Congress ಮನೆಯಲ್ಲೀಗ ಚಿಕ್ಕೋಡಿ ಫಲಿತಾಂಶದ ಬೆಂಕಿ!
Team Udayavani, Jun 8, 2024, 6:30 AM IST
ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಫಲಿತಾಂಶದ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಕಚ್ಚಾಟ ಆರಂಭವಾಗಿದೆ. ಫಲಿತಾಂಶ ಕಾಂಗ್ರೆಸ್ ಪರವಾಗಿ ಬಂದಿದ್ದರೂ ಆ ಪಕ್ಷದ ನಾಯಕರ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದಾರೆ.
ಈ ಅಸಮಾಧಾನದ ಕೇಂದ್ರಬಿಂದು ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಎಂಬುದು ಗಮನಿಸಬೇಕಾದ ಸಂಗತಿ. ಚುನಾವಣೆಯ ಫಲಿತಾಂಶ ಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಲಕ್ಷ್ಮಣ ಸವದಿ ಹಾಗೂ ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.
ಚುನಾವಣೆ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾಗೆ ಅಥಣಿ ಕ್ಷೇತ್ರದಿಂದ ಒಳ್ಳೆಯ ಮು°ನಡೆ ಕೊಡಿಸುತ್ತೇನೆ ಎಂದು ಹೇಳಿದ್ದ ಸವದಿ ಬಳಿಕ ಸುಮ್ಮನಾಗಿದ್ದೇಕೆ? ಕೊಟ್ಟ ಮಾತನ್ನು ಯಾಕೆ ಉಳಿಸಿಕೊಳ್ಳಲಿಲ್ಲ ಎಂಬುದು ಸತೀಶ ಜಾರಕಿಹೊಳಿ ಪ್ರಶ್ನೆ.
ಕಳೆದ ಎರಡು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸತೀಶ ಅವರ ಮಾತಿನ ವೈಖರಿ, ಇದಕ್ಕೆ ಪ್ರತಿಯಾಗಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಆಡಿದ ಮಾತುಗಳು ಹಾಗೂ ಹಾಕಿದ ಸವಾಲು; ಅದಕ್ಕೆ ಪ್ರತಿಯಾಗಿ ಸತೀಶ ಜಾರಕಿಹೊಳಿ ಉತ್ತರ, ಅವರ ಬೆಂಬಲಿಗರ ಪ್ರತಿಕ್ರಿಯೆಗಳ ನಡುವೆಯೇ ಶಾಸಕ ತಮ್ಮಣ್ಣವರ ಅಥಣಿಯಲ್ಲಿ ಸವದಿ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇದೆಲ್ಲಕ್ಕೂ ಮಿಗಿಲಾದ ಸಂಗತಿ ಎಂದರೆ ಸತೀಶ ಅವರು ಸವದಿ ವಿರುದ್ಧ ನೇರವಾಗಿ ತಿರುಗಿ ಬಿದ್ದಿರುವುದು. ಲೋಕಸಭೆ ಚುನಾವಣೆಯಲ್ಲಿ ಅಥಣಿಯಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿರುವುದೇ ಇದಕ್ಕೆ ಕಾರಣ. ಸತೀಶ ಅವರ ಈ ಕೋಪ ಈಗ ರಾಜ್ಯ ರಾಜಕಾರಣವನ್ನು ಸುತ್ತಿಕೊಂಡಿದೆ. ಸವದಿ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಬಿರುಕು ಮತ್ತಷ್ಟು ದೊಡ್ಡದಾಗುವ ಲಕ್ಷಣಗಳು ಕಾಣುತ್ತಿವೆ.
-ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್
Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ
ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!
Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.