ತಹಶೀಲ್ದಾರ್‌ ಕಚೇರಿಗೆ ರೈತರ ಮುತ್ತಿಗೆ


Team Udayavani, Nov 12, 2019, 12:23 PM IST

bg-tdy-2

ಸವದತ್ತಿ: ಬೆಳೆವಿಮೆ ಮತ್ತು ಬೆಳೆ ಹಾನಿ ಮೊತ್ತ ಪಾವತಿ ಮಾಡುವಲ್ಲಿ ಈ ಭಾಗದ ರೈತರಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಸ್ಥಳೀಯ ಹಾಗೂ ಇತರ ಭಾಗದ ರೈತರು ಹಠಾತನೇ ಸ್ಥಳೀಯ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದ ರೈತರ ಹೊಲಗಳಿಗೆ ನೀರು ನುಗ್ಗಿ ರೈತರನ್ನು ಸಂಕಷ್ಟಕ್ಕೆ ದೂಡಿದ್ದು, ಸರ್ಕಾರ ಬೆಳೆನಾಶಕ್ಕೆ ಪರಿಹಾರ ಅಥವಾ ಬೆಳೆ ವಿಮೆ ಮಂಜೂರು ಮಾಡಿದರೂ ಅಧಿಕಾರಿಗಳು ಮಾತ್ರ ಇತ್ತ ಗಮನ ನೀಡದೇ ರೈತರತ್ತ ಅಸಡ್ಡೆ ಭಾವ ತಳೆದಿದ್ದಾರೆಂದು ಪ್ರತಿಭಟನಾ ನಿರತ ಆರೋಪಿಸಿ ಬೆಳೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಅಪಾರ ಮಳೆಯಿಂದಾಗಿ ರೈತರಿಗೆ ದೊಡ್ಡ ನಷ್ಟವಾಗಿದೆ. ಬೆಳೆ ವಿಮೆ ಮೊತ್ತ ಇವತ್ತಿನ ವರೆಗೂ ಜಮೆಯಾಗಿಲ್ಲ. ತಿಂಗಳುಗಟ್ಟಲೇ ಕಚೇರಿಯಿಂದ ಕಚೇರಿಗೆ ಅಲೆದರೂ ಅಧಿಕಾರಿಗಳು ಬೇಜವಾಬ್ದಾರಿತನದ ಉತ್ತರ ನೀಡುತ್ತಿದ್ದಾರೆ. ಹೀಗಾದರೆ ಬಡ ರೈತ ಹೋಗುವುದಾದರೂ ಎಲ್ಲಿಗೆ? ಪರಿಹಾರ ಕೇಳುವುದೇ ತಪ್ಪು ಎಂಬಂತೆ ಅಸಡ್ಡೆ ಭಾವದಲ್ಲಿ ನಮ್ಮನ್ನು ಕಾಣುತ್ತಿದ್ದಾರೆಂದು ಆರೋಪಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆನಂದ ಮಾಮನಿ ಮಾತನಾಡಿ, ರೈತರಿಗೆ ಸೇರಬೇಕಾದ ಬೆಳೆವಿಮೆ ಮೊತ್ತ ಈ ಭಾಗಕ್ಕೆ ಮಾತ್ರವಲ್ಲ ಇಡೀ ತಾಲೂಕಿನಲ್ಲಿ ಸಮಸ್ಯೆಯಾಗಿರುವುದರಿಂದ ಜಿಲ್ಲಾಧಿಕಾರಿ ಜೊತೆ ಸಮಾಲೋಚಿಸಿ ಮರುಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನಾ ನಿರತ ರೈತರಿಗೆ ರಾಷ್ಟ್ರೀಯ ಬಸವದಳದ ಗೌರವಾಧ್ಯಕ್ಷ ಆನಂದ ಚೋಪ್ರಾ ಸಹ ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ವೀರೇಶ ಕಡಗದ, ಸಂಗಮೇಶ ಮಡಿವಾಳರ, ವೀರಭದ್ರ ಪಟ್ಟಣಶೆಟ್ಟಿ, ಬಸವರಾಜ ಸರ್‌ದೇಸಾಯಿ ಸೇರಿದಂತೆ ಸುತ್ತಮುತ್ತಲಿನ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರೈತರ ಗೋಳು ಇಲ್ಲಿ ಯಾರೂ ಕೇಳ್ಳೋರಿಲ್ಲ ಅದಕ್ಕಾಗಿ ನಾವೆಲ್ಲ ತಹಶೀಲ್ದಾರ್‌ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದೇವೆ. ಪರಿಹಾರ ಸಿಗದಿದ್ದರೆ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ರೈತ ಮುಖಂಡ ಶ್ರೀಕಾಂತ ಹಟ್ಟಿಹೊಳಿ ಹೇಳಿದರು.

ದೇಶಕ್ಕೆ ಅನ್ನ ನೀಡುವ ರೈತ ಸಂಕಷ್ಟದಲ್ಲಿದ್ದರೂ, ಅಧಿಕಾರಿಗಳ ಈ ನಡೆ ಬೇಸರ ತಂದಿದ್ದು, ರೈತರಿಗೆ ಪರಿಹಾರ ನೀಡುವ ಕಾರ್ಯ ಶೀಘ್ರವೇ ಜರುಗದಿದ್ದರೆ ರೈತರೊಂದಿಗೆ ಹೋರಾಡಲು ಬದ್ಧ ಎಂದು ಶಾಸಕ ಆನಂದ ಮಾಮನಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ram Jarakiholi

B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ

Belagavi: Did we tell Muniratna to speak like that?: Satish Jarakiholi

Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

6-chikkodi

Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.