![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2018, 6:05 AM IST
ಬೆಳಗಾವಿ: ಲಿಂಗಾಯತ ಮುಖಂಡ ಯಡಿಯೂರಪ್ಪ ಪ್ರತ್ಯೇಕ ಧರ್ಮದ ಹೋರಾಟ ಬೆಂಬಲಿಸದೇ ಇರುವುದಕ್ಕೆ
ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ನಾಗನೂರು ರುದ್ರಾಕ್ಷಿ ಮಠದ ಶ್ರೀ ಡಾ.ನಾಗನೂರು ಸಿದ್ದರಾಮ ಸ್ವಾಮೀಜಿ ಹೇಳಿದರು.
ನಗರದಲ್ಲಿ ಭಾನುವಾರ ಜಿಲ್ಲೆಯ ಲಿಂಗಾಯತ ಶಾಸಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಯಡಿಯೂರಪ್ಪ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಬೆಂಬಲಿಸಲಿಲ್ಲ.
ಸ್ವಯಂಕೃತ ಅಪರಾಧ ಮಾಡಿ ಸಿಎಂ ಸ್ಥಾನದಿಂದ ವಂಚಿತರಾದರು. ಒಂದು ವೇಳೆ ಹೋರಾಟ ಬೆಂಬಲಿಸಿದ್ದರೆ
ಬಿಜೆಪಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬಹುಮತ ಪಡೆದು ಬಿಎಸ್ವೈ ಮುಖ್ಯಮಂತ್ರಿ ಆಗಿರುತ್ತಿದ್ದರು ಎಂದರು.
2008ರ ವಿಧಾನಸಭಾ ಚುನಾವಣೆ ವೇಳೆ ಯಡಿಯೂರಪ್ಪ ಲಿಂಗಾಯತರ ಬೆಂಬಲ ಪಡೆದು ಮುಖ್ಯಮಂತ್ರಿ ಆಗಿದ್ದರು. 2018ರಲ್ಲಿ ಕಾಂಗ್ರೆಸ್ಗೆ ಆಡಳಿತ ವಿರೋಧಿ ಅಲೆಯಿದ್ದರೂ ಲಿಂಗಾಯತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರಿಂದ 78 ಸ್ಥಾನ ಪಡೆದು ಅಧಿಕಾರ ನಡೆಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಲಿಂಗಾಯತ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಚಿವ ಸ್ಥಾನ ಹಂಚಿಕೆ ವೇಳೆ ಅನ್ಯಾಯವಾಗುತ್ತಿದೆ. ಶಾಸಕರ ಸಂಖ್ಯೆಯ ಅನುಗುಣವಾಗಿ ಸಚಿವ ಸ್ಥಾನ ನೀಡಬೇಕು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.