ಸಾಹಿತ್ಯದಲ್ಲಿ ನಾಟಕ ರಚನೆ ಕಷ್ಟದ ಕೆಲಸ

ಡಾ| ನಿರ್ಮಲಾ ಬಟ್ಟಲ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯ ನಾಟಕ ಅಭಿನಯದಲ್ಲಿ ಮುಖ್ಯವಾದದ್ದು

Team Udayavani, Jan 29, 2022, 6:14 PM IST

ಸಾಹಿತ್ಯದಲ್ಲಿ ನಾಟಕ ರಚನೆ ಕಷ್ಟದ ಕೆಲಸ

ಬೆಳಗಾವಿ: ನಾಟಕ ರಚನೆ ಸಾಹಿತ್ಯದಲ್ಲಿ ಬಹಳ ಕಷ್ಟಕರ ಕೆಲಸ. ಸಾಹಿತಿಯಾದವನಿಗೆ ಸಾಹಿತ್ಯದ ಘನತ್ವ ಮತ್ತು ಲಘುತ್ವದ ಎರಡು ಕಲ್ಪನೆಗಳು ಇರಬೇಕು. ಆಗ ಮಾತ್ರ ಸಾಹಿತ್ಯ ರಸಯುಕ್ತವಾಗುವುದು ಎಂದು ಸಾಹಿತಿ ಡಾ| ಬಾಳಾಸಾಹೇಬ ಲೋಕಾಪುರ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಮತ್ತು ಸಾಹಿತ್ಯ ಕಲಾ ವೇದಿಕೆ ಕನ್ನಡ ಮಹಿಳಾ ಸಂಘದ ಆಶ್ರಯದಲ್ಲಿ ಶುಕ್ರವಾರ ಸಾಹಿತಿ ರಂಜನಾ ನಾಯಿಕ ಬರೆದ “ಕಾರಂತ್‌ ನೆನಪಿನ ಕಾರವಾನ್‌’ ಮತ್ತು ‘ಇಪ್ಪತ್ತೂಂದು ಬೆಳಕು ನೆರಳಿನಾಟ’ ನಾಟಕಗಳ ಸಂಗ್ರಹದ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಾವತಿ ಸೊನೋಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಮಹಿಳೆಯರು ತಮ್ಮದೇ ಆದ ಛಾಪು ಒತ್ತಿದ್ದಾರೆ. ಕೇವಲ ಕವನ ಸಂಕಲನ, ಕಥೆ, ಕಾದಂಬರಿ ಎನ್ನದೇ ನಾಟಕಗಳ ಸಂಗ್ರಹಕ್ಕೂ ಸಹಿತ ಪುಸ್ತಕ ರೂಪ ಕೊಡುತ್ತಿರುವುದು ಶ್ಲಾಘನೀಯ. ಇದು ಹೀಗೆಯೇ ಮುಂದುವರಿಯಲಿ ಎಂದು ಅಶಿಸಿದರು.

ನಾಟಕ ಸಂಗ್ರಹದ ಪರಿಚಯ ಮಾಡಿ ಮಾತನಾಡಿದ ಸಾಹಿತಿ ಡಾ| ಗುರುದೇವಿ ಹುಲೆಪ್ಪನವರಮಠ, ನಾಟಕಗಳಲ್ಲಿ ಸ್ವಾಮಿ ಅಯ್ಯಪ್ಪನ ಜನ್ಮ ವೃತ್ತಾಂತ, ಸೀತಾ ಪರಿತ್ಯಾಗ, ಶ್ರೀ ಕೃಷ್ಣನ ಮಹಿಮೆ ಇವುಗಳ ಕುರಿತು ವೈಜ್ಞಾನಿಕ ಕಾರಣ ಕೊಡುತ್ತ ಕೃತಿಯಲ್ಲಿ ಅಡಗಿರುವ ಮಾಹಿತಿ ವಿಶ್ಲೇಷಿಸಿದರು.

ಕೃತಿ ಪರಿಚಯ ಮಾಡಿದ ಸಾಹಿತಿ ಡಾ| ನಿರ್ಮಲಾ ಬಟ್ಟಲ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯ ನಾಟಕ ಅಭಿನಯದಲ್ಲಿ ಮುಖ್ಯವಾದದ್ದು. ಬೆಳಕಿನಲ್ಲಿ ನೆರಳಿನ ಮೂಲಕ ಸನ್ನಿವೇಶ ಸೃಷ್ಟಿಸುವುದರಿಂದ ಪ್ರೇಕ್ಷಕರಿಗೆ ಹೆಚ್ಚಿನ ವಿಷಯ ಜ್ಞಾನ ಅತ್ಯಂತ ಕಡಿಮೆ ಅವಧಿಯಲ್ಲಿ ತಿಳಿಸಬಹುದು ಎಂದು ಅಭಿಪ್ರಾಯಪಟ್ಟರು.

“ಕಾರಂತ್‌ ನೆನಪಿನ ಕಾರವನ್‌’ ಕೃತಿ ಪರಿಚಯಿಸಿದ ಡಾ| ಶೋಭಾ ನಾಯಿಕ ಮಾತನಾಡಿ, ಕಡಲ ತೀರ ಭಾರ್ಗವ ಡಾ| ಕಾರಂತರ ಆತ್ಮಚರಿತ್ರೆ ಜೀವನದ ಪಯಣ ಅದ್ಭುತವಾಗಿ ವರ್ಣಿಸಲಾಗಿದೆ. ಹಿರಿಯ ಮತ್ತು ಕಿರಿಯ ಸಾಹಿತಿಗಳ ಒಡನಾಟದಲ್ಲಿ ಕೃತಿ ರಚನೆಕಾರರು ರಚಿಸಿದ ಲೇಖನಗಳು ಅದ್ಭುತವಾಗಿ ಮೂಡಿ ಬಂದಿವೆ ಎಂದರು.

ಕೃತಿಕಾರರಾದ ರಂಜನಾ ನಾಯಿಕ ಮಾತನಾಡಿ, ಸಾಹಿತ್ಯ ರಂಜನೀಯಗೊಳಿಸುವಲ್ಲಿ ಹಿರಿಯರ ಮಾರ್ಗದರ್ಶನ ಪಡೆದು ರಚಿಸಲಾಗಿರುವ ನನ್ನ ಕೃತಿಗಳು ಓದುಗರನ್ನು ನಿಶ್ಚಿತವಾಗಿಯೂ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಲೇಖಕಿಯರ ಸಂಘದ ಸದಸ್ಯೆ ರೋಹಿಣಿ ಯಾದವಾಡ ತಮ್ಮ ತಂದೆ ಶಿವಪುತ್ರ ಮತ್ತು ತಾಯಿ ಶಶಿಕಲಾ ಯಾದವಾಡ ಹೆಸರಿನಲ್ಲಿ 25 ಸಾವಿರ ರೂ. ದತ್ತಿನಿಧಿ ಸಂಘಕ್ಕೆ ನೀಡಿದರು.

ಈ ವೇಳೆ ಡಾ| ಕೆ.ಆರ್‌. ಸಿದ್ದಗಂಗಮ್ಮ, ಪಾರ್ವತಿ ಪಿಟಗಿ, ಜ್ಯೋತಿ ಮಾಳಿ, ಸುಧಾ ಪಾಟೀಲ, ಸುನಿತಾ ಸೊಲ್ಲಾಪುರ, ಪ್ರೇಮಾ ಪಾನಶೆಟ್ಟಿ, ಉಮಾ ಅಂಗಡಿ, ಆಶಾ ಯಮಕನಮರಡಿ, ವೀರಭದ್ರ ಅಂಗಡಿ ಸೇರಿದಂತೆ ಇತರರಿದ್ದರು. ಹಮೀದಾ ಬೇಗಂ ದೇಸಾಯಿ ಸ್ವಾಗತಿಸಿದರು. ಇಂದಿರಾ ಮೋಟೆಬೆನ್ನೂರ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ರಾಜನಂದಾ ಘಾರ್ಗಿ ನಿರೂಪಿಸಿದರು. ವಿದ್ಯಾ ಹುಂಡೇಕಾರ ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.