![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 7, 2020, 1:02 PM IST
ಬೆಳಗಾವಿ/ಚಿಕ್ಕೋಡಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾನಾಪೂರದಿಂದ ಜಾರ್ಖಂಡ್ ಗೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದ ತೆರಳುತ್ತಿದ್ದ 13 ಜನ ಕಾರ್ಮಿಕರನ್ನು ತಡೆದು ಆರೋಗ್ಯ ತಪಾಸಣೆ ನಡೆಸುವ ವೇಳೆ ಕಾರ್ಮಿಕನೋರ್ವ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ.
ಜಾರ್ಖಂಡ್ ಮೂಲದ ಬಾಬುಲಾಲ್ ಸಿಂಗ್ ( 45) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ. ಖಾನಾಪುರದಲ್ಲಿ ಈ ಕಾರ್ಮಿಕರು ಸೆಂಟ್ರಿಂಗ್ ಕೆಲಸ ನಡೆಸುತ್ತಿದ್ದರು. ಲಾಕ್ಡೌನ್ನಲ್ಲಿ ಇಲ್ಲಿಯೇ ಸಿಕ್ಕಿ ಹಾಕಿಕೊಂಡಿದ್ದರು. ಹೇಗಾದರೂ ಮಾಡಿ ಊರು ಸೇರಬೇಕೆಂದು ಕಾಲ್ನಡಿಗೆ ನಡೆಸಿದ್ದರು.
ಲಾಕ್ ಡೌನ್ ಆಗಿದ್ದರಿಂದ ಕಾಲ್ನಡಿಗೆ ಆರಂಭಿಸಿದ್ದ ಕಾರ್ಮಿಕರು ಖಾನಾಪುರದಿಂದ ಎರಡು ದಿನಗಳ ಹಿಂದೆ ಬಿಟ್ಟಿದ್ದರು. ಚಿಕ್ಕೋಡಿಗೆ ಬಂದಾಗ ಪೊಲೀಸರು ಇವರನ್ನು ತಡೆದು ಆಸ್ಪತ್ರೆಗೆ ತಪಾಸಣೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಕಾರ್ಮಿಕ ಬಾಬುಲಾಲ್ ಸಿಂಗ್ ತಲೆ ತಿರುಗಿ ಬಿದ್ದು ಮೃತಪಟ್ಟಿದ್ದಾನೆ.
ವ್ಯಕ್ತಿಯ ಸಾವಿನ ಹಿಂದೆ ಹಲವು ಅನುಮಾನಗಳು ಕಂಡು ಬರುತ್ತಿದ್ದು, ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾನೋ ಅಥವಾ ಕಾಲ್ನಡಿಗೆಯಲ್ಲಿ ಬರುವಾಗ ಸರಿಯಾದ ಊಟ, ನೀರು ಇಲ್ಲದೇ ನಡೆಯುತ್ತ ಆಯಾಸವಾಗಿ ಸತ್ತಿದ್ದಾನೋ ಎಂಬುದು ಇನ್ನೂ ಖಚಿತವಾಗಿಲ್ಲ. ಕೋವಿಡ್ ಲಕ್ಷಣಗಳು ಯಾವುದೂ ಕಂಡು ಬಂದಿಲ್ಲ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ ಸುಭಾಷ ಸಂಪಗಾಂವಿ, ತಾಲೂಕು ಆರೋಗ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಕೊಣ್ಣೂರೆ, ಸಿಪಿಐ ಆರ್.ಆರ್.ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.