![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 13, 2022, 6:10 PM IST
ರಾಮದುರ್ಗ: ತಾಲೂಕು ಆಡಳಿತ ಸದೃಢವಾಗಿದ್ದರೆ ತಾಲೂಕು ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಫ್ರಂಟ್ ಲೈನ್ ವಾರಿಯರ್ ಮುನ್ನೆಚ್ಚರಿಕೆ ಡೋಸ್ ಪಡೆದು ಕೊರೊನಾ ವಿರುದ್ಧದ ಅಭಿಯಾನ ಮುಂದುವರಿಸಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ 60 ವರ್ಷ ಮೇಲ್ಪಟ್ಟವರಿಗೆ ನೀಡುವ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸೇರಿದಂತೆ ಹಲವು ಸಚಿವರಿಗೆ ಸೋಂಕು ಅಂಟಿಕೊಳ್ಳುತ್ತಿದೆ. ಎರಡನೇ ಲಸಿಕೆ ಪಡೆದು 9 ತಿಂಗಳು ನಂತರದ 60 ವರ್ಷ ಮೇಲ್ಪಟ್ಟ ವಯಸ್ಕರು ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಬೇಕು ಎಂದರು. ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಸರ್ಕಾರದ ಆದೇಶದನ್ವಯ 60 ವರ್ಷದ ವೃದ್ಧರು ಲಸಿಕೆ ಪಡೆದು ಹೆಚ್ಚು ಸುರಕ್ಷಿತವಾಗಿ ಇರಬೇಕೆಂದು ಹೇಳಿದರು.
ತಾಪಂ ಇಒ ಪ್ರವೀಣಕುಮಾರ ಸಾಲಿ ಸ್ವತಃ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಅಭಿಯಾನಕ್ಕೆ ಚಾಲನೆ ನೀಡಿಡರು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ಪೋತದಾರ, ಮುಖ್ಯ ವೈದ್ಯಾಧಿಕಾರಿ ಡಾ| ನಿರ್ಮಲಾ ಹಂಜಿ, ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಪಟ್ಟಣಶೆಟ್ಟಿ ಇತರರಿದ್ದರು. ಎಸ್.ಡಿ. ಐನಾಪೂರ ಸ್ವಾಗತಿಸಿ, ವಂದಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.