ಕರಾವಳಿ ಸಮಸ್ಯೆ ಚರ್ಚಿಸಲು ನಿರುತ್ಸಾಹ

ಅಧಿವೇಶನದಲ್ಲಿ ಪ್ರಶ್ನೆ ಕ್ಷೇತ್ರದ ಸಮಸ್ಯೆಗೆ ಸೀಮಿತ; ಕಾಣದ ಸಮಗ್ರ ದೃಷ್ಟಿ

Team Udayavani, Dec 20, 2021, 7:20 AM IST

ಕರಾವಳಿ ಸಮಸ್ಯೆ ಚರ್ಚಿಸಲು ನಿರುತ್ಸಾಹ

ಬೆಳಗಾವಿ: ಕರಾವಳಿಯ ಪ್ರಮುಖ ಸಮಸ್ಯೆಗಳ ಕುರಿತು ವಿಧಾನ ಮಂಡಲದ ಅಧಿವೇಶನದಲ್ಲಿ ಸ್ಥಳೀಯ ಶಾಸಕರು ಮೊದಲ ವಾರದಲ್ಲಿ ಚರ್ಚೆ ಯನ್ನೇ ನಡೆಸಿಲ್ಲ. ಎರಡನೇ ವಾರದಲ್ಲಿ ಯಾದರೂ ಆ ಬಗ್ಗೆ ಪ್ರಸ್ತಾವಿಸಿ ಸರಕಾರದ ಗಮನ ಸೆಳೆಯುವ ಅಗತ್ಯವಿದೆ.

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಸೂಚಿಸಿದ್ದರೂ ಕೆಂಪಕ್ಕಿಗೆ ಅವಕಾಶ ಇಲ್ಲವಾಗಿದೆ. ಮಳೆ ಯಿಂದಾಗಿ ಭತ್ತ ಮತ್ತು ಬೈ ಹುಲ್ಲು ಹಾಳಾಗಿದ್ದು ಅದಕ್ಕೂ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಕರಾವಳಿಯ ಕೆಲವು ಶಾಸಕರು ತಮ್ಮ ಪ್ರದೇಶದ ಸಮಸ್ಯೆಗಳ ಕುರಿತು ಪ್ರಸ್ತಾವಿಸಿರುವರೇ ವಿನಾ ಕರಾವಳಿಯ ಪ್ರಮುಖ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಗಮನ ಸೆಳೆದಿಲ್ಲ.

ಅಕ್ಟೋಬರ್‌, ನವೆಂಬರ್‌ನಲ್ಲಿ ಸುರಿದ ಭಾರೀ ಮಳೆಯಿಂದ ಬಹುತೇಕ ಕಡೆಗಳಲ್ಲಿ ಭತ್ತದ ಕೊಯ್ಲು ಸರಿಯಾಗಿ ಮಾಡಲು ಸಾಧ್ಯವಾಗಿರಲಿಲ್ಲ. ಗದ್ದೆಯಲ್ಲೇ ಭತ್ತ ಮೊಳಕೆಯೊಡೆದು ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿತ್ತು. ಸರಕಾರ ಭತ್ತ ಖರೀದಿ ಕೇಂದ್ರ ತೆರೆದಿದ್ದರೂ ನಿರ್ದಿಷ್ಟ ಸಮಯದಲ್ಲಿ ಖರೀದಿ ಪ್ರಕ್ರಿಯೆ ಆರಂಭಿಸದೆ ಇರುವುದು ರೈತರಿಗೆ ಇನ್ನಷ್ಟು ನೋವುಂಟು ಮಾಡಿದೆ. ಮಲ್ಲಿಗೆ, ಮಟ್ಟುಗುಳ್ಳ ಮತ್ತಿತರ ವಿವಿಧ ವಾಣಿಜ್ಯ ಬೆಳೆಗಳು ಕೂಡ ಫಸಲು ಬಿಡುವ ಸಮಯದಲ್ಲಿ ನಾಶವಾಗಿದ್ದವು. ಬೆಳೆ ಪರಿಹಾರವೂ ಸಿಕ್ಕಿಲ್ಲ. ಮಳೆ ಯಿಂದಾದ ಬೆಳೆ ಹಾನಿ, ಪರಿ ಹಾರ ಸಿಗದೆ ಇರುವ ಬಗ್ಗೆ ಚರ್ಚೆ ಆಗಿಲ್ಲ.

ಇದನ್ನೂ ಓದಿ:ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ

ತುಳು ಭಾಷೆ: ಕೇಳದ ಧ್ವನಿ
ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಡಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಬಹು ವರ್ಷಗಳಿಂದ ಹೋರಾಟ ಗಳು ನಡೆದಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸುತ್ತ ಬರಲಾಗಿದೆ. ಈಚೆಗೆ ಕೇಂದ್ರದ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್‌, ಸದ್ಯ ಇದಕ್ಕೆ ಅವಕಾಶ ಇಲ್ಲ ಎಂದು ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಈ ಬಗ್ಗೆಯೂ ಕರಾವಳಿಯ ಶಾಸಕರು ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯುವ ಅಥವಾ ರಾಜ್ಯ ಸರಕಾರದ ಮೂಲಕ ಕೇಂದ್ರದ ಮೇಲೆ ಮತ್ತೊಮ್ಮೆ ಒತ್ತಡ ಹೇರುವ ಪ್ರಯತ್ನ ಮಾಡಬೇಕಿತ್ತು. ರಾಜ್ಯ ಸರಕಾರದಲ್ಲಿ ಕರಾವಳಿಯ ಎರಡು ಜಿಲ್ಲೆಗಳ ಮೂವರು ಸಚಿವರಿದ್ದು, ಕೇಂದ್ರ ದಲ್ಲಿ ಕೃಷಿ ಖಾತೆಯ ಸಚಿವೆ ಕರಾವಳಿ ಯವರಾಗಿದ್ದರೂ ಸ್ಥಳೀಯ ಕುಚ್ಚಲು ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆ ಯಡಿ ವಿತರಿಸುವ ಪ್ರಕ್ರಿಯೆ ಇನ್ನೂ ಆರಂಭ ವಾಗಿಲ್ಲ. ಈ ಬಗ್ಗೆಯೂ ಸರಕಾರದ ಗಮನ ಸೆಳೆಯುವ ಮತ್ತು ಕೇಂದ್ರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಿಲ್ಲ.

ಕ್ಷೇತ್ರದ ಸಮಸ್ಯೆಗೆ ಸೀಮಿತ
ಕರಾವಳಿಯ ಶಾಸಕರು ತಮ್ಮ ಕ್ಷೇತ್ರದ ಇ-ಸ್ವತ್ತು ತಂತ್ರಾಂಶ ಸಮಸ್ಯೆ, ಯುಪಿಸಿಎಲ್‌ ವಿದ್ಯುತ್‌ ಮಾಗದಿಂದ ಅನಾನುಕೂಲ ಮತ್ತಿತರ ಸಮಸ್ಯೆ ಗಳನ್ನು ಪ್ರಶ್ನೋತ್ತರ ಕಲಾಪ ವೇಳೆ ಸರಕಾರದ ಗಮನಕ್ಕೆ ತಂದು ಪರಿ ಹಾರ ಕಂಡುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. ಆದರೆ ಇಡೀ ಕರಾವಳಿಯ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಅಧಿವೇಶನವನ್ನು ವೇದಿಕೆ ಯಾಗಿ ಬಳಸಿಕೊಳ್ಳುತ್ತಿಲ್ಲ.

ಈ ವಾರವಾದರೂ ಧ್ವನಿಯೆತ್ತಲಿ
ಕರಾವಳಿಯಲ್ಲಿ ಕಾಂಗ್ರೆಸ್‌ನ ಏಕೈಕ ಶಾಸಕ ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕರಿದ್ದಾರೆ. ಇವರಲ್ಲಿ ಮೂವರು ಸಚಿವರು. ಶಾಸಕ, ಸಚಿವರು ಒಟ್ಟಾಗಿ ಈ ವಾರವಾದರೂ ಕರಾವಳಿಯ ವಿವಿಧ ಸಮಸ್ಯೆಗಳನ್ನು ಚರ್ಚಿಸಲು ಉಭಯ ಸದನದಲ್ಲಿ ಅವಕಾಶ ಕೋರಿ ಕನಿಷ್ಠ ಒಂದೆರಡು ತಾಸು ಕಾಲವಾದರೂ ಚರ್ಚೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂಬುದು ಕರಾವಳಿ ಭಾಗದ ಜನರ ಆಶಯ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.