![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 29, 2020, 6:08 AM IST
ಬೆಳಗಾವಿ: ಲಾಕ್ಡೌನ್ ವೇಳೆ ಎರಡು ತಿಂಗಳಿಂದ ಜೀವದ ಹಂಗು ಲೆಕ್ಕಿಸದೇ ನಗರದಲ್ಲಿ ಸ್ವಚ್ಛತೆ ಕಾಪಾಡುತ್ತಿರುವ ಪೌರ ಕಾರ್ಮಿಕರಿಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಉಪಾಹಾರ ನೀಡಿ ಗೌರವಿಸಿದರು.
ಎಲ್ಲ ಪೌರ ಕಾರ್ಮಿಕರನ್ನು ಉಪಾಹಾರಕ್ಕೆ ಆಹ್ವಾನಿಸಿದ ಶಾಸಕ ಅಭಯ ಪಾಟೀಲರು, ಉಪಾಹಾರ ಉಣಬಡಿಸಿದರು. ಜತೆಗೆ ತಾವೂ ಅವರೊಂದಿಗೆ ಉಪಾಹಾರ ಸವಿದರು. ಸುಮಾರು 600 ಪೌರ ಕಾರ್ಮಿಕರು ನಗರದ ಮಹಾವೀರ ಭವನದಲ್ಲಿ ಜಮಾಯಿಸಿದ್ದರು. ಎಲ್ಲ ಪೌರ ಕಾರ್ಮಿಕರೊಂದಿಗೆ ಕೆಲ ಹೊತ್ತು ಸಮಯ ಕಳೆದರು.
ಎರಡು ತಿಂಗಳಿಂದ ಸ್ವಚ್ಛತೆಗೆ ಶ್ರಮ ವಹಿಸಿ ದುಡಿಯುತ್ತಿರುವ ಪೌರ ಕಾರ್ಮಿಕರ ಸಮಸ್ಯೆ ಆಲಿಸಿದ ಶಾಸಕ ಅಭಯ, ನಂತರ ಪ್ರತಿಯೊಬ್ಬ ಪೌರ ಕಾರ್ಮಿಕರಿಗೂ ಆಹಾರದ ಕಿಟ್ ನೀಡಿ ಬೀಳ್ಕೊಟ್ಟರು. ಈ ವೇಳೆ ಮಾತನಾಡಿದ ಶಾಸಕ ಅಭಯ ಪಾಟೀಲ, ಲಾಕ್ಡೌನ್ ವೇಳೆ ಬೆಳಗಾವಿಯ ಪೌರ ಕಾರ್ಮಿಕರು ನಿರಂತರ ಕೆಲಸ ಮಾಡಿದ್ದಾರೆ. ಸ್ವಚ್ಛತೆಗಾಗಿ ಸಮಯವನ್ನೂ ಲೆಕ್ಕಿಸದೇ ದುಡಿಯುತ್ತಿದ್ದಾರೆ. ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಂತೆಯೇ ಕೊರೊನಾ ವಾರಿಯರ್ಸ್ಗಳಾಗಿ ಪೌರ ಕಾರ್ಮಿಕರು ದುಡಿಯುತ್ತಿದ್ದಾರೆ. ಈ ಕಾರ್ಮಿಕರ ಸೇವೆ ನಿಜಕ್ಕೂ ಅಮೂಲ್ಯವಾಗಿದೆ ಎಂದು ಹೇಳಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.