![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 29, 2020, 2:47 PM IST
ಗೋಕಾಕ: ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡು ನಾಡಿಗೆ ಕೀರ್ತಿ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.
ರವಿವಾರ ನಗರದ ಆಶ್ರಯ ಬಡಾವಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ3.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ 1 ಕೋಟಿ ರೂ. ವೆಚ್ಚದ ಅಲೆಮಾರಿ/ಅರೆ ಅಲೆಮಾರಿ ಮಕ್ಕಳ ಆಶ್ರಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂಲಭೂತ ಸೌಲಭ್ಯದೊಂದಿಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಲಾಗುತ್ತಿದೆ. ಅಧಿಕಾರಿಗಳು, ಶಿಕ್ಷಕರ ಮತ್ತು ಪಾಲಕರ ಸಹಕಾರದಿಂದ ವಿದ್ಯಾರ್ಥಿಗಳು ಪ್ರತಿಭೆಗಳಾಗಿ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನಗರದ ಪಪೂ ಕಾಲೇಜಲ್ಲಿ 1 ಕೋಟಿ ರೂ. ವೆಚ್ಚದಲ್ಲಿ 6 ಕೊಠಡಿಗಳು ಮತ್ತು 2 ಶೌಚಾಲಯ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭಾ ಸದಸ್ಯರಾದ ಎಸ್.ಎ.ಕೋತವಾಲ, ಗಿರೀಶ ಖೋತ, ಜಯಾನಂದ ಹುಣಶ್ಯಾಳ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಬಸವರಾಜ ಆರೆನ್ನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರಾಮನಗೌಡ ಕನ್ನೋಳಿ, ತಾಲೂಕಾಧಿಕಾರಿ ಆರ್.ಕೆ. ಬಿಸಿರೊಟ್ಟಿ, ಬಿಇಒ ಜಿ.ಬಿ.ಬಳಗಾರ, ಪಪೂ ಕಾಲೇಜು ಪ್ರಾಚಾರ್ಯ ಎ.ವೈ. ಹಾದಿಮನಿ, ಮುಖಂಡರಾದ ಅಶೋಕ ಪಾಟೀಲ, ಆಯ್ .ವಿ.ಕೌತನಾಳಿ, ಶಂಕರ ಧರೆನ್ನವರ, ಸಿದ್ದಲಿಂಗ ದಳವಾಯಿ, ಮಹಾಂತೇಶ ತಾವಂಶಿ, ಅಮƒತ ದಪ್ಪಿನವರ, ದುರ್ಗಪ್ಪ ಶಾಸ್ತಿಗೊಲ್ಲರ, ಸಿದ್ದಾರ್ಥ ಪಾತ್ರೋಟ, ಶಾಮಾನಂದ ಪೂಜೇರಿ ಸೇರಿದಂತೆ ಅನೇಕರು ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.