Sankeshwar ಪಟ್ಟಣದಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ


Team Udayavani, Nov 4, 2023, 6:28 PM IST

1-aasdsa-aa

ಸಂಕೇಶ್ವರ : ಪಟ್ಟಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಶನಿವಾರ ದಿ. 4ರಂದು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಈ ವೇಳೆ ಪಟ್ಟಣದಲ್ಲಿ ಎಲ್ಲೆಡೆ ಕನ್ನಡದ ಕಂಪು ಹರಡಿತು. ಯುವಪಡೆ ಕನ್ನಡ ಹಾಡಿಗೆ ಕುಣಿದು ಕುಪ್ಪಳಿಸಿದರು.

ಬೆಳಗಾವಿಯಲ್ಲಿ ನಂ. 1ರಂದು ರಾಜ್ಯೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದ ಹಿನ್ನೆಲೆಯಲ್ಲಿ ಸಂಕೇಶ್ವರದಲ್ಲಿ ನ. 4ರಂದು ರಾಜ್ಯೋತ್ಸವ ಆಚರಣೆಗೆ ರಾಜ್ಯೋತ್ಸವ ಆಚರಣೆ ಸಮಿತಿ ನಿರ್ಧಾರ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಡಗರದಿಂದ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಶನಿವಾರ ಬೆಳಗ್ಗೆ 8 ಗಂಟೆಗೆ ನಿಡಸೋಸಿ ಶಿವಲಿಂಗೇಶ್ವರ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಉದ್ಯಮಿ ಅಪ್ಪಾಸಾಹೇಬ ಶಿರಕೋಳಿ, ಅವರು ಕನ್ನಡ ದ್ವಜಾರೋಹಣ ನೇರವೆರಿಸಿದರು. ಮಾಜಿ ನಗರಾಧ್ಯಕ್ಷೆ ಶ್ರೀಮತಿ ಸೀಮಾ ಹತನೂರೆಅ ಅವರು ಭುವನೇಶ್ವರ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕು. ಶಿತಲ ಮಠಪತಿ ಅವರು ಭುವನೇಶ್ವರಿ ದೇವಿಯ ಮೂರ್ತಿಯ ಪೂಜೆ ನೆರವೇರಿಸಿದರು.

ರೂಪಕಗಳ ಮೆರವಣಿಗೆಯ ಉದ್ಘಾಟನೆಯನ್ನು ಯಾಯಾಖಾನ್ ನದಾಫ್, ಮಕ್ಕಳ ತಜ್ಞರಾದ ಮಂದಾರ ಹಾವಳ ವಾಧ್ಯ ಮೇಳಗಳನ್ನು ಉದ್ಘಾಟಿಸಿದರು. ರಾಣಿ ಚೆನ್ನಮ್ಮಾಜಿಯ ಭಾವಚಿತ್ರಕ್ಕೆ ರಾಜು ಬೋರಗಾವಿ ಪೂಜೆ ಸಲ್ಲಿಸಿದರು.

ಕ್ರಾತಿ ವೀರ ಸಂಗೊಳ್ಳಿ ರಾಯಣ್ಣನನ ಭಾವಚಿತ್ರಕ್ಕೆ ಉದ್ಯಮಿ ಸುನೀಲ ಪರ್ವತರಾವ ಪೂಜೆ ಸಲ್ಲಿಸಿದರು. ರಾಜ್ಯೋತ್ಸವ ಮೆರವಣಿಗೆಗೆ ಡಾ. ಜಯಪ್ರಕಾಶ ಕರಜಗಿ ಚಾಲನೆ ನೀಡಿದರು. ನವೀನ ಗಂಗರೇಡ್ಡಿ ಹಳದಿ ಮತ್ತು ಕೆಂಪು ಬಣ್ಣದ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.

ಬೆಳಗ್ಗೆ ಗಾಂಧಿ ಚೌಕದಿಂದ ಆರಂಭಗೊಂಡ ತಾಯಿ ಭುವನೇಶ್ವರಿ ಹಾಗೂ ರೂಪಕಗಳ ಮೆರವಣಿಗೆಯು ಆಝಾದ ರಸ್ತೆ ಸುಭಾಷ್ ರಸ್ತೆ, ಹಳೆ ಪಿಬಿ ರಸ್ತೆ, ಚನ್ನಮ್ಮ ವೃತ್ತ ಮಾರ್ಗವಾಗಿ ಮತ್ತೆ ಗಾಂಧಿ ಚೌಕಕ್ಕೆ ಆಗಮಿಸಿ ಮುಕ್ತಾಯ ಗೊಂಡಿತು.

ರೂಪಕಗಳ ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣವು ಎಲ್ಲರ ಗಮನ ಸೆಳೆಯಿತು. ಪಟ್ಟಣದಲ್ಲಿನ ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರರ ಪ್ರತಿಮೆಗಳು ಕನ್ನಡ ಭಾವಟಗಳಿಂದ ಶೃಂಗಾರಗೊಂಡಿದ್ದವು.

ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಪ್ರಮೋದ ಹೊಸಮನಿ, ಕನ್ನಡಪರ ಹೋರಾಟಗಾರರಾದ ದಿಲೀಪ ಹೊಸಮನಿ ಸಂತೋಷ ಮುಡಸಿ, ವಿಕ್ರಮ ಕರನಿಂಗ, ಸಂಜಯ ಶಿರಕೋಳಿ, ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಸಂತೋಷ ಸತ್ಯನಾಯಿಕ, ಉಪಾಧ್ಯಕ್ಷ ಅಸ್ಲಂ ಮುಲ್ತಾನಿ, ಪ್ರ, ಕಾರ್ಯದರ್ಶೀ ಪ್ರಶಾಂತ ಮನ್ನಿಕೇರಿ, ಕಾರ್ಯದರ್ಶಿ ಸಂತೋಷ ಅಲತಗಿ, ಖಜಾಂಚಿ ರಾಹುಲ್ ಜಯಕರ, ಸುನಿಲ ಪರ್ವತರಾವ್, ಅಮರ ನಲವಡೆ, ಶ್ರೀಕಾಂತ ಹತನೂರೆ, ಜಿತೇಂದ್ರ ಮರಡಿ, ಆನಂದ ವೈರಾಗಿ, ಮೋಸಿನ ಪಠಾನ್, ಚಿದಾನಂದ ಕರ್ದನ್ನವರ, ಪ್ರಶಾಂತ ಕೋಳಿ, ವಿನೋದ ನಾಯಿಕ, ಪಿಂಟು ಸೂರ್ಯವಂಶಿ, ಮಹೇಶ ಹಟ್ಟಿಹೊಳಿ, ರೋಹನ‌ ನೇಸರಿ, ಗಂಗಾರಾಮ ಭೂಸಗೋಳ, ಪವನ ಪಾಟೀಲ, ಪ್ರೀತಂ ಸುಮಾರೆ, ಗಣೇಶ ಪಾಟೀಲ, ಲಕ್ಷ್ಮಣ ಬಾನೆ, ಅನಿಲ ಖಾತೆದಾರ, ರಾಹುಲ್ ವಾರಕರಿ, ಯುವರಾಜ ಪಾತ್ರೋಟ, ಜಯು ಸಾವಂತ, ಅಭಿ ಹರಿಜನ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.