ಹೊಲದಲ್ಲೇ ಕೊಳೆಯುತ್ತಿದೆ ಬೆಳೆ


Team Udayavani, Apr 25, 2020, 2:08 PM IST

bg-tdy-1

ಬೈಲಹೊಂಗಲ:  ಕೋವಿಡ್ 19 ಸೋಂಕು ತಡೆಗೆ ಸರಕಾರ ಲಾಕ್‌ಡೌನ್‌ ಜಾರಿ ಮಾಡಿರುವುದರಿಂದ ರೈತರು ಬೆಳೆದ ತರಕಾರಿ ಮತ್ತು ಇನ್ನಿತರ ಬೆಳೆ ಮಾರಾಟ ಮಾಡಲು ಸಾಧ್ಯವಾಗದೆ ಸಂಕಷ್ಟ ಪಡುತ್ತಿದ್ದಾರೆ. ಮುಂದೇನು ಎಂದು ದಿಕ್ಕು ತೋಚದೆ ಸರಕಾರದ ಸಹಾಯ ಹಸ್ತಕ್ಕಾಗಿ ಕಾಯುತ್ತಿದ್ದಾರೆ.

ತಾಲೂಕಿನ ಮಲ್ಲಮ್ಮನ ಬೆಳವಡಿ, ಬೂದಿಹಾಳ, ದೊಡವಾಡ,ಉಡಿಕೇರಿ,ಸುತಗಟ್ಟಿ, ಕರಿಕಟ್ಟಿ, ಹಾಗೂ ಇನ್ನು ಅನೇಕ ಗ್ರಾಮಗಳ ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಸುರಿಸಿ ಬೆಳೆದ ಫಸಲು ಆದಾಯ ತರದೆ ಹಾಳಾಗುತ್ತಿರುವುದರಿಂದ ಕಂಗಾಲಾಗಿದ್ದಾರೆ.

ರೂಟರ್‌ ಹೊಡೆಸಿ ನಾಶ: ಮಲ್ಲಮ್ಮನ ಬೆಳವಡಿ ಗ್ರಾಮದ ರೈತರಾದ ಈರಪ್ಪ ಶಿವಬಸಪ್ಪ ಹಳ್ಳದಕೇರಿಯವರು ತಮ್ಮ 2.5 ಎಕರೆ ಹೊಲದಲ್ಲಿ ಹೂಕೋಸು (ಪ್ಲವರ್‌ ಬೆಳೆದಿದ್ದರು) 4 ಸಾವಿರ ತೆರವು ಸಸಿ ನಾಟಿ ಮಾಡಿ ರಸಗೊಬ್ಬರ ಮತ್ತು ಇತರೆ ಖರ್ಚು ಸೇರಿ ಸುಮಾರು 1 ಲಕ್ಷ 10 ಸಾವಿರ ರೂಪಾಯಿ ಖರ್ಚಾಗಿದೆ. ಲಾಕ್‌ಡೌನ್‌ ಜಾರಿಯಾಗಿರುವುದರಿಂದ ಮಾರುಕಟ್ಟೆಗಳು ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಟಾವಿಗೆ ಬಂದ ಹೂಕೋಸನ್ನು ಯಾರೊಬ್ಬರೂ ತೆಗೆದುಕೊಳ್ಳಲು ಬಾರದಿರುವುದರಿಂದ ಬೆಳೆದ ಹೊಲದಲ್ಲೇ ರೂಟರ್‌ ಹೊಡೆಸಿ ನಾಶ ಮಾಡಲು ತೀರ್ಮಾನಿಸಿದ್ದೇನೆ. ಹೋಕೋಸು ಮಾರಾಟವಾಗಿದ್ದರೆ ಸುಮಾರು 2.5 ಲಕ್ಷ ರೂಪಾಯಿ ಆದಾಯ ಬರುತ್ತಿತ್ತು ಎಂದು ರೈತ ಈರಪ್ಪ ನೋವಿನಿಂದ ಹೇಳಿಕೊಳ್ಳುತ್ತಾರೆ.

ಹೊಲದಲ್ಲೇ ಉಳಿದ ಬೆಳೆ: ಲಾಕ್‌ಡೌನ್‌ ಮತ್ತು ಬೆಲೆ ಕುಸಿತದ ಕಾರಣ 2 ಎಕರೆ ಹೊಲದಲ್ಲಿ ಬೆಳೆದ ಟೊಮೆಟೋ ಮತ್ತು ಮೆಣಸಿನಕಾಯಿಯನ್ನು ಬೂದಿಹಾಳ ಗ್ರಾಮದ ರೈತ ವೀರೇಶ ಕುಲಕರ್ಣಿ ಹೊಲದಲ್ಲೇ ಬಿಟ್ಟಿದ್ದಾರೆ. ಇದನ್ನು ಬೆಳೆಯಲು ಹಾಕಿದ 3 ತಿಂಗಳ ಶ್ರಮ ಸಂಪೂರ್ಣ ವ್ಯರ್ಥವಾಗಿದೆ. ಬಾಡಿಗೆ ವಾಹನ ಮುಖಾಂತರ ಸಮೀಪದ ಹಳ್ಳಿಗಳಲ್ಲಿ ಮಾರಲು ಹೋದರೆ ಅದರ ಬಾಡಿಗೆ ನೀಡುವಷ್ಟು ಲಾಭವಾಗುತ್ತಿಲ್ಲ. 25 ಕೆಜಿ ತೂಕದ ಟ್ರೇಯನ್ನು ಕೇವಲ 50-60 ರೂಪಾಯಿಗೂ ಕೇಳುತ್ತಿಲ್ಲ. ಸಗಟು ವ್ಯಾಪಾರವಂತೂ ನಿಂತೇ ಹೋಗಿದೆ. ಹೀಗಾಗಿ ದುಡಿದ ಆಳುಗಳ ಪಗಾರ ಕೊಡಲು ಆಗುತ್ತಿಲ್ಲ. ಸರಕಾರ ಕೇವಲ ಭರವಸೆ ನೀಡುತ್ತಿದೆ ಹೊರತು ತುರ್ತು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಅವರು ನೋವು ವ್ಯಕ್ತ ಪಡಿಸುತ್ತಾರೆ.

ಲಾಕ್‌ಡೌನ್‌ ಹೀಗೆ ಮುಂದುವರಿಯುತ್ತದೆಯೋ ಅಥವಾ ಕೊನೆಗೊಳ್ಳುತ್ತದೆಯೋ ಎಂಬುದು ಈಗಿನ ಸನ್ನಿವೇಶದಲ್ಲಿ ಹೇಳಲಾಗುತ್ತಿಲ್ಲ. ಆದ್ದರಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

 

-ಸಿ.ವೈ.ಮೆಣಸಿನಕಾಯಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.