![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Sep 3, 2019, 1:00 PM IST
ಬೆಳಗಾವಿ: ಕರ್ನಾಟಕ ಹಾಗೂ ಗೋವಾ ಮಧ್ಯೆ ಇರುವ ಪ್ರಸಿದ್ಧ, ಮನಮೋಹಕ ದೂದ್ ಸಾಗರ್ ಜಲಪಾತದ ವೀಕ್ಷಣೆಗೆ ಇನ್ನು ಮುಂದೆ ಪ್ರವಾಸಿಗರಿಗೆ ಅವಕಾಶ ಸಿಗಲಿದೆ.
ನಗರದಲ್ಲಿ ಮಂಗಳವಾರ “ಉದಯವಾಣಿ” ಜೊತೆ ಮಾತನಾಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಈ ಹಿಂದೆ ನಡೆದ ಕೆಲವು ದುರ್ಘಟನೆಗಳಿಂದಾಗಿ ದೂದ್ ಸಾಗರ್ ಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿತ್ತು. ಆದರೆ ಪ್ರವಾಸಿಗರ ಬೇಡಿಕೆ ಹಾಗೂ ಈ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು ನಾಳೆಯಿಂದ ದೂದ್ ಸಾಗರ್ ನಿಲ್ದಾಣದಲ್ಲಿ ರೈಲು ನಿಲುಗಡೆ ಆರಂಭವಾಗಲಿದೆ ಎಂದರು.
ನಾಳೆ ( ಸಪ್ಟೆಂಬರ್ 4) ರಂದು ದೂದ್ ಸಾಗರ್ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ 1.30 ಕ್ಕೆ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಿಸಲಾಗುತ್ತದೆ. ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಂಡು ಪ್ರವಾಸೋದ್ಯಮದ ಅಭಿವೃದ್ಧಿ ಗೆ ಸಹಕಾರ ನೀಡಬೇಕು ಎಂದರು.
ಇದಲ್ಲದೆ ಗೋವಾ ಹಾಗೂ ಕರ್ನಾಟಕದ ಜನರ ಬಹಳ ದಿನಗಳ ಬೇಡಿಕೆಯಂತೆ ನಾಳೆ ಬೆಳಗಾವಿ ಹಾಗೂ ವಾಸ್ಕೋ ನೂತನ ರೈಲು ಸಂಚಾರ ಆರಂಭಕ್ಕೆ ಹಸಿರು ನಿಶಾನೆ ತೋರಿಸಲಾಗುವದು.ಈ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.