Elephant; ಅಚ್ಚುಮೆಚ್ಚಿನ ಆನೆ ‘ಉಷಾರಾಣಿ’ ಹೃದಯಾಘಾತದಿಂದ ನಿಧನ

ಧಾರಾವಾಹಿ, ಚಲನಚಿತ್ರದಲ್ಲೂ ಕಾಣಿಸಿಕೊಂಡಿತ್ತು...

Team Udayavani, Aug 10, 2024, 8:06 PM IST

1-aane

ಚಿಕ್ಕೋಡಿ: ಭಾರತ ಗೌರವ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರ ಚಿಕ್ಕೋಡಿ ತಾಲೂಕಿನ  ಕೊಥಳಿ -ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಪ್ರೀತಿಯ   “ಉಷಾರಾಣಿ” ಎಂಬ ಆನೆ  ಶನಿವಾರ(ಆಗಸ್ಟ್10) ಮಧ್ಯಾಹ್ನ 55 ನೇ ವಯಸ್ಸಿಗೆ  ಹೃದಯಘಾತದಿಂದ  ನಿಧನ ಹೊಂದಿದೆ. ಇದರಿಂದ ಕರ್ನಾಟಕ-ಮಹಾರಾಷ್ಟ್ರದ ಗಡಿ ಭಾಗದ ಕೊಥಳಿ -ಕುಪ್ಪಾನವಾಡಿಯಲ್ಲಿ ಶೋಕ ಮಡುಗಟ್ಟಿದೆ.

ಶ್ರೀ ಆಚಾರ್ಯ ರತ್ನ ದೇಶಭೂಷಣ ದಿಗಂಬರ ಜೈನ ಶಾಂತಿಗಿರಿ ಟ್ರಸ್ಟ್ ವತಿಯಿಂದ 1971 ರಲ್ಲಿ 5 ರಿಂದ 6 ವರ್ಷ ವಯಸ್ಸಿನ ಉಷಾರಾಣಿ ಆನೆನ್ನು ಕರ್ನಾಟಕದ ಸಕ್ರೆಬೆಲ್ ಆನೆ ಕೇಂದ್ರದಿಂದ ತರಲಾಗಿತ್ತು. ಕಳೆದ 50 ವರ್ಷಗಳಿಂದ ಬೆಳಗಾವಿ, ಕೊಲ್ಹಾಪುರ, ಸಾಂಗಲಿ, ಜಿಲ್ಲೆಯಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು, ಇವರೊಂದಿಗೆ ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಈ ಉಷಾರಾಣಿಗೆ ಮಹತ್ವದ ಸ್ಥಾನ ಲಭಿಸಿ ಗಡಿ ಭಾಗದಲ್ಲಿ ಭಾರಿ ಹೆಸರುಗಳಿಸಿತ್ತು.

ಆನೆ ಕೋಥಳಿ ಶಾಂತಿಗಿರಿ ಟ್ರಸ್ಟ್ ಗೆ ಸೇರಿದ್ದರೂ ಬೇಡಕಿಹಾಳದ  ಸಂದೀಪ್ ಪೊಲೀಸ್ ಪಾಟೀಲ್ ಅವರ ಜಾಗದಲ್ಲಿ ವಾಸವಾಗಿತ್ತು.  ವಿಶೇಷವಾಗಿ ಈ ಉಷಾರಾಣಿಯು ಬೇಡಕಿಹಾಳದ ಗ್ರಾಮ ದೇವರಾದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆಯ ಕೇಂದ್ರ ಬಿಂದುವಾಗಿತ್ತು.

ಈ ಆನೆಯ ಸೂಕ್ಷ್ಮ ಬುದ್ಧಿವಂತಿಕೆಯಿಂದಾಗಿ, ಒಮ್ಮೆ ನೋಡಿದ ವ್ಯಕ್ತಿಯನ್ನು ಅದು ಎಂದಿಗೂ ಮರೆಯುವುದಿಲ್ಲ.  ಮಾವುತ ಬಾಸು ಲಕ್ಷ್ಮೀಶ್ವರ್ ಅವರು ತಮ್ಮ ಮಕ್ಕಳಿಗಿಂತ ಹೆಚ್ಚಾಗಿ ಈ ಆನೆಯನ್ನು ನೋಡಿಕೊಳ್ಳುತ್ತಿದ್ದರು. ಅವರ ದೈನಂದಿನ ಸ್ನಾನ, ವಾರಕ್ಕೊಮ್ಮೆ ವೈದ್ಯಕೀಯ ಆರೈಕೆ, ಶುದ್ಧ ನೀರು, ಆಹಾರದ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿತ್ತು.  ಉಷಾರಾಣಿ ದಿಢೀರ್ ಅಗಲಿರುವುದರಿಂದ ಬೇಡಕಿಹಾಳ ಸೇರಿದಂತೆ ಗಡಿ ಭಾಗದಲ್ಲಿ  ಶೋಕ ಮಡುಗಟ್ಟಿದೆ.

ಘಟನೆಯ ಮಾಹಿತಿ ಸಿಕ್ಕಿದ ನಂತರ ಶಾಂತಿಗಿರಿ ಟ್ರಸ್ಟ್ನ ಪದಾಧಿಕಾರಿಗಳು,  ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ, ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜೈನ ಸಮಾಜದ ಶ್ರಾವಕ-ಶ್ರಾವಕಿಯರು.  ಗ್ರಾ.ಪಂ.ಅಧ್ಯಕ್ಷರು  ಎಲ್ಲ ಸದಸ್ಯರು, ಮತ್ತು ಗ್ರಾಮಸ್ಥರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು .ಈ ವೇಳೆ ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು. ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಮತ್ತು ಸರ್ಕಾರಿ ಪಶುವೈದ್ಯರಿಂದ ಮರಣೋತ್ತರ ಪರೀಕ್ಷೆ ಮಾಡಿ ವಿಧಿವಿಧಾನದ ನಂತರ ಅಂತ್ಯಸಂಸ್ಕಾರ ನಡೆಯಿತು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.