ಸಮಗ್ರ ಕೃಷಿ ಪದ್ಧತಿ ಅನುಸರಿಸಿ

ಕೃಷಿ ಸಮಾವೇಶಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯಲಿ: ಸಚಿವ ಪಾಟೀಲ

Team Udayavani, Mar 15, 2022, 2:39 PM IST

13

ಚಿಕ್ಕೋಡಿ: ರೈತರು ಸಮಗ್ರ ಕೃಷಿ ನೀತಿ ಅಳವಡಿಸಿಕೊಂಡು ಕೃಷಿ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸೆಯಂತೆ ರೈತರ ಆದಾಯ ದ್ವಿಗುಣವಾಗಲಿದೆ. ರೈತರು ಕೃಷಿ ಮಾಡಲು ಹಿಂದೇಟು ಹಾಕದೇ ಕೃಷಿಯಲ್ಲಿಯೇ ಉದ್ಯೋಗ ಕೊಡುವ ಕೃಷಿ ಉದ್ಯಮಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಅಂಕಲಿ ಗ್ರಾಮದಲ್ಲಿ ಬೆಂಗಳೂರಿನ ಐಸಿಎಆರ್‌ ಅಟಾರಿ, ಮತ್ತಿಕೊಪ್ಪದ ಕೆಎಲ್‌ಇ ಸಂಸ್ಥೆ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸೋಯಾಬೀನ್‌ ಹಾಗೂ ಕಬ್ಬು ಬೆಳೆಯುವ ರೈತರ, ವಿಜ್ಞಾನಿಗಳ ಮತ್ತು ಉದ್ಯಮಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿ ನಡೆಯುವ ಕೃಷಿ ಸಮ್ಮೇಳನ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಅತೀ ಮುಖ್ಯವಾಗಿದೆ. ಕೃಷಿ ವಿಜ್ಞಾನಿಗಳ ಮೂಲಕ ರೈತರಿಗೆ ಕೃಷಿ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇಂದಿನ ದಿನಗಳಲ್ಲಿ ಅವಶ್ಯಕವಾಗಿದೆ. ಈ ದೇಶ ಸದೃಢವಾಗಿ ಬೆಳೆಯಲು ರೈತರು ಬೆಳೆಯುವ ಆಹಾರ ಮುಖ್ಯವಾಗಿದೆ ಎಂದರು.

ಕೃಷಿ ಸಚಿವನಾದ ಮೇಲೆ ಕೃಷಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಇಲಾಖೆ ದೂರವಾಣಿಯಲ್ಲಿ ಹಲೋ ಬದಲು ಜೈಕಿಸಾನ್‌ ಎನ್ನುವ ಸಂದೇಶ ಅಳವಡಿಸಲಾಗಿದೆ. ರೈತರು ಸಂಕೋಚ ಪಡದೇ ಕೃಷಿಯತ್ತ ಮುನ್ನುಗ್ಗಬೇಕು. ಅನ್ನ ಕೊಡುವ ರೈತನ ತಾಕತ್ತು ಯಾವ ಉದ್ಯಮಿಗಳಿಗೂ ಸಾಧ್ಯವಿಲ್ಲ ಎಂದರು.

ಕಬ್ಬಿನ ಬೆಳೆಯ ಜೊತೆಗೆ ಸೋಯಾಬೀನ್‌ ಕೃಷಿ ಮಾಡುವುದು ಸೂಕ್ತವಾಗಿದೆ. ಎಣ್ಣೆ ಪದಾರ್ಥ ಬೆಳೆ ದೇಶಕ್ಕೆ ಹೆಚ್ಚಾಗಬೇಕಿದೆ. ದೇಶಕ್ಕೆ ಸುಮಾರು 75 ಸಾವಿರ ಕೋಟಿಯಷ್ಟು ಎಣ್ಣೆ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಅದೇ ನಮ್ಮ ದೇಶದಲ್ಲಿ ಹೆಚ್ಚಿನ ಎಣ್ಣೆ ಪದಾರ್ಥ ಬೆಳೆ ಅವಶ್ಯಕ ಎಂದರು.

ರೈತರು ಒಂದೇ ಕೃಷಿಯತ್ತ ಮನಸ್ಸು ಮಾಡದೇ ಹತ್ತು ಬೆಳೆ ಬೆಳೆಯಲು ಮುಂದಾಗಬೇಕು. ಹವಾಮಾನ ಸೇರಿದಂತೆ ಇನ್ನಿತರ ಕಾರಣಗಳಿಂದ ಬೆಳೆ ಹಾನಿಯಾದರೆ ಒಂದು ಬೆಳೆಯಾದರೂ ರೈತನ ಕೈಹಿಡಿಯುತ್ತದೆ. ರೈತರು ತಂತ್ರಜ್ಞಾನ ಅಳವಡಿಸಿಕೊಂಡು ಸಮಗ್ರ ಕೃಷಿ ನೀತಿ ಅನುಸರಿಸಬೇಕು. ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ವಿವಿಧ ಯೋಜನೆ ಜಾರಿ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಮಾತನಾಡಿ, ಸರ್ಕಾರಿ ನೌಕರಿಗೆ ಇರುವ ಮಾನ್ಯತೆ ಕೃಷಿಕರಿಗೂ ಬರಬೇಕು. ಕೃಷಿ ಉಳಿದರೆ ಮಾತ್ರ ದೇಶದ ಭವಿಷ್ಯ ಸುಭದ್ರವಾಗಿರುತ್ತದೆ. ಯುವಕರು ಕೃಷಿ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ವೇದಿಕೆ ಮೇಲೆ ಐಸಿಎಆರ್‌ ಅಟಾರಿ ನಿರ್ದೇಶಕ ಡಾ| ವಿ.ವೆಂಕಟಸುಬ್ರಮಣಿಯನ್‌, ಡಾ| ನೀತಾ ಖಾಂಡೇಕರ, ಭರತೇಶ ಬಣವನೆ, ಮಲ್ಲಿಕಾರ್ಜುನ ಕೋರೆ, ಡಾ| ಆರ್‌ .ಬಿ.ಖಂಡಗಾವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಹೇಶ ಭಾತೆ, ಸುರೇಶ ಪಾಟೀಲ, ಡಾ| ಪ್ರಸಾದ ರಾಂಪೂರೆ ಮುಂತಾದವರು ಇದ್ದರು. ಬಿ.ಆರ್‌.ಪಾಟೀಲ ಸ್ವಾಗತಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.