![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 22, 2023, 3:40 PM IST
ಚಿಕ್ಕೋಡಿ: ಜಿಎಲ್ ಬಿಸಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ನೂರಾರು ರೈತರು ಚಿಕ್ಕೋಡಿ- ಮಿರಜ ರಾಜ್ಯ ಹೆದ್ದಾರಿ ಹತ್ತಿರ ಕೇರೂರ ಕ್ರಾಸ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.
ಚಿಕ್ಕೋಡಿ- ಮಿರಜ ರಾಜ್ಯ ಹೆದ್ದಾರಿ ಬಂದ್ ಮಾಡಲು ಯತ್ನಿಸಿದ ರೈತರನ್ನು ಪೊಲೀಸರು ತಡೆ ಹಿಡಿದರು. ಕಾಲುವೆಗೆ ನೀರು ಹರಿಸದೇ ಇರುವ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ತಾಲೂಕಾ ಅಧ್ಯಕ್ಷ ಮಂಜುನಾಥ ಪರಗೌಡ ಮಾತನಾಡಿ. ಚಿಕ್ಕೋಡಿ ತಾಲೂಕಿನ ಕೇರೂರ. ಜೋಡಕುರಳಿ. ಅರಬ್ಯಾನವಾಡಿ. ರೂಪಿನಾಳ ಗ್ರಾಮದ ರೈತರಿಗೆ ಅನುಕೂಲವಾಗುವ ಜಿಎಲ್ ಬಿಸಿ ಕಾಲುವೆಗೆ ನೀರು ಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಕೊಡಲಾಗಿತ್ತು. ಆದರೂ ಕಾಲುವೆಗೆ ನೀರು ಹರಿಯದೇ ಇರುವ ಕಾರಣ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ನೀರು ಬಿಡುವ ತನಕ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ ಎಂದರು.
ನೀರಾವರಿ ಇಲಾಖೆ ಅಧಿಕಾರಿ ನಾಗೇಶ ಕೋಲಕಾರ ಮಾತನಾಡಿ. ನೀರಾವರಿ ಸಲಹಾ ಸಮಿತಿ ಇದೆ. ಬೇಡಿಕೆ ಅನುಗುಣವಾಗಿ ನೀರು ಬಿಡಲು ಆದೇಶ ಮಾಡುತ್ತಾರೆ. ಬರಗಾಲ ಇರುವುದರಿಂದ ವ್ಯತ್ಯಾಸ ಆಗಿದೆ. ಸಲಹಾ ಸಮಿತಿ ಒಪ್ಪಿಗೆ ಕೊಟ್ಟರೆ ಇವತ್ತೆ ನೀರು ತರುತ್ತೇನೆ. ಕಿನಾಲ ಸ್ವಚ್ಚತೆ ಮಾಡಿ ನೀರು ತರಲಾಗುತ್ತದೆ.ಜಿಎಲ್ ಬಿಸಿ ಕಾಲುವೆಗೆ ನೀರು ಬಿಟ್ಟರೆ ಎಂಟು ದಿನಗಳ ಒಳಗಾಗಿ ಕೇರೂರ ಗ್ರಾಮಕ್ಕೆ ನೀರು ತರುತ್ತೇನೆ. ಇವಾಗ ಪ್ರತಿಭಟನೆ ಕೈಬಿಡಬೇಕೆಂದು ಮನವಿ ಮಾಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮಶಿ ಗದಾಡಿ. ಅಥಣಿ ರೈತ ಸಂಘದ ಅಧ್ಯಕ್ಷ ಮಹಾದೇವ ಮಡಿವಾಳ. ದುಂಡಪ್ಪ ಹಿಂಗ್ಲಜ. ಪ್ರತಾಪ ಪಾಟೀಲ ಮಾತನಾಡಿದರು.
ಇದನ್ನೂ ಓದಿ: ಮಂಗಳೂರಿನಲ್ಲಿಗ ಮೈ ನವಿರೇಳಿಸುವ ರ್ಯಾಂಬೊ ಸರ್ಕಸ್
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.