
ಶ್ವಾಸಕೋಶ ತೊಂದರೆಯಿಂದ ಹಸುಗೂಸು ಸಾವು
Team Udayavani, Jul 29, 2018, 6:15 AM IST

ಬೆಳಗಾವಿ: ಗೋಕಾಕ್ನ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ ಹಸುಗೂಸು ತೀವ್ರ ಶ್ವಾಸಕೋಶ ತೊಂದರೆಯಿಂದಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶನಿವಾರ ಬೆಳಗ್ಗೆ ಮೃತಪಟ್ಟಿದೆ.
ಹೆರಿಗೆ ನೋವಿನಿಂದಾಗಿ ಗೋಕಾಕ್ ಫಾಲ್ಸ್ನ ಸುರೇಖಾ ರವಿ ಲಂಕೆನ್ನವರ ಎಂಬುವರು ಗೋಕಾಕ್ ಖಾಸಗಿ ಆಸ್ಪತ್ರೆಗೆ ಶನಿವಾರ ಬೆಳಗಿನ ಜಾವ 3:30ಕ್ಕೆ ದಾಖಲಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದು, ಗೋಕಾಕ್ನ ವೈದ್ಯರು ಎಷ್ಟು ಕಷ್ಟಪಟ್ಟರೂ ಮಗುವಿನ ಶ್ವಾಸಕೋಶದಲ್ಲಿ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಸಂಬಂಧಿಕರು ಮಗುವನ್ನು ಆ್ಯಂಬುಲೆನ್ಸ್ ಮೂಲಕ ಬೆಳಗಾವಿಗೆ ಕರೆ ತಂದಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸುಮಾರು ಒಂದೂವರೆ ಗಂಟೆಗಳ ಕಾಲ ಐಸಿಯುನಲ್ಲಿ ಇಟ್ಟರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆಯಿಂದಲೇ ತಾಯಿಗೆ ಹೆರಿಗೆ ನೋವಿತ್ತು. ಆದರೆ, ಚಂದ್ರಗ್ರಹಣದಿಂದಾಗಿ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಚಂದ್ರಗ್ರಹಣ ಮುಗಿದ ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬಗ್ಗೆ ನಿರ್ಧರಿಸಿದ್ದು, ಹೀಗಾಗಿ ಮಧ್ಯರಾತ್ರಿ 1:30ರ ಸುಮಾರಿಗೆ ಮೊದಲು ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಅಲ್ಲಿಂದ ಗೋಕಾಕ್ನ ಖಾಸಗಿ ಆಸ್ಪತ್ರೆಗೆ 3:30ಕ್ಕೆ ಕರೆ ತಂದಿದ್ದಾಗಿ ಮಗುವಿನ ಸಂಬಂಧಿಕರು ವೈದ್ಯರ ಎದುರು ಹೇಳಿದ್ದಾರೆ. ಗೋಕಾಕ್ನಲ್ಲಿ ಇಬ್ಬರು ವೈದ್ಯರು ತಾಯಿಗೆ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಿದರು. ಆದರೆ, ಮಗು ಶ್ವಾಸಕೋಶದ ತೊಂದರೆಯಿಂದಾಗಿ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಬೆಳಗ್ಗೆ ಮಗುವನ್ನು ಆಸ್ಪತ್ರೆಗೆ ಕರೆ ತಂದಾಗ ತೀವ್ರ ತೊಂದರೆಯಲ್ಲಿತ್ತು. ಕೂಡಲೇ ಮಗುವನ್ನು ತುರ್ತು ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಐಸಿಯುನಲ್ಲಿ ಎಲ್ಲ ವ್ಯವಸ್ಥೆ ಮಾಡಿ ಎಷ್ಟೇ ಕಷ್ಟಪಟ್ಟರೂ ಮಗುವಿನ ಶ್ವಾಸಕೋಶದಲ್ಲಿ ಅಭಿವೃದ್ಧಿ ಕಾಣಲಿಲ್ಲ. ಹೀಗಾಗಿ ಮಗು ಮೃತಪಟ್ಟಿದೆ.
– ಡಾ| ಶಶಿಕಾಂತ ಮುರಗೋಡ, ಬೆಳಗಾವಿಯ ವೈದ್ಯ
ಬೆಳಗಿನ ಜಾವ 3:30ಕ್ಕೆ ತಾಯಿಯನ್ನು ಆಸ್ಪತ್ರೆಗೆ ಕರೆ ತಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆರಿಗೆಯಾಗಿದೆ. ಆದರೆ ಮಗು ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿತ್ತು. ಕೂಡಲೇ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಯಿತು. ನಂತರ ಸಂಬಂಧಿಕರು ಮಗುವನ್ನು ಬೆಳಗಾವಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
– ಡಾ| ಮಹಾಂತೇಶ ಕಡಾಡಿ, ವೈದ್ಯ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.