![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 20, 2019, 11:16 AM IST
ಬೆಳಗಾವಿ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು.
ಬೆಳಗಾವಿ: ನಗರದಲ್ಲಿ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ ಸಿಸಿಐಬಿ ಹಾಗೂ ಸಿಇಎನ್ ಪೊಲೀಸರು ಆರು ಜನರನ್ನು ಬಂಧಿಸಿ 36 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಸುಭಾಷ ನಗರ 3ನೇ ಕ್ರಾಸಿನ ಮೋದಿನ್ ರಫೀಕ್ ಅತ್ತಾರ (34), ವೀರಭದ್ರ ನಗರದ ತಬ್ರೇಜ್ ಇಬ್ರಾಹಿಂ ಅಂಡೇವಾಲೆ (20), ಅನಗೋಳ ಕುರಬರಗಲ್ಲಿಯ ಚೇತನ ಮಾರುತಿ ಶಿಂಧೆ (19), ಸುಭಾಷ ನಗರದ ಮಹ್ಮದಯಾಸೀನ ಕುತ್ಬುದ್ದಿನ್ಅತ್ತಾರ(23), ವೀರಭದ್ರ ನಗರದ ಮಹ್ಮದಶಾಹೀದ್ ಅತಿಕ್ ಮುಲ್ಲಾ (19) ಎಂಬುವರನ್ನು ಬಂಧಿಸಲಾಗಿದೆ.
ನಗರದ ಗ್ಯಾಂಗ್ವಾಡಿಯ ಧರ್ಮನಾಥ ಭವನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಐದು ಜನರು ಒಂದು ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ/ಮಾದಕ ವಸ್ತುವನ್ನು ವಶದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ. ಸಿಇಎನ್ ವಿಶೇಷ ಠಾಣೆಯ ಪಿಐ ಯು.ಎಚ್. ಸಾತೇನಹಳ್ಳಿ ಹಾಗೂ ಸಿಬ್ಬಂದಿ ದಾಳಿ ನಡೆಸಿ 30 ಸಾವಿರ ರೂ. ಮೌಲ್ಯದ 1 ಕೆಜಿ 486.5 ಗ್ರಾಂ. 5 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ನಗರದ ಹಳೆ ಭಾಜಿ ಮಾರ್ಕೆಟ್ ಬಳಿ ಸಿಸಿಐಬಿ ಹಾಗೂತಂಡದಿಂದ ದಾಳಿ ನಡೆಸಿ ಓರ್ವನನ್ನು ಬಂಧಿಸಿ 5980 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಿಸಿಐಬಿ ಇನ್ಸ್ಪೆಕ್ಟರ್ ಸಂಜೀವ ಕಾಂಬಳೆ ನೇತೃತ್ವದಲ್ಲಿಎಎಸ್ ಐ ಬಿ ಆರ್ ಮುತ್ನಾಳ, ಸಿಬ್ಬಂದಿಗಳಾದ ಚೆನ್ನಪ್ಪಚೆನ್ನಪ್ಪನವರ, ಬಿಎನ್. ಬಳಗನ್ನವರ, ಎಸ್. ಆರ್. ಮೇತ್ರಿ, ನಾಯ್ಕವಾಡಿ, ಅರುಣ ಕಾಂಬಳೆ, ಮಹೇಶ ವಡೆಯರ್, ಎಸ್. ಎಸ್. ಪಾಟೀಲ ಅವರು ದಾಳಿ ನಡೆಸಿದ್ದರು.
ನಗರದ ಘೀ ಗಲ್ಲಿಯ ಅನ್ವರ ಹುಸೇನ ತಖೀಜವಾದ (57) ಎಂಬಾತನನ್ನು ಬಂಧಿಸಿ 598 ಗ್ರಾಂ. ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.