ಜಾನಪದ ಎಲ್ಲರ ಎದೆಯಾಳದ ಕಲೆ:ಗುರುಸಿದ್ದೇಶ್ವರ ಸ್ವಾಮೀಜಿ

ಇದೇ ವೇಳೆ ಜಾನಪದ ಕಲಾ ಮೇಳಕ್ಕೆ ಪ್ರೋತ್ಸಾಹಿಸಿದ ಅನೇಕ ಮಹನೀಯರನ್ನು ಸತ್ಕರಿಸಲಾಯಿತು.

Team Udayavani, Mar 24, 2022, 5:47 PM IST

ಜಾನಪದ ಎಲ್ಲರ ಎದೆಯಾಳದ ಕಲೆ:ಗುರುಸಿದ್ದೇಶ್ವರ ಸ್ವಾಮೀಜಿ

ರಾಮದುರ್ಗ: ಗ್ರಾಮೀಣರ ಬದುಕಿನಲ್ಲಿ ಹಾಸುಹೊಕ್ಕಾದ ಜಾನಪದ ಸಾಹಿತ್ಯವು ಬೇರೆಯವರಿಂದ ಬಂದಿಲ್ಲ, ಎಲ್ಲರ ಎದೆಯಾಳದಿಂದ ಬಂದ ಕಲೆಯಾಗಿದೆ ಎಂದು ರಬಕವಿಯ ಬ್ರಹ್ಮಾನಂದ ಆಶ್ರಮದ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಬಸಲಿಂಗಯ್ಯ ಹಿರೇಮಠ ಮತ್ತು ಕೌಜಲಗಿ ವಿಠಲ ವೇದಿಕೆಯಲ್ಲಿ ಅವರಾದಿ ಶಿವಪೇಟೆಯ ಓಂ ಶಿವ ಮೇಳದ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಜಾನಪದ ಮಹಾಸಮ್ಮೇಳನದ 2ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಈ ನಾಡಿನ ತುಂಬೆಲ್ಲ ಜಾನಪದದ ಬೀಜವನ್ನು ಬಿತ್ತಿ ಅಪಾರ ಬೆಳೆ ಬೆಳೆದು ನೆಮ್ಮದಿಯ ಜೀವನ ಸಾಗಿಸುತ್ತಿರುವ ಸಿದ್ದು ಮೋಟೆ ಅವರ ಜೀವನ ನಮಗೆಲ್ಲ ಆದರ್ಶವಾಗಿದೆ. ಸತತ ಮೂರು ದಿನಗಳವರೆಗೆ ಕಾರ್ಯಕ್ರಮ ಆಯೋಜಿಸಿ ಸಂಘಟನೆ ಮಾಡುವುದು ಸುಲಭದ ಮಾತಲ್ಲ ಎಂದು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನಹಟ್ಟಿಯ ಬಿ.ಆರ್‌. ಪೊಲೀಸ್‌ ಪಾಟೀಲ ಮಾತನಾಡಿ, ಜಾನಪದವು ಹಿಂದೆ ಹೀಗಿತ್ತು ಎಂದು ಹೇಳುವುದರ ಜೊತೆಗೆ ಜಾನಪದ ಕಲೆಯನ್ನು ಮುಂದುವರೆಸಿಕೊಂಡು ಹೋಗುವುದರಲ್ಲಿ ಕುಷ್ಟಗಿ ಭಾಗದಲ್ಲಿ ಜೀವನಸಾಬ ವಾಲಿಕಾರ, ರಾಮದುರ್ಗದಲ್ಲಿ ಸಿದ್ದು ಮೋಟೆ ಮತ್ತು ಬನಹಟ್ಟಿಯಲ್ಲಿ ಬಿ.ಆರ್‌. ಪೋಲಿಸ್‌ ಪಾಟೀಲ ಮುನ್ನೆಲೆಗೆ ಬಂದು ನಿಲ್ಲುತ್ತಾರೆ ಎಂದು ಹೇಳಿದರು.

ಉದ್ಯಮಿ ವಿಜಯ್‌ ಶೆಟ್ಟಿ, ಬೆಂಬಳಗಿ ಕಾಲೇಜಿನ ಸಹ ಪ್ರಾಧ್ಯಾಪಕ ಪ್ರಕಾಶ ತೆಗ್ಗಿಹಳ್ಳಿ, ಡಾ| ಎಂ.ಎನ್‌. ಸಿದ್ಧಗಿರಿ, ಪುರಸಭೆ ಸದಸ್ಯೆ ರಾಜೇಶ್ವರಿ ಮೆಟಗುಡ್ಡ ಮಾತನಾಡಿದರು. ಬನಹಟ್ಟಿಯ ಬಿ.ಎರ್‌. ಪೊಲೀಸ್‌ ಪಾಟೀಲ, ರಾಮದುರ್ಗದ ಸಂಕಮ್ಮ ಗುದಗಾಪುರ, ಕುಷ್ಟಗಿಯ ಜೀವನಸಾಬ ವಾಲಿಕಾರ ಅವರಿಗೆ ಜಾನಪದ ಶಿವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ಜಾನಪದ ಕಲಾ ಮೇಳಕ್ಕೆ ಪ್ರೋತ್ಸಾಹಿಸಿದ ಅನೇಕ ಮಹನೀಯರನ್ನು ಸತ್ಕರಿಸಲಾಯಿತು.

ವೇದಿಕೆಯಲ್ಲಿ ಮುತ್ತುರಾಜ ಕೊಂಡಾ, ಸುರೇಶ ದೇಸಾಯಿ, ರಾಮಚಂದ್ರ ಯಾದವಾಡ, ಚಂದ್ರು ಮಾಳದಕರ, ಡಾ| ಅಮೀತ ಆಪ್ಟೆ, ಬಿ.ಎಸ್‌. ಗುಡದನ್ನವರ, ಇತರರು ಇದ್ದರು. ರಾಜು ಬದಾಮಿ ಅವರಿಂದ ಹಾಸ್ಯ ಮತ್ತು ಪವಾಡ ಬಯಲು ಕಾರ್ಯಕ್ರಮ, ಜಾನಪದ ಕಲಾವಿದರಿಂದ ತತ್ವಪದ, ಶಿವಭಜನೆ, ಮಹಿಳೆಯರ ಕೋಲಾಟ, ಗೀಗಿ ಪದ, ಬೀಸುಕಲ್ಲು ಪದ, ಸೋಬಾಣ ಪದ, ಮದುವೆ ಹಾಡುಗಳು ಸೇರಿದಂತೆ 15ಕ್ಕೂ ಹೆಚ್ಚು ಕಲಾ ತಂಡಗಳಿಂದ ಜಾನಪದ ವೈವಿಧ್ಯಮಯ
ಕಾರ್ಯಕ್ರಮಗಳು ವೇದಿಕೆಯಲ್ಲಿ ಜರುಗಿದವು. ಶಿಕ್ಷಕ ತುಕಾರಾಮ ಕರದಿನ ಸ್ವಾಗತಿಸಿದರು. ಶಿಕ್ಷಕ ಗಣೇಶ ಕೊಳದೂರ ನಿರೂಪಿಸಿದರು. ಕಲಾವಿದ ಸಿದ್ದು ಮೋಟೆ ವಂದಿಸಿದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.