Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ
Team Udayavani, Sep 17, 2024, 8:11 PM IST
ಬೆಳಗಾವಿ: 11 ದಿನಗಳ ಕಾಲ ಪೂಜಿಸಿ ಆರಾಧಿಸಲ್ಪಟ್ಟ ಗಣಪನಿಗೆ ವಿದಾಯ ಹೇಳಲಾಯಿತು. ನಗರ ಸೇರಿದಂತೆ ಜಿಲ್ಲೆಯಾದ್ಯಂತ 11 ದಿನದ ಅನಂತ ಚತುರ್ದಶಿಯಂದು ಗಣೇಶನಿಗೆ ಅದ್ಧೂರಿಯಾಗಿ ಕಳುಹಿಸಿ ಕೊಡಲಾಯಿತು.
ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆಗೆ ಮಂಗಳವಾರ ಸಂಜೆ 5:30ಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಗಣೇಶ ಮೂರ್ತಿಗೆ ಆರತಿ ಬೆಳಗಿ, ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಮೇಯರ್ ಸವಿತಾ ಕಾಂಬಳೆ, ಶಾಸಕರಾದ ಅಭಯ ಪಾಟೀಲ, ಆಸೀಫ (ರಾಜು) ಸೇಠ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಪಂ ಸಿಇಒ ರಾಹುಲ್ ಶಿಂಧೆ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಮಾಜಿ ಶಾಸಕರಾದ ಮಹಾಂತೇಶ ಕವಟಗಿಮಠ, ಅನಿಲ್ ಬೆನಕೆ, ಪದಾಧಿಕಾರಿಗಳಾದ ರಂಜಿತ ಪಾಟೀಲ, ವಿಕಾಸ ಕಲಘಟಗಿ, ವಿಜಯ ಜಾಧವ ಸೇರಿದಂತೆ ಇತರರು ಇದ್ದರು.
ಗಣ್ಯರು ಢೋಲ್ ತಾಷಾ ಬಾರಿಸಿದರು. ಶಾಸಕ ಅಭಯ ಪಾಟೀಲ ಟ್ರ್ಯಾಕ್ಟರ್ ಚಲಾಯಿಸಿದರು.
ಗಣಪತಿ ಬಪ್ಪಾ ಮೋರಯಾ, ಪುಡಚ್ಯಾ ವರ್ಷಿ ಲೌಕರ್ ಯಾ, ಮಂಗಲ ಮೂರ್ತಿ ಮೋರಯಾ ಎಂಬ ಘೋಷಣೆಗಳನ್ನು ಮೊಳಗಿಸಿ ಗಣೇಶ ಮುಂದಿನ ವರ್ಷ ಮತ್ತೆ ಬೇಗ ಬಾ ಎಂದು ಜೈಕಾರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.