ್ಚೇತನ, ಕೆರೆಯ ಆವರಣದಲ್ಲಿ ಬೆಳೆದಿರುವ ಗಿಡಗಂಟೆಗಳನ್ನು
ತೆರವು ಮಾಡುವುದು, ಕೆರೆ ಕಟ್ಟೆಯ ದುರಸ್ತಿ, ಕೆರೆ ಅಂಚಿನ ಖಾಲಿ ಪ್ರದೇಶದಲ್ಲಿ ಸಸಿಗಳನ್ನು ಬೆಳೆಸುವುದು, ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ ನಿಧಿಯಲ್ಲಿ ಕೆರೆಯ ಅಂಗಳವನ್ನು ಸುಂದರೀಕರಣಗೊಳಿಸುವುದು ಎಲ್ಲಕ್ಕಿಂತ ಮುಖ್ಯವಾಗಿ ಕೆರೆಯ ಬಳಿ ಧ್ವಜಾರೋಹಣ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದ್ದು ಆ.15 ಮತ್ತು ಜ.26ರಂದು ಗ್ರಾಮದ ಹಿರಿಯರಿಂದ ಧ್ವಜಾರೋಹಣ ಮಾಡಲಾಗುತ್ತಿದೆ.

ಈ ಅಮೃತ ಸರೋವರದ ವಿಶೇಷ ಎಂದರೆ ನರೇಗಾ ಕಾರ್ಮಿಕರು ದಿನವಿಡೀ ಶ್ರಮವಹಿಸಿ ಕೆರೆಗಳ ನಿರ್ಮಾಣ ಮಾಡಿದ್ದಾರೆ. ಕಾರ್ಮಿಕರು ನಿರ್ಮಾಣ ಮಾಡಿರುವ ಕೆರೆಗಳಲ್ಲಿ ನೀರಿನ ರೂಪದಲ್ಲಿ ಅಮೃತ ಹರಿದುಬಂದು ಅಮೃತ ಸರೋವರವಾಗಿ ಬದಲಾಗಿವೆ. ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳ ನಿರಂತರ ಜಾಗೃತಿ, ಇದರಿಂದ ಆಗುವ ಪ್ರಯೋಜನದ ಬಗ್ಗೆ ಮಾಡಿದ ಮನವರಿಕೆ ಜಿಲ್ಲೆಯಲ್ಲಿ 140 ಕೆರೆಗಳ ನಿರ್ಮಾಣ ಮತ್ತು ಪುನರುಜ್ಜೀವನಕ್ಕೆ ಕಾರಣವಾಗಿದೆ. ಅಮೃತ ಸರೋವರ ಯೋಜನೆಯಡಿ ಜಿಲ್ಲೆಗೆ 283 ಕೆರೆಗಳ ನಿರ್ಮಾಣ ಮತ್ತು ಅಭಿವೃದ್ಧಿಯ ಗುರಿ ನೀಡಲಾಗಿದ್ದು ಇದುವರೆಗೆ 140 ಕೆರೆಗಳ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ 48 ಹೊಸ ಕೆರೆಗಳು ಮತ್ತು ಕೃಷಿ ಇಲಾಖೆ ವ್ಯಾಪ್ತಿಯ 92 ಕೆರೆಗಳು ಸೇರಿದ್ದು ಇದರಲ್ಲಿ ನೀರು ಹರಿದು ಬರುತ್ತಿದ್ದಂತೆ ಕೆರೆಯ ಸುತ್ತಲಿನ ಪರಿಸರವೇ ಬದಲಾಗಿದೆ.

ಎಲ್ಲೆಲ್ಲಿ ಎಷ್ಟು ಕೆರೆಗಳ ನಿರ್ಮಾಣ?
ಚಿಕ್ಕೋಡಿ ತಾಲೂಕಿನಲ್ಲಿ 84 ಕೆರೆಗಳ ಪೈಕಿ 65, ಅಥಣಿಯಲ್ಲಿ 19 ಕೆರೆಗಳಲ್ಲಿ 11, ರಾಮದುರ್ಗದ 26 ಕೆರೆಗಳ ಪೈಕಿ 17 ಮತ್ತು ಬೆಳಗಾವಿ ತಾಲೂಕಿನಲ್ಲಿ 29 ಕೆರಗಳ ಪೈಕಿ 10 ಕೆರೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. 127 ಕೆರೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಈ ಕೆರೆಗಳ ನಿರ್ಮಾಣದ ನಂತರ ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡಿಬಂದಿದೆ.

ಜಿಲ್ಲೆಯಲ್ಲಿ ಅಮೃತ ಸರೋವರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ನಿಗದಿತ ಗುರಿಯಲ್ಲಿ
ಈಗಾಗಲೇ ಶೇ.50ರಷ್ಟು ಕೆರೆಗಳನ್ನು ನಿರ್ಮಾಣ ಮತ್ತು ಪುನರುಜ್ಜೀವನಗೊಳಿಸಲಾಗಿದೆ.
ಹರ್ಷಲ್‌ ಭೋಯರ್‌,
ಜಿಪಂ ಸಿಇಒ, ಬೆಳಗಾವಿ

ಕೇಶವ ಆದಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.