ಪ್ರವಾಹ ಪ್ರಹಾರ


Team Udayavani, Aug 6, 2019, 12:41 PM IST

bg-tdy-3
ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಮಳೆಯ ರಭಸದ ಆಟ ಮುಂದುವರಿದಿದೆ. ನದಿಗಳ ಅಬ್ಬರ ಹೆಚ್ಚುತ್ತಲೇ ಇದೆ. ಇದೆಲ್ಲದರ ಪರಿಣಾಮ ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ, ಖಾನಾಪುರ ತಾಲೂಕುಗಳಲ್ಲಿ ನದಿಗಳ ಪ್ರವಾಹದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ರಾಮದುರ್ಗ ತಾಲೂಕು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳ ಶಾಲೆಗಳಿಗೆ ಆ.6 ಹಾಗೂ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಎಸ್‌.ಬಿ. ಬೊಮ್ಮನಹಳ್ಳಿ ಅದೇಶ ಹೊರಡಿಸಿದ್ದಾರೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ, ದೂದಗಂಗಾ ಹಾಗೂ ವೇದಗಂಗಾ ನದಿಗಳ ಪ್ರವಾಹದಿಂದ ಚಿಕ್ಕೋಡಿ, ಅಥಣಿ, ರಾಯಬಾಗ, ಖಾನಾಪುರ, ಮೂಡಲಗಿ, ಕಾಗವಾಡ ಹಾಗೂ ಗೋಕಾಕ ತಾಲೂಕುಗಳಲ್ಲಿ 30 ಸೇತುವೆಗಳು ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಯುವಕ ನೀರುಪಾಲು: ಈ ಮಧ್ಯೆ ಕುಂಭದ್ರೋಣ ಮಳೆಗೆ ಕೃಷ್ಣೆಯ ಪ್ರವಾಹ ಪ್ರಹಾರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಕೃಷ್ಣಾ ನದಿ ದಡದ ಅಥಣಿ ತಾಲೂಕಿನ ಗ್ರಾಮದಲ್ಲಿ ಜಾನುವಾರುಗಳಿಗೆ ಮೇವು ನೀಡಲು ಹೋಗಿದ್ದ ಯುವಕನೊಬ್ಬ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮಾರುತಿ ಜಾಧವ್‌ (34) ಮೃತ ವ್ಯಕ್ತಿ. ಹುಲಗಬಾಳಿ ಗ್ರಾಮದ ಮಾಂಗ ತೋಟದ ಮನೆಯ ಬಳಿ ಈ ಘಟನೆ ನಡೆದಿದೆ. ರವಿವಾರ ಜಾನುವಾರುಗಳನ್ನು ತೋಟದ ಮನೆಯಲ್ಲೇ ಬಿಟ್ಟು ಕೇವಲ ಮಾರುತಿ ಕುಟುಂಬದ ಸದಸ್ಯರನ್ನು ಮಾತ್ರ ಸ್ಥಳಾಂತರಿಸಲಾಗಿತ್ತು. ಆದರೆ ತಮ್ಮ ಜಾನುವಾರುಗಳು ತೋಟದ ಮನೆಯಲ್ಲೇ ಇದ್ದದ್ದರಿಂದ ಬೆಳಿಗ್ಗೆ ಅವುಗಳಿಗೆ ಮೇವು ಹಾಕಲು ಬಂದಿದ್ದ ಮಾರುತಿ ನೀರಿನ ರಭಸಕ್ಕೆ ಸಿಲುಕಿ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಕೊಯ್ನಾ ಜಲಾಶಯ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಲೇ ಇದ್ದು ಕೃಷ್ಣಾ ನದಿಯ ಹರಿವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇದರಿಂದ ಚಿಕ್ಕೋಡಿ, ಅಥಣಿ ಹಾಗೂ ರಾಯಬಾಗ ತಾಲೂಕಿನ ನದಿ ತೀರದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. 2005ರಲ್ಲಿ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಆತಂಕ ಹಾಗೂ ಹಾನಿ ಉಂಟುಮಾಡಿದ್ದ ಮಹಾರಾಷ್ಟ್ರದ ಕೊಯ್ನಾ ಹಾಗೂ ವಾರಣಾ ಜಲಾಶಯ ಭರ್ತಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ ಕೊಯ್ನಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ಹಾಗೂ ವಾರಣಾ ಜಲಾಶಯದಿಂದ 34 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ವಾರಣಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೆ ಒಟ್ಟು 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಈಗ 100 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಿಂದ ಕೃಷ್ಣಾ ನದಿಗೆ ರಾಜಾಪುರ ಬ್ಯಾರೇಜ್‌ ಮೂಲಕ 2,27,068 ಹಾಗೂ ದೂಧಗಂಗಾ ನದಿಯಿಂದ 37,312 ಸೇರಿ ಒಟ್ಟು 2,64,380 ಕ್ಯೂಸೆಕ್‌ ನೀರು ಬರುತ್ತಿದೆ.
ಮಳೆ ಆರ್ಭಟದಿಂದ ಮುಳುಗಿದ ಸೇತುವೆಗಳು:

ಚಿಕ್ಕೋಡಿ ತಾಲೂಕು ಕಲ್ಲೋಳ-ಯಡೂರ, ಸದಲಗಾ-ಬೋರಗಾಂವ, ಕಾರದಗಾ-ಭೋಜ, ಬೋಜವಾಡಿ-ಕುನ್ನೂರ. ಯಕ್ಸಂಬಾ-ದಾನವಾಡ, ಸಿದ್ನಾಳ-ಅಕ್ಕೋಳ, ಜತ್ರಾಟ-ಭೀವಶಿ ಹಾಗೂ ಮಲಿಕವಾಡ- ದತ್ತವಾಡ ಸೇತುವೆಗಳು. ಅಥಣಿ: ನದಿ ಇಂಗಳಗಾವ-ತೀರ್ಥ, ಸಪ್ತಸಾಗರ-ಬಾವನಸವದತ್ತಿ, ಕೊಕಟನೂರ-ಶಿರಹಟ್ಟಿ. ಜುಂಜರವಾಡ-ತುಬಚಿ, ಖವಟಕೊಪ್ಪ-ಶೇಗುಣಸಿ, ಕಾಗವಾಡ ತಾಲೂಕು: ಉಗಾರ ಕೆ ಎಚ್-ಉಗಾರ ಬಿ ಕೆ ರಸ್ತೆ. ರಾಯಬಾಗ ತಾಲೂಕು: ಕುಡಚಿ ಸೇತುವೆ, ರಾಯಬಾಗ-ಚಿಂಚಲಿ.ಗೋಕಾಕ: ಶಿಂಗಳಾಪುರ-ಗೋಕಾಕ, ಚಿಗಡೊಳ್ಳಿ-ನಲ್ಲಾನಟ್ಟಿ. ಉದಗಟ್ಟಿ-ವಡೇರಹಟ್ಟಿ. ಮೂಡಲಗಿ: ಸುಣಧೋಳಿ-ಮೂಡಲಗಿ. ಢವಳೇಶ್ವರ-ಮಹಾಲಿಂಗಪುರ. ಹುಣಶ್ಯಾಳ ಪಿ. ಖಾನಾಪುರ: ಮಂತುರ್ಗಾ, ತಿವೋಲಿ, ನಿಲವಡೆ, ಹಾಲತ್ರಿ, ಹಬ್ಟಾನಟ್ಟಿ, ಪಾರಿಶ್ವಾಡ ಹಾಗೂ ಡುಕ್ಕರವಾಡಿ.
ಪಾಲಿಕೆ ಸಹಾಯವಾಣಿ ಕೇಂದ್ರ:

ಕಳೆದ 10 ದಿನಗಳಿಂದ ಬೆಳಗಾವಿ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಅನೇಕ ಕಡೆ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಅತಿಯಾದ ಮಳೆಯಿಂದ ತೊಂದರೆಗೆ ಒಳಗಾಗುವ ನಗರ ವ್ಯಾಪ್ತಿಯ ತಗ್ಗು ಪ್ರದೇಶದ ವಾಸಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮಹಾನಗರಪಾಲಿಕೆಯ ವತಿಯಿಂದ ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು ರಚಿಸಲಾಗಿದೆ. ಮಳೆಯಿಂದ ತೊಂದರೆಗೆ ಒಳಗಾಗುವ ನಗರ ವಾಸಿಗಳ ಅನುಕೂಲಕ್ಕಾಗಿ ದೂರು ಸ್ವೀಕರಿಸಲು 24ಗಂಟೆಗಳ ಕಾಲ ಕಾರ್ಯನಿರತವಿರುವ ಸಹಾಯವಾಣಿ ಕೇಂದ್ರವನ್ನು ಪಾಲಿಕೆಯ ಮುಖ್ಯ ಕಚೇರಿಯಲ್ಲಿ ನಿರ್ವಹಿಸಲಾಗುತ್ತಿದೆ. ಪಾಲಿಕೆಯ ವತಿಯಿಂದ ರಚಿಸಲಾದ ರಕ್ಷಣಾ ಕಾರ್ಯಾಚರಣೆಯ ತಂಡಗಳ ಸಹಾಯ ಪಡೆಯಲು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 0831-2405316 ಅಥವಾ 2405337ನ್ನು ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತ ಇನ್ನು ಬೆಳಗಾವಿ ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸೋಮವಾರ ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ತೊಂದರೆ ಉಂಟುಮಾಡಿದೆ. ಇನ್ನೊಂದು ಕಡೆ ಬಳ್ಳಾರಿ ನಾಲಾ ಸಹ ಸಂಪೂರ್ಣ ತುಂಬಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಭತ್ತದ ಗದ್ದೆಗಳಿಗೆ ನುಗ್ಗಿ ರೈತ ಸಮುದಾಯದಲ್ಲಿ ಸಾಕಷ್ಟು ಆತಂಕ ಉಂಟುಮಾಡಿದೆ.
• ಕೇಶವ ಆದಿ 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.