ನಕಲಿ ಪತ್ರಕರ್ತರಿಂದ ಉದ್ಯಮದ ಘನತೆಗೆ ಧಕ್ಕೆ: ಜಗದೀಶ ಖೊಬ್ರಿ
ದಿನದಿಂದ ದಿನಕ್ಕೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ
Team Udayavani, Feb 24, 2023, 6:29 PM IST
ತೆಲಸಂಗ: ಪತ್ರಿಕೋದ್ಯಮದ ಗಂಧ ಗಾಳಿ, ಸಭ್ಯತೆ, ನೀತಿ, ನಿಯಮ ಯಾವುದೂ ಗೊತ್ತಿಲ್ಲದ, ಕನಿಷ್ಠ ವಿದ್ಯಾರ್ಹತೆಯೂ ಇಲ್ಲದ ಕೆಲವು ನಕಲಿ ಪತ್ರಕರ್ತರಿಂದ ನಿಜವಾದ ಪತ್ರಕರ್ತರಿಗೆ ಮತ್ತು ಉದ್ಯಮದ ಘನತೆ-ಗೌರವಕ್ಕೆ ಧಕ್ಕೆ ಬರುತ್ತಿದೆ ಎಂದು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜಗದೀಶ ಖೊಬ್ರಿ ಹೇಳಿದರು.
ಗುರುವಾರ ಗ್ರಾಮದ ಪತ್ರಿಕಾ ಭವನದಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಅವರು ಮಾತನಾಡಿ, ಯು ಟ್ಯೂಬ್ ಮತ್ತು ಮುದ್ರಣವಾಗದ ವಾರಪತ್ರಿಕೆಗಳ ಹೆಸರಿನಲ್ಲಿ ಅಧಿಕಾರಿ ಹಾಗೂ ಸಾರ್ವಜನಿಕರನ್ನು ಹೆದರಿಸಿ, ಅನೀತಿಗೆ ಕೈ ಹಾಕಿ ಬದುಕುತ್ತಿರುವರಿಂದ ಪತ್ರಕರ್ತರ ಗೌರವ ಹಾಳಾಗುತ್ತಿದೆ. ಸುದ್ದಿ ಪ್ರಸಾರಕ್ಕೆ ಬೇಕಿರುವ ಕನಿಷ್ಠ ಕಾನೂನಿನ ಅರಿವೂ ಇಲ್ಲ. ಕನ್ನಡ ಬರವಣಿಗೆ, ವ್ಯಾಕರಣವಂತೂ ಮೊದಲೇ ಗೊತ್ತಿಲ್ಲ. ಇಂತಹವರಿಗೆ ಕಡಿವಾಣ ಹಾಕಬೇಕಿರುವ ಅಧಿಕಾರಿ ವರ್ಗ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆಂದು ಹೇಳಿ ಮೌನವಾಗುತ್ತಿದ್ದಾರೆ.
ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರ್ಯಾರು ಎಂಬ ಪ್ರಶ್ನೆ ಎದುರಾಗುತ್ತಿದೆ. 30-40 ವರ್ಷಗಳಿಂದ ಈ ಉದ್ಯಮದಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರು ಈ ವ್ಯವಸ್ಥೆ ನೋಡಿ ಮರುಗುವಂತಾಗಿದೆ. ದಿನದಿಂದ ದಿನಕ್ಕೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ. ಪತ್ರಕರ್ತರ ಸೋಗಿನಲ್ಲಿರುವವರಿಗೆ ಕಾನೂನಿನ ಭಯ ಹುಟ್ಟಿದರೆ ಮಾತ್ರ ಇದಕ್ಕೆ ಕಡಿವಾಣ ಸಾಧ್ಯವಾಗಿದ್ದು, ಜಿಲ್ಲಾ ಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಇಂತಹ ನಕಲಿ ಪತ್ರಕರ್ತರ ವಿರುದ್ದ
ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪತ್ರಿಕೆಗಳ ಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯದರ್ಶಿ ಪ್ರಕಾಶ ಪೂಜಾರಿ ಮಾತನಾಡಿ, ಪತ್ರಕರ್ತರು ಸಮಾಜದ ಧ್ವನಿ ಎನ್ನುವುದು ಜನಸಾಮಾನ್ಯರ ತಿಳಿವಳಿಕೆಯಾಗಿತ್ತು. ಆದರೆ, ಪತ್ರಕರ್ತರ ಶ್ರೇಷ್ಠತೆಯನ್ನು ಇನ್ನು ಮುಂದೆ ಕಥೆಗಳಲ್ಲಿ ಮಾತ್ರ ಕೇಳುವ ಸ್ಥಿತಿ ನಿರ್ಮಾಣವಾಗಿದೆ. ಬಹುತೇಕರು ಮೊಬೈಲ್ ಪತ್ರಕರ್ತರು ಆಗಿದ್ದಾರೆ.
ಬರವಣಿಗೆಯೇ ಗೊತ್ತಿಲ್ಲದ ರೋಲ್ಕಾಲ್ ಪತ್ರಕರ್ತರ ಹಾವಳಿ ಸಮಾಜದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ನೂರಾರು ಯು ಟ್ಯೂಬ್ ಚಾನೆಲ್ಗಳು, ಕಂಡು ಕೇಳರಿಯದ ಪತ್ರಿಕೆಗಳ ಐಡಿ ಕಾರ್ಡ್, ವಿಸಿಟಿಂಗ್ ಕಾರ್ಡ್ಗಳನ್ನು ಇಟ್ಟುಕೊಂಡು, ದಪ್ಪ ದಪ್ಪ ಅಕ್ಷರಗಳಲ್ಲಿ ತಮ್ಮ ಕಾರು, ಬೆ„ಕ್ಗಳ ಮುಂಭಾಗ ಪ್ರಸ್ ಎಂದು ಬರೆಸಿಕೊಂಡು ತಿರುಗುವವರ ವಿರುದ್ಧ ಕ್ರಮ ಅವಶ್ಯಕ ಎಂದರು. ಉಪಾಧ್ಯಕ್ಷ ಮೋಹನ ಪಾಟಣಕರ, ಹಿರಿಯ ಪತ್ರಕರ್ತರಾದ ಬಸವರಾಜ ಚಮಕೇರಿ, ಮಲಗೌಡ ಪಾಟೀಲ, ಕಲ್ಮೇಶ ಸತ್ತಿ, ಶ್ರೀಶೈಲ ಮಾಳಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.