![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 28, 2021, 1:20 PM IST
ಬೆಳಗಾವಿ: ದೇಶದ ಆಡಳಿತ ಯಂತ್ರ ಸುಸೂತ್ರವಾಗಿ ನಡೆಯಲು ಹಾಗೂ ದೇಶದ ಜನತೆಯಲ್ಲಿ ಸಮಾನತೆ ತರಲು 1949 ನ.26ರಂದು ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತರಲು ನಿರ್ಣಯ ಅಂಗೀಕರಿಸಲಾಯಿತು. ಅಂದಿನಿಂದ ದೇಶದಲ್ಲಿ ನ.26ರಂದು ಸಂವಿಧಾನ ದಿನಾಚರಣೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸಲು ರಾಷ್ಟ್ರಕ್ಕೆ ಸಂವಿಧಾನ ಸಮರ್ಪಣೆ ಗೊಂಡಿದೆ. ಸಂವಿಧಾನದ ಮೂಲ ಆಶಯಗಳು ಮತ್ತು ಕಾನೂನು ಅಂಶಗಳನ್ನು ಬಹಳಷ್ಟು ಜನ ತಿಳಿದುಕೊಳ್ಳದೆ ಇರುವುದರಿಂದ ಸರ್ಕಾರಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ ಮಾತನಾಡಿ ಸಂವಿಧಾನ ಶಿಲ್ಪಿ ಡಾ| ಬಿಆರ್ ಅಂಬೇಡ್ಕರ್ ಹಾಗೂ ಅನೇಕರು ಸೇರಿಕೊಂಡು ಬರೆದಿರುವ ಸಂವಿಧಾನ ದೇಶದ ಜನತೆಗೆ ಪವಿತ್ರ ಗ್ರಂಥವಾಗಿದೆ ಇದರಡಿ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಕರ್ತವ್ಯಗಳು ದೊರೆಯುತ್ತಿದೆ ಎಂದರು.
ಎಸ್.ಸಿ. ಮೋರ್ಚಾದ ಜಿಲ್ಲಾ ಅಧ್ಯಕ್ಷ ಜಿತೇಂದ್ರ ಮಾದರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲೇಶ ಕೋಲ್ಕಾರ್, ರಾಜ್ಯ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪೃಥ್ವಿಸಿಂಗ, ಮಾಜಿ ಜಿಪಂ ಸದಸ್ಯ ಬಸವರಾಜ್ ಬಂಡಿವಡ್ಡರ್ ಉಪಸ್ಥಿತರಿದ್ದರು. ಎಸ್ಸಿ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಸಂಜಯ್ ಮೂಲಿಮನಿ ಸ್ವಾಗತಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.