ಅದ್ಧೂರಿ ಕರೋಶಿ ಲಕ್ಷ್ಮೀದೇವಿ ಜಾತ್ರೆ
Team Udayavani, Mar 18, 2020, 12:12 PM IST
ಚಿಕ್ಕೋಡಿ: ಕೊರೊನಾ ಭೀತಿ ನಡುವೆಯೂ ತಾಲೂಕಿನ ಕರೋಶಿ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ತೆರೆಕಂಡಿತು.
ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ ಜಾತ್ರಾ ಮಹೋತ್ಸವದ ಕೊನೆಯ ದಿನದಂದು ಸಂಜೆ ನಡೆದ ಮೂರ್ತಿಗಳ ಹೊನ್ನಾಟ ಕಾರ್ಯಕ್ರಮದಲ್ಲಿ ಕರೋಶಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಎರಡು ಗಂಟೆ ನಡೆದ ಹೊನ್ನಾಟದಲ್ಲಿ ಭಕ್ತರು ದೇವಿ ಮೂರ್ತಿಗಳ ಮೇಲೆ ಭಂಡಾರ, ಉತ್ತತ್ತಿ, ಫಲಪುಷ್ಪ ಹಾರಿಸಿ ಭಕ್ತಿ ಸೇವೆ ಸಲ್ಲಿಸಿದರು.
ನಂತರ ಮೂರ್ತಿಗಳ ವಿಸರ್ಜನೆ ನಡೆಯಿತು. ಇಡೀ ಪರಿಸರ ಭಂಡಾರಮಯವಾಗಿತ್ತು. ಐದು ದಿನನಡೆದ ಜಾತ್ರಾ ಮಹೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕುದುರೆ, ಸೈಕಲ್ ಶರ್ಯತ್ತುಗಳು ಜನಮನ ಸೆಳೆದವು. ಐದು ದಿನಗಳ ಕಾಲ ನಡೆದ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾತ್ರಾ ಕಮಿಟಿ ಕಟ್ಟುನಿಟ್ಟಿನ ಬಿಗಿ ಬಂದೋಬಸ್ತ್ ಕಲ್ಪಿಸಿತ್ತು.ನೆರೆಯ ಮಹಾರಾಷ್ಟ್ರ, ಗೋವಾ ರಾಜ್ಯದಿಂದಲೂ ಭಕ್ತರು ಜಾತ್ರೆಗೆ ಆಗಮಿಸಿದರು.
ಗ್ರಾಮದ ಮುಖಂಡ ಮಹೇಶ ಭಾತೆ, ಗ್ರಾಮ ಪಂಚಾಯತಿ ಅಧ್ಯಕ್ಷ ಸಂಜಯ ಕಾಂಬಳೆ, ವಿಜಯಕುಮಾರ್ ಕೋಠಿವಾಲೆ, ದುಂಡಯ್ಯ ಪೂಜಾರಿ, ಕಾಶಿನಾಥ ಭಾಮನೆ, ಗುರು ನಿರ್ವಾಣಿ, ಅಣ್ಣಪ್ಪ ಶೆಂಡೂರೆ, ಸುರೇಶ ಕೇಸ್ತಿ, ಬಾಳು ಮುಗಳಿ, ಪಿಂಟು ಹಳಿಜೋಳಿ ಸೇರಿದಂತೆ ಮುಂತಾದವರು ಜಾತ್ರೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.