ಅಪ್ರಾಪ್ತರ ಹೆಸರಲ್ಲಿ ಜಾಬ್‌ ಕಾರ್ಡ್‌: 1.65 ಲಕ್ಷ ವಂಚನೆ

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ; 3 ತಿಂಗಳಿಗೆ ಒಂದು ಮಗು ರಕ್ಷಿಸಲು ಸಲಹೆ

Team Udayavani, Jun 19, 2022, 3:28 PM IST

12

ಸವದತ್ತಿ: ಪಿಡಿಒ ಸಹಿಯೊಂದಿಗೆ ಓರ್ವ ಸದಸ್ಯ ತನ್ನ ಇಬ್ಬರು ಅಪ್ರಾಪ್ತ ಮಕ್ಕಳ ಹೆಸರಲ್ಲಿ ಜಾಬ್‌ ಕಾರ್ಡ್‌ ಮಾಡಿಸಿ 2016ರಿಂದ 1.65 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಬಾಲ ಕಾರ್ಮಿಕ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಹೇಳಿದರು.

ತಾಪಂ ಸಭಾಭವನದಲ್ಲಿ ನಡೆದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ ಕುರಿತು ಪಿಡಿಒ ಅವರನ್ನು ಅಮಾನತುಗೊಳಿಸಲಾಯಿತು. ನರೇಗಾದಲ್ಲಿ ಜಾಬ್‌ ಕಾರ್ಡ್‌ ನೀಡುವಾಗ ಪಿಡಿಒಗಳು ವಯಸ್ಸಿನ ದಾಖಲಾತಿ ಎಚ್ಚರದಿಂದ ಪರಿಶೀಲಿಸಬೇಕು. ತಮ್ಮ ವ್ಯಾಪ್ತಿಯಲ್ಲಿ 3 ತಿಂಗಳಿಗೆ ಒಂದಾದರೂ ಮಗುವಿನ ರಕ್ಷಣೆಗೆ ಶ್ರಮಿಸಬೇಕಿದೆ ಎಂದರು.

ಇಲಾಖೆಯಿಂದ ಜಿಲ್ಲೆಯಲ್ಲಿ ಆ.16ರಿಂದ ನಡೆದ ಸಮೀಕ್ಷೆಯಲ್ಲಿ 16,595 ಸಂಸ್ಥೆ ತಪಾಸಣೆಗೆ ಒಳಪಡಿಸಿದಾಗ 68 ಪ್ರಕರಣ ಬೆಳಕಿಗೆ ಬಂದಿವೆ. 5 ಪ್ರಕರಣಗಳಲ್ಲಿ ಬಾಲ ಕಾರ್ಮಿಕ ಕುರಿತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಇನ್ನುಳಿದಂತೆ 63 ಪ್ರಕರಣ ಕುರಿತು ಕಿಶೋರ ಕಾರ್ಮಿಕ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿವೆ. ಸವದತ್ತಿಯಲ್ಲಿ 1 ಬಾಲ ಕಾರ್ಮಿಕ, 5 ಕಿಶೋರ ಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದ ಅವರು, ಜನತೆಯಲ್ಲಿ ಅರಿವು ಮೂಡಿಸಿ ಅಪರಾಧಗಳು ಕಡಿಮೆಯಾಗುವಂತೆ ಕಾರ್ಯ ನಿರ್ವಹಿಸಬೇಕಿದೆ. ಬಾಲ ಕಾರ್ಮಿಕ, ಜೀತ ಮತ್ತು ಒತ್ತೆಯಾಳು ಪ್ರಕರಣಗಳು ಕಂಡು ಬಂದಲ್ಲಿ ಇಲಾಖೆ ಗಮನಕ್ಕಿರಿಸಿ. ಇಲ್ಲವೇ ಸಹಾಯವಾಣಿ 1098 ಸಂಖ್ಯೆಗೆ ಮಾಹಿತಿ ನೀಡಿ ಎಂದರು.

ತಹಶೀಲ್ದಾರ್‌ ಪ್ರಶಾಂತ ಪಾಟೀಲ ಮಾತನಾಡಿ, ಸುಶಿಕ್ಷಿತರೇ ತಮ್ಮ ಮಕ್ಕಳ ಪಾಲನೆಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ. ಇಟ್ಟಂಗಿ ಭಟ್ಟಿ, ಬೋರ್‌ವೆಲ್‌, ಧಾಬಾಗಳಲ್ಲಿ ಹೆಚ್ಚು ಬಾಲ ಕಾರ್ಮಿಕರು ಕಾರ್ಯದಲ್ಲಿ ತೊಡಗಿದ್ದಾರೆ. ಜಾಗೃತಿ ಕಾರ್ಯಕ್ರಮ ನಡೆಸಿದರೂ ಜನತೆ ಎಚ್ಚೆತ್ತಕೊಳ್ಳುತ್ತಿಲ್ಲ ಎಂದರು.

ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಶಶಿಧರ ಎಂ. ಗೌಡ, ಎಸ್‌.ಎಂ. ನದಾಫ್‌, ಪ್ರಕಾಶ ಚನ್ನಪ್ಪನವರ, ಮಹೇಶ ಚಿತ್ತರಗಿ, ಆರ್‌.ಆರ್‌. ಕುಲಕರ್ಣಿ, ಕಾರ್ಮಿಕ ನಿರೀಕ್ಷಕ ರಮೇಶ ಸಿಂದಗಿ, ಎಸ್‌.ಎಸ್‌. ಮಾನೆ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.