ಬೆಳಗಾವಿ-ಧಾರವಾಡ ರೈಲು ಹಳಿ ನಿರ್ಮಾಣಕ್ಕೆ ಆಗ್ರಹ


Team Udayavani, Feb 25, 2019, 10:22 AM IST

25-february-15.jpg

ಬೆಳಗಾವಿ: ಬೆಳಗಾವಿ-ಧಾರವಾಡ ಕಿತ್ತೂರ ಮಾರ್ಗವಾಗಿ ನೂತನ ರೈಲು ಹಳಿ ನಿರ್ಮಾಣಕ್ಕಾಗಿ ಈ ಹಿಂದೆಯೇ ಸಮೀಕ್ಷೆ ಕಾರ್ಯ ನಡೆದಿದ್ದು, ಅದನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರಬೇಕು ಎಂದು ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ ಪದಾಧಿಕಾರಿಗಳು ಕೇಂದ್ರ ರೈಲ್ವೆ ಸಚಿವರನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ ಸಿಂಗ್‌ ಅವರನ್ನು ಭೇಟ್ಟಿ ಮಾಡಿ ಮನವಿ ಸಲ್ಲಿಸಿದ ಸಂಸ್ಥೆಯ ಪದಾಧಿಕಾರಿಗಳು ಈಗ ಧಾರವಾಡದಿಂದ ಬೆಳಗಾವಿಗೆ ಲೋಂಡಾ ಮಾರ್ಗವಾಗಿ ರೈಲಿನಲ್ಲಿ ಬರಲು ಸುಮಾರು ಮೂರು ಗಂಟೆ ಬೇಕಾಗುತ್ತಿದೆ. ಅದೇ ಧಾರವಾಡದಿಂದ ಕಿತ್ತೂರ ಮೂಲಕ ಹೊಸ ಮಾರ್ಗ ನಿರ್ಮಾಣ ಮಾಡಿದರೆ ಒಂದು ಗಂಟೆಯ ಪ್ರಯಾಣ ಉಳಿಯುತ್ತದೆ. ಸಾರ್ವಜನಿಕರಿಗೂ ಬಹಳ ಅನುಕೂಲವಾಗುತ್ತದೆ. ಕಾರಣ ಇದನ್ನು ಆಧ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ಇದಲ್ಲದೆ ಈಗಾಗಲೇ ಸಮೀಕ್ಷೆ ಕಾರ್ಯ ಪೂರ್ಣಗೊಂಡಿರುವ ಬೆಳಗಾವಿ-ಕರಾಡ (ಸಂಕೇಶ್ವರ-ನಿಪ್ಪಾಣಿ ಮಾರ್ಗ) ಮಾರ್ಗ ನಿರ್ಮಾಣ ಕಾರ್ಯಕ್ಕೂ ಪ್ರಾಮುಖ್ಯತೆ ನೀಡಬೇಕು. ಇದರಿಂದ ಉದ್ಯಮಿಗಳಿಗೆ ಹಾಗೂ ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಗೆ ಬಹಳ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿರುವ ಗುಡ್‌ಸೆಡ್‌ನ್ನು ಸಾಂಬ್ರಾ ಇಲ್ಲವೇ ದೇಸೂರ ಬಳಿ ಸ್ಥಳಾಂತರಿಸಬೇಕು. ಇದರಿಂದ ಸಾಕಷ್ಟು ಜಾಗ ಸಿಗುವದಲ್ಲದೆ ಪ್ಯಾಸೆಂಜರ್‌ ರೈಲಿಗಾಗಿ ಹೊಸದಾಗಿ ಇನ್ನೊಂದು ಪ್ಲಾಟ್‌ಫಾರ್ಮ್
ಮಾಡಬಹುದು. ಬೆಳಗಾವಿಯ ರೈಲ್ವೆ ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದರೂ ಇನ್ನೂ ಕೆಲವು ಸಮಸ್ಯೆಗಳು ಹಾಗೇ ಉಳಿದುಕೊಂಡಿವೆ. ಮುಖ್ಯವಾಗಿ ಎರಡು ಹಾಗೂ ಮೂರನೇ ಪ್ಲಾಟ್‌ ಫಾರ್ಮ್ದಲ್ಲಿ ಶೌಚಾಲಯಗಳ ನಿರ್ಮಾಣ ಆಗಬೇಕಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಇಲೆಕ್ಟ್ರಿಕ್‌ ಕಾರ್‌ ಸೌಲಭ್ಯ, ಸುಸಜ್ಜಿತ ಔಷಧ ಕೇಂದ್ರ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ನಿಲ್ದಾಣದಲ್ಲಿ ಈಗಿರುವ ಸಿಸಿ ಟಿವಿಗಳನ್ನು ಉನ್ನತೀಕರಣಗೊಳಿಸಬೇಕು. ದಿನದ 24 ಗಂಟೆಗಳ ಕಾಲ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪ್ರತ್ಯೇಕವಾಗಿ ರೈಲ್ವೆ ವಿಚಾರಣಾ ಕೊಠಡಿ ಸ್ಥಾಪಿಸಬೇಕು. ನಿಲ್ದಾಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು. ಬೆಳಗಾವಿ-ಪುಣೆ ಮಧ್ಯೆ ಇಂಟರ್‌ ಸಿಟಿ ರೈಲು ಆರಂಭಿಸಬೇಕು. ಇದು ಬಹಳ ದಿನಗಳ ಬೇಡಿಕೆಯಾಗಿದೆ. ಬೆಳಗಾವಿಯಿಂದ ಇದು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಹಾಗೂ ಪುಣೆಯಿಂದ ಸಂಜೆ 6 ಗಂಟೆಗೆ ಬಿಡುವ ಸಮಯ ನಿಗದಿಪಡಿಸಿದರೆ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಇದಲ್ಲದೆ ಬೆಳಗಾವಿಯಿಂದ ಪ್ರತಿದಿನ ಬೆಂಗಳೂರು ಹಾಗೂ ಮುಂಬೈಗೆ ಸಾಕಷ್ಟು ಜನ ಪ್ರಯಾಣ ಮಾಡುತ್ತಿದ್ದಾರೆ. ಆದ್ದರಿಂದ ಬೆಳಗಾವಿಯಿಂದ
ಈ ಎರಡೂ ನಗರಗಳಿಗೆ ಪ್ರತ್ಯೇಕ ರೈಲು ಆರಂಭಿಸಬೇಕು. ಈಗ ಧಾರವಾಡದಿಂದ ಮೈಸೂರಿಗೆ ಇರುವ ರೈಲನ್ನು ಬೆಳಗಾವಿಗೆ ವಿಸ್ತರಿಸಬೇಕು. ಮೀರಜ್‌ದಿಂದ ಬೆಂಗಳೂರು ಮಾರ್ಗವಾಗಿ ಚೆನ್ನೈಗೆ ಹೊಸ ರೈಲು ಪ್ರಾರಂಭ ಮಾಡಬೇಕು. ಬೆಳಗಾವಿಯಿಂದ ಗೋವಾಕ್ಕೆ ರೈಲು ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಶ ಬಾಗಿ, ಗೌರವ ಕಾರ್ಯದರ್ಶಿ ಸತೀಶ ಗೌರಗೊಂಡ, ಹಿರಿಯ ಉಪಾಧ್ಯಕ್ಷ ರೋಹನ್‌ ಜುವಳಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.