ಮೂಡಲಗಿ: ಈಶ್ವರಪ್ಪ ರಾಷ್ಟ್ರ ಧ್ವಜ ಹೇಳಿಕೆಗೆ ಕಾಂಗ್ರೆಸ್ ಬ್ಲಾಕ್ ಕಮಿಟಿ ಆಕ್ರೋಶ


Team Udayavani, Feb 21, 2022, 6:27 PM IST

ಮೂಡಲಗಿ: ಈಶ್ವರಪ್ಪ ರಾಷ್ಟ್ರ ಧ್ವಜ ಹೇಳಿಕೆಗೆ ಕಾಂಗ್ರೆಸ್ ಬ್ಲಾಕ್ ಕಮಿಟಿ ಆಕ್ರೋಶ

ಮೂಡಲಗಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅರಭಾವಿ ಮತ್ತು ಕೌಲಜಗಿ ಕಾಂಗ್ರೆಸ್ ಬ್ಲಾಕ್ ಕಮಿಟಿಯಿಂದ ಸೋಮವಾರ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆಯಲ್ಲಿ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ದೇಶದಲ್ಲಿ ರಾಷ್ಟ್ರ ಧ್ವಜವನ್ನು ತಾಯಿಗೆ ಸಮಾನವಾಗಿ ಗೌರವಿಸಲಾಗುತ್ತಿದೆ. ಹರುಕು ಬಾಯಿ ಸಚಿವ ಈಶ್ವರಪ್ಪ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿರುವ ಹಿನ್ನೆಲೆ ಈಶ್ವರಪ್ಪ ವಿರುದ್ದ ಪೊಲೀಸರು ದೇಶದ್ರೋಹ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಳ್ಳಬೇಕು. ಸಚಿವರಾಗಿ ಹೀಗೆ ಮಾತನಾಡಿರುವುದು ಸರಿಯಲ್ಲ ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ಈಶ್ವರಪ್ಪ  ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.

ಬಿ.ಬಿ.ಬೆಳಕೂಡ ಮಾತನಾಡಿ, ಇವತ್ತೆ ಈಶ್ವರಪ್ಪ ಅವರನ್ನು ವಜಾಮಾಡಿ ಜನರ ತೇರೆಗೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚುಮಾಡಿ ರಾಜ್ಯದ ಜನರ ಹಿತ ಕಾಪಾಡುವ ಬಗ್ಗೆ ಕಲಾಪದಲ್ಲಿ ಅನೇಕ ಚರ್ಚೆನಡೆಸಬೇಕಾಗಿದೆ,  ಆದರೆ ಒಬ್ಬರಿಗೋಸ್ಕರ ಕಲಾಪದಲ್ಲಿ ಚರ್ಚೆಯಾಗದಿರುವ ವಿಷಾದಕರ ಸಂಗತಿ, ರಾಷ್ಟ್ರ ಅಪಮಾನ ಮಾಡಿರುವ ಈಶ್ವರಪ್ಪಗೆ ಬಿಜೆಪಿ ಸರಕಾರ ಬೆಂಬಲಕ್ಕೆ ನಿಂತಿರುವುದು ಖಂಡನಿಯ ಎಂದರು.

ಬಿ.ಬಿ.ಹಂದಿಗುಂದ ಮಾತನಾಡಿ, ನಮ್ಮ ದೇಶಕ್ಕೆ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡು ರೀತಿಯಲ್ಲಿ ಮತುಗಳನ್ನಾಡಿ ದೇಶದಲ್ಲಿ ಹಗೂ ರಾಜ್ಯದಲ್ಲಿ ಕೋಮುಸೌದಾರ್ಹತೆ ಕದಡುವ ರೀತಿಯಲ್ಲಿ ಮಾತನಾಡಿದ ಈಶ್ವರಪ್ಪ ಅವರನ್ನು ಶ್ರೀಘ್ರವಾಗಿ ಸಂಪುಟದಿಂದ  ವಜಾ ಮಾಡಬೇಕೆಂದರು,

ಕಾಂಗ್ರೇಸ ಮುಖಂಡರಾದ ಎಸ್.ಆರ್.ಸೋನವಾಲ್ಕರ, ಸಿದ್ದಪ್ಪ ಮುಂಡಗಿನಾಳ, ಮಂಜು ಮಸಗುಪ್ಪಿ, ಅರಭಾವಿ ಬ್ಲಾಕ್ ಅಧ್ಯಕ್ಷ ಗುರುರಾಜ ಪೂಜೇರಿ ಮಾತನಾಡಿ, ಈಶ್ವರಪ್ಪ ಅವರು ರಾಜೀನಾಮೆ ಕೊಡುವರೆಗೂ ಕಾಂಗ್ರೇಸ್ ಕಾರ್ಯಕರ್ತರ ಈ ಹೋರಾಟ ಹೀಗೆ ಮುಂದು ವರೆಯುತ್ತದೆ. ಶೀಘ್ರವಾಗಿ ಈಶ್ವರಪ್ಪ ಅವರ ವಿರುದ್ದ ಕಾನೂನು ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿ, ರಾಜ್ಯದ ಜನತೆಯ ಕುಂದುಕೊರತೆಗಳ ಬಗ್ಗೆ ಸುಗಮ ಕಲಾಪ ನಡೆಸಲು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಲ್ಲು ಮುಂದಾಗಬೇಕೆಂದರು.

ಈ ಪ್ರತಿಭಟನೆಯಲ್ಲಿ ಅರಭಾವಿ ಬ್ಲಾಕ್ ಅಧ್ಯಕ್ಷ ಗುರುರಾಜ ಪೂಜೇರಿ, ಕೌಜಲಗಿ ಬ್ಲಾಕ್ ಅಧ್ಯಕ್ಷ  ಲಗಮನ್ನ ಕಳಸನ್ನವರ, ಮಹಿಳಾ ಬ್ಲಾಕ್ ಅಧ್ಯಕ್ಷೆ ಸುಜಾತಾ ಹಿರೇಮಠ, ಮಾರುತಿ ಮಾವರಕರ, ಶ್ರೀಕಾಮತ ದೇವರಮನಿ, ಶ್ರೀನಾಥ ಕರಿಹೊಳಿ, ಕುಮಾರ ಕಾತರಕಿ, ಶ್ರೀಕಾಂತ ಕರಿಗಾರ, ಸುನೀಲ ಯತ್ತಿನಮನಿ, ನಾಗೇಂದ್ರ ಕಬ್ಬೂರ, ಭೀಮಶಿ ದೊಡ್ಡಮನಿ ಹಾಗೂ ಅನೇಕ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.