ಅರಭಾವಿಯಲ್ಲಿ ಸಮಬಲದ ಹೋರಾಟ

ಬಿಜೆಪಿ ಗೆಲುವಿಗೆ ಬಲ ತುಂಬಿದ ಬಾಲಚಂದ್ರ |ಜೆಡಿಎಸ್‌ ಬೆಂಬಲದೊಂದಿಗೆ ಸ್ಪರ್ಧೆಗೆ ಕಾಂಗ್ರೆಸ್‌ ಸಬಲ

Team Udayavani, May 8, 2019, 11:38 AM IST

belegavi-tdy-1

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬದಲಾವಣೆ ಬೇಕು. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂಬ ವಾತಾವರಣದಲ್ಲಿ ಗೋಕಾಕ ತಾಲೂಕಿನ ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸೋಲು ಗೆಲುವಿನ ಲೆಕ್ಕಾಚಾರ ನಡೆದಿದೆ.

ಕಳೆದ ಏಪ್ರಿಲ್ 23ರಂದು ಮತದಾನ ನಡೆದ ನಂತರ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅರಭಾವಿ ಕ್ಷೇತ್ರದಲ್ಲಿ ತಮಗೇ ಮುನ್ನಡೆ ಖಚಿತ ಎಂಬ ವಿಶ್ವಾಸದಲ್ಲಿದ್ದರೆ ಯುವ ಸಮುದಾಯ ಮಾತ್ರ ಮೋದಿ ದೇಶಕ್ಕೆ ಮತ್ತೆ ಪ್ರಧಾನಿ ಆದರೆ ಎಷ್ಟು ಅನುಕೂಲ ಹಾಗೂ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅಥವಾ ಕಾಂಗ್ರೆಸ್‌ ನ ಡಾ.ವಿ.ಎಸ್‌. ಸಾಧುನವರ ಅವರನ್ನು ಗೆಲ್ಲಿಸಿದರೆ ನಮಗೇನು ಲಾಭ ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಮತದಾನದ ನಂತರ ಕ್ಷೇತ್ರದಲ್ಲಿ ಕಾಣುತ್ತಿರುವ ವಾತಾವರಣ ನೋಡಿದರೆ ಕಾಂಗ್ರೆಸ್‌ ಹಾಗೂ ಬಿಜೆಪಿ ಬಹುತೇಕ ಸಮ-ಸಮ ಮತಗಳನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಬಿಜೆಪಿ ವಿರುದ್ಧ ಇಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಒಂದಾಗಿ ಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಸಾಧುನವರ ಈ ಕ್ಷೇತ್ರದಲ್ಲಿ ಮುನ್ನಡೆ ಗಳಿಸುವ ವಿಶ್ವಾಸದಲ್ಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ಈ ಬಾರಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪೂರ್ಣ ಪ್ರಮಾಣದಲ್ಲಿ ಪ್ರಚಾರಕ್ಕೆ ನಿಂತಿರುವದು ಪಕ್ಷದ ವಲಯದಲ್ಲಿ ಹೊಸ ಆಸೆ ಹುಟ್ಟಿಸಿದೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ ಸುರೇಶ ಅಂಗಡಿ ಹಿನ್ನಡೆ ಅನುಭವಿಸಿದ್ದರು. ಆದರೆ ಈ ಬಾರಿ ಶೇ. 60ರಷ್ಟು ಹೆಚ್ಚಿನ ಮತಗಳನ್ನು ಗಳಿಸುತ್ತಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳುತ್ತಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಶಾಸಕರಿದ್ದರೂ ಸುರೇಶ ಅಂಗಡಿಗೆ ಕಾಂಗ್ರೆಸ್‌ ಸಾಕಷ್ಟು ಆತಂಕ ಉಂಟುಮಾಡಿದೆ. ಈ ಬಾರಿ ಕಾಂಗ್ರೆಸ್‌ಗೆ ಜೆಡಿಎಸ್‌ ಕೈಜೋಡಿಸಿದೆ. ಈ ಕ್ಷೇತ್ರದಲ್ಲಿ ಸುರೇಶ ಅಂಗಡಿ ಹಾಗೂ ಸಾಧುನವರ ನಡುವಿನ ಚುನಾವಣೆ ಎನ್ನುವದಕ್ಕಿಂತ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ಸೆಣಸಾಟ ಎಂಬಂತೆ ಕಂಡುಬಂದಿದೆ.

ಕ್ಷೇತ್ರದ ಜನರಿಗೆ ಸುರೇಶ ಅಂಗಡಿ ಪರ ಅಸಮಾಧಾನ ಇದೆ. ಮೂರು ಬಾರಿ ಸಂಸದರಾಗಿದ್ದರೂ ನಮಗೆ ಏನೂ ಮಾಡಿಲ್ಲ. ಈ ಬಾರಿ ಹೊಸ ಮುಖಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಅಭಿಪ್ರಾಯ ಕ್ಷೇತ್ರದ ಜನರಲ್ಲಿ ವಿಶೇಷವಾಗಿ ಯುವ ಸಮುದಾಯದಲ್ಲಿತ್ತು. ಇದು ತಮಗೆ ಅನುಕೂಲವಾಗುತ್ತದೆ ಎಂಬುದು ಕಾಂಗ್ರೆಸ್‌ ನಾಯಕರ ವಿಶ್ವಾಸ.

ಕೇಂದ್ರದಲ್ಲಿ ಮೋದಿ ಅವರು ಐದು ವರ್ಷ ಮಾಡಿದ ಸಾಧನೆ ಜನರಿಗೆ ಬಹಳ ಮೆಚ್ಚುಗೆಯಾಗಿದೆ. ಮತ್ತೆ ಅವರೇ ಪ್ರಧಾನಿಯಾಗಿ ಬರಬೇಕು ಎಂಬ ಅಭಿಪ್ರಾಯ ಎಲ್ಲ ಕಡೆ ಇದೆ. ಇದಲ್ಲದೇ ಕಾಂಗ್ರೆಸ್‌ದಲ್ಲಿ ನಾಯಕತ್ವವೇ ಇರಲಿಲ್ಲ. ಅವರಲ್ಲಿನ ಗೊಂದಲ ನಮಗೆ ಸಹಾಯಮಾಡಿತು ಎಂಬುದು ಬಿಜೆಪಿ ಮುಖಂಡರ ಹೇಳಿಕೆ.

.ಕೇಶವ ಆದಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.