Dalit CM ಬಗ್ಗೆ ಲೋಕಸಭೆ ಚುನಾವಣೆ ನಂತರ ದನಿ ಎತ್ತುತ್ತೇವೆ: ಸಚಿವ ಸತೀಶ ಜಾರಕಿಹೋಳಿ
ದಲಿತ ಸಿಎಂ ಕೂಗು ಇಂದು, ನಿನ್ನೆಯದಲ್ಲ...ಕ್ಯಾಪ್ಟನ್ಗಳನ್ನು ರೆಡಿ ಮಾಡಬೇಕಿದೆ
Team Udayavani, Mar 7, 2024, 4:32 PM IST
ಬೆಳಗಾವಿ: ”ದಲಿತರು ಸಿಎಂ ಆಗಬೇಕೆಂಬ ಕೂಗು ಇಂದು, ನಿನ್ನೆಯದಲ್ಲ. ಇದು ಮಲ್ಲಿಕಾರ್ಜುನ ಖರ್ಗೆ ಅವರಿಂದ ಆರಂಭವಾಗಿದ್ದು, ದಲಿತರು ಸಿಎಂ ಆಗಬೇಕೆಂಬ ಬೇಡಿಕೆ ಕಾಂಗ್ರೆಸ್ ನಲ್ಲಿ ಅಷ್ಟೇ ಅಲ್ಲ. ಬಿಜೆಪಿ, ಜೆಡಿಎಸ್ ನಲ್ಲೂ ಇದೆಯಾದರೂ ಇದುವರೆಗೆ ದಲಿತರು ಯಾವುದೇ ಪಕ್ಷದಲ್ಲಿ ಸಿಎಂ ಆಗಲು ಸಾಧ್ಯವಾಗಿಲ್ಲ” ಎಂದು ಸಚಿವ ಸತೀಶ ಜಾರಕಿಹೋಳಿ ಗುರುವಾರ ಹೇಳಿಕೆ ನೀಡಿದ್ದಾರೆ.
”ಕಳೆದ 20 ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ, 2013ರಲ್ಲಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಆಗಬೇಕೆಂಬ ಕೂಗು ಇತ್ತು. ಆದರೆ ಅವರಿಬ್ಬರಿಗೂ ಸಿಎಂ ಆಗುವ ಭಾಗ್ಯ ಸಿಗಲಿಲ್ಲ. ನಾನು ಅನೇಕ ಸಮಾವೇಶಗಳಲ್ಲಿ ದಲಿತರು ಸಿಎಂ ಆಗಲೇಬೇಕೆಂದು ಹೇಳಿದ್ದೇನೆ.ಎಸ್ಸಿ, ಎಸ್ಟಿ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ನಮ್ಮ ಕಡೆ ಸೈನಿಕರು ಹೆಚ್ಚಿಗೆ ಇದ್ದಾರೆ. ಆದರೆ ಸೈನಿಕರನ್ನು ಲೀಡ್ ಮಾಡುವ ಕ್ಯಾಪ್ಟನ್ ಇಲ್ಲ. ಕ್ಯಾಪ್ಟನ್ ಪಾತ್ರಗಳನ್ನು ರೆಡಿ ಮಾಡಬೇಕಿದೆ” ಎಂದರು.
ಮುಖ್ಯವಾಗಿ ಹೈಕಮಾಂಡ್ ಎದುರು ಪ್ರಭಾವ ಬೀರುವಲ್ಲಿ ವಿಫಲರಾಗಿದ್ದೇವೆ. ಲೋಕಸಭೆ ಚುನಾವಣೆ ನಂತರ ದಲಿತ ಸಿಎಂ ಬಗ್ಗೆ ದನಿ ಎತ್ತುತ್ತೇವೆ. ಈಗ ಲೋಕಸಭೆಯಲ್ಲಿ ಹೆಚ್ಚಿನ ಸೀಟು ಗೆಲ್ಲಲು ಆದ್ಯತೆ ನೀಡುತ್ತೇವೆ ಎಂದರು.
ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳ ಲೋಕಸಭೆ ಅಭ್ಯರ್ಥಿಗಳ ಹೆಸರು 1ನೇ ಪಟ್ಟಿಯಲ್ಲಿ ಆಗುವದಿಲ್ಲ. ಎರಡನೇ ಪಟ್ಟಿಯಲ್ಲಿ ಬಿಡುಗಡೆಯಾಗುತ್ತದೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಎಲ್ಲ ರಾಜಕಾರಣಿಗಳು ಎರಡ್ಮೂರು ದಿನಗಳಲ್ಲಿ ಇನ್ನೊಂದು ಸಭೆ ಮಾಡಲು ಸೂಚಿಸಿದ್ದಾರೆ ಎಂದರು.
ಶಾಸಕ ಲಕ್ಷ್ಮಣ ಸವದಿಗೆ ಒಳ್ಳೆಯ ಭವಿಷ್ಯವಿದೆ ಎಂದು ನಾನೇ ಮೊದಲು ಹೇಳಿದ್ದೇನೆ. ಲೋಕಸಭೆ ಚುನಾವಣೆ ನಂತರ ಲಕ್ಷ್ಮಣ ಸವದಿ ಅವರಿಗೆ ಒಳ್ಳೆಯ ಅವಕಾಶ ದೊರಕಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.