Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
Team Udayavani, Jun 20, 2024, 11:39 AM IST
ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ.
ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ. ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಬೆಕ್ಕನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇದರಿಂದ ಅಗ್ನಿಶಾಮಕ ದಳದ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಸಂದರ್ಭದಲ್ಲಿ ದೊಡಮನಿ ಕುಟುಂಬ ಹಾಗೂ ಚಿಕ್ಕೋಡಿ ಅಗ್ನಿಶಾಮಕ ಠಾಣಾಧಿಕಾರಿ ಅನುರಾಗ್ ಬಿ.ಎಲ್., ಅಗ್ನಿಶಾಮಕ ಪ್ರಾಮುಖ ರಾಚಯ್ಯ ಮಠಪತಿ, ಎಸ್.ಎನ್.ನಾಗ ಊರಿ, ರಾಜೇಂದ್ರ ಪಾಟೀಲ್, ಧೀರ ಗವಿ, ಬಸು ಹಿರೇಗೌಡರ್, ಹೈದರ್ ಅಲಿ ಮುಲ್ತಾನಿ.ಮಂಜು ಸನದಿ ಉಪಸ್ಥಿತರಿದ್ದರು.
ಇದನ್ನೂ ಓದಿ: Reasi Attack: ಕಾಶ್ಮೀರ ಯಾತ್ರಿಗಳ ಬಸ್ಗೆ ಉಗ್ರ ದಾಳಿ: ಆರೋಪಿ ಹಕಮ್ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.