ಅಕ್ಕಿ ಖರೀದಿ ಗುತ್ತಿಗೆದಾರರಿಂದ ಕಮಿಷನ್‌ ಫಿಕ್ಸ್‌: ಮಾಜಿ ಸಿಎಂ ಬೊಮ್ಮಾಯಿ

ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನು ಹೇಳಿದ್ದಾರೆ ಎಂಬುದು ಗೊತ್ತು

Team Udayavani, Jun 26, 2023, 6:55 AM IST

ಅಕ್ಕಿ ಖರೀದಿ ಗುತ್ತಿಗೆದಾರರಿಂದ ಕಮಿಷನ್‌ ಫಿಕ್ಸ್‌: ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ಅಕ್ಕಿ ಖರೀದಿಯಲ್ಲಿ ಹುನ್ನಾರ ನಡೆದಿದೆ. ಏನಾಗಿದೆ ಎಂಬುದರ ಬಗ್ಗೆ ಕೆಲವೇ ದಿನಗಳಲ್ಲಿ ಬಣ್ಣ ಬಯಲಾಗಲಿದೆ. ಬೆಂಕಿ ಹತ್ತಿದಾಗ ಗಳ ಎಣಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ನಮ್ಮ ಮೇಲೆ ಕಮಿಷನ್‌ ಗೂಬೆ ಕೂರಿಸಿದ್ದ ಕಾಂಗ್ರೆಸ್‌ ಈಗ ಗುತ್ತಿಗೆದಾರರಿಂದ ಕಮಿಷನ್‌ ಪರ್ಸೆಂಟೇಜ್‌ ಫಿಕ್ಸ್‌ ಮಾಡಿಕೊಂಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.

ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲವೆಂದು ಪ್ರಧಾನಿ ಮೋದಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಪ್ರತಿಭಟನೆ ಮಾಡಲು ಕಾಂಗ್ರೆಸ್‌ಗೆ ಯಾವ ನೈತಿಕತೆ ಇಲ್ಲ. ಸರ್ಕಾರದಲ್ಲಿ ಇದ್ದುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಅಕ್ಕಿ ಖರೀದಿಯಲ್ಲಿ ಹುನ್ನಾರ ಆಗಿದೆ. ಏನಾಗಿದೆ ಎಂಬುದು ನನಗೆ ಗೊತ್ತು. ಬಣ್ಣ ಬಯಲಾಗಲಿದೆ ಎಂದರು.

ಕಮಿಷನ್‌ ಹೆಸರಲ್ಲಿ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದ ಕಾಂಗ್ರೆಸ್‌ ಈಗ ಪರ್ಸೆಂಟೇಜ್‌ ಫಿಕ್ಸ್‌ ಮಾಡುತ್ತಿದೆ. ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನು ಹೇಳಿದ್ದಾರೆ ಎಂಬುದು ಗೊತ್ತು. ಅಧಿ ಕಾರ ಇಲ್ಲದೆ ಹಸಿದು ಕುಳಿತಿದ್ದ ದೆಹಲಿಯವರಿಗೆ ಈಗ ಕರ್ನಾಟಕ ಎಟಿಎಂ ಆಗಿದೆ. ಅಧಿ ಕಾರ ಹಿಡಿದು ಒಂದೇ ತಿಂಗಳಲ್ಲಿ ಎಲ್ಲ ಕಡೆಗಳಿಂದಲೂ ಪರ್ಸಂಟೇಜ್‌ ಫಿಕ್ಸ್‌ ಆಗುತ್ತಿದೆ ಎಂದರು.

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿಯಿಂದ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಸರ್ಕಾರ ಬಂದಾಗಿನಿಂದ ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ. ನಾವು ಎಲ್ಲದಕ್ಕೂ ತಯಾರಾಗಬೇಕು. ಇಲ್ಲದಿದ್ದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಡೀಸೆಲ್‌ ಇಲ್ಲದೇ ಬಸ್‌ಗಳು ನಿಲ್ಲುತ್ತವೆ: ಬೊಮ್ಮಾಯಿ
ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಯಿಂದ ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಲಿದೆ. ಡೀಸೆಲ್‌ ಇಲ್ಲದೇ ಬಸ್‌ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ವಿದ್ಯುತ್‌ ಖರೀದಿಸಲು ಹಾಗೂ ಉತ್ಪಾದಿಸಲು ಹಣ ಇಲ್ಲ. ಕರ್ನಾಟಕ ಕತ್ತಲಲ್ಲಿ ಮುಳುಗಲಿದೆ. ಗೃಹಲಕ್ಷ್ಮೀ ಸೇರಿ ಎಲ್ಲ ಗ್ಯಾರಂಟಿಗಳಿಗೆ ಕುಂಟು ನೆಪ ಹೇಳಿ ಷರತ್ತು ಹಾಕಿದ್ದು ಏಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲದಿರುವ ಬಗ್ಗೆ ಸರ್ಕಾರಕ್ಕೆ ಚಿಂತನೆ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಸಿದ್ದು-ಡಿಕೆಶಿ ಹೊಡೆದಾಡಿಕೊಳ್ತಾರೆ: ಯತ್ನಾಳ
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರ ಐದು ವರ್ಷ ನಡೆಯಲ್ಲ. ಐದು ವರ್ಷ ಪೂರ್ತಿ ಮಾಡುವ ಸರ್ಕಾರ ಇದಲ್ಲ. ಲೋಕಸಭೆ ಚುನಾವಣೆ ಮುನ್ನ ಇಲ್ಲವೇ ಅದರ ನಂತರ ಆ್ಯಕ್ಸಿಡೆಂಟ್‌ ಆಗುತ್ತದೆ. ಅಷ್ಟರೊಳಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಿರಾಣಿ ವಿರುದ್ಧ ಯತ್ನಾಳ ಪರೋಕ್ಷ ವಾಗ್ಧಾಳಿ
ವಿಜಯಪುರದಲ್ಲಿ ನನ್ನ ಚುನಾವಣೆ ಅಷ್ಟೊಂದು ಸುಲಭ ಇರಲಿಲ್ಲ. ಬೆಳಗಾವಿ, ಬೆಂಗಳೂರು ಮತ್ತೆ ಬೇರೆ ಕಡೆಗಳಿಂದ ಹಣ ಕಳುಹಿಸಿ ಸೋಲಿಸಲು ಯತ್ನಿಸಿದರು. ನನ್ನನ್ನು ಸೋಲಿಸಲು ಬಂದವರು ತಾವೇ ಸೋತರು ಎಂದು ಒಂದೇ ವೇದಿಕೆಯಲ್ಲಿದ್ದ ಮುರುಗೇಶ ನಿರಾಣಿ ವಿರುದ್ಧ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ ವಾಗ್ಧಾಳಿ ನಡೆಸಿದರು. ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಯಾರು ಯಾರನ್ನು ಸೋಲಿಸಲು ಯತ್ನಿಸಿದ್ದಾರೆ ಅಂತ ಬಿಜೆಪಿ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನು ಕೇಳದಿದ್ದರೆ ಇದೇ ಗತಿ ಆಗುವುದು. ಹಿಂದೂ ಧ್ವನಿಯನ್ನು ಕುಗ್ಗಿಸುವ ಹುನ್ನಾರ ರಾಜ್ಯದಲ್ಲಿ ನಡೆಯುತ್ತಿದೆ. ಸಿ.ಟಿ.ರವಿ ಅವರನ್ನು ಸೋಲಿಸಿದರು. ಸಂತೋಷ ಬಗ್ಗೆಯೂ ಅಪಪ್ರಚಾರ ಮಾಡಿದರು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಕಾರ್ಯಕರ್ತರ ಭಾವನೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.