ಪ್ರತಿ ಮನೆಯಲ್ಲೂ ಭಗತ್‌ ಸಿಂಗ್‌ ಜನಿಸಲಿ; ಪ್ರೊ. ಕೇಶವ ಬಂಗೇರ

ದೇಶ ಸ್ವಾತಂತ್ರ್ಯಗಳಿಸುವ ನಿಟ್ಟಿನಲ್ಲಿ ಭಗತ್‌ ಸಿಂಗ್‌ ಅವರ ಆತ್ಮಾರ್ಪಣೆ ಮೆಲುಕು ಹಾಕುವಂಥದ್ದು.

Team Udayavani, Mar 24, 2022, 5:40 PM IST

ಪ್ರತಿ ಮನೆಯಲ್ಲೂ ಭಗತ್‌ ಸಿಂಗ್‌ ಜನಿಸಲಿ; ಪ್ರೊ. ಕೇಶವ ಬಂಗೇರ

ಬೆಳಗಾವಿ: ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿರಿಸಿದ ಭಗತ್‌ ಸಿಂಗ್‌ ಒಬ್ಬ ಮಹಾನ್‌ ದೇಶಭಕ್ತ ಹಾಗೂ ಕ್ರಾಂತಿಕಾರಿ. ಅವರಂತಹ ಮಹಾನ್‌ ದೇಶಭಕ್ತ ಭಾರತದ ಪ್ರತಿ ಮನೆ ಮನೆಗಳಲ್ಲಿ ಜನಿಸಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಮಂಗಳೂರು ವಿಭಾಗ ಪ್ರಮುಖ ಪ್ರೊ. ಕೇಶವ ಬಂಗೇರ ಹೇಳಿದರು.

ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗಳು ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಪ್ರತಿಯೊಂದು ಮನೆಗಳಲ್ಲಿ ಭಗತ್‌ ಸಿಂಗ್‌ ಅವರಂತಹ ದೇಶ ಪ್ರೇಮಿ ಜನಿಸಬೇಕು. ಭಗತ್‌ ಸಿಂಗ್‌ ಮಹಾನ್‌ ದೇಶಪ್ರೇಮಿ. ಅವರ ಚಿಂತನೆ ಬಿತ್ತುವ ಕಾರ್ಯ ಆಗಬೇಕು. ದೇಶ ಸ್ವಾತಂತ್ರ್ಯಗಳಿಸುವ ನಿಟ್ಟಿನಲ್ಲಿ ಭಗತ್‌ ಸಿಂಗ್‌ ಅವರ ಆತ್ಮಾರ್ಪಣೆ ಮೆಲುಕು ಹಾಕುವಂಥದ್ದು. ದೇಶದ ರಾಷ್ಟ್ರೀಯ ಸಂಘರ್ಷದ ಕಾಲಘಟ್ಟದಲ್ಲಿ ಅವರೊಬ್ಬರು ಹೊಸ ಯುಗವೊಂದರ ಪ್ರವರ್ತಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ 73 ವರ್ಷಗಳಿಂದ ಎಬಿವಿಪಿ ವಿದ್ಯಾರ್ಥಿ ಬಂಧುಗಳಲ್ಲಿ ದೇಶಪ್ರೇಮ ಹಾಗೂ ಭಗತ್‌ ಸಿಂಗ್‌ ಅವರಂತಹ ದೇಶಪ್ರೇಮಿಗಳ ವಿಚಾರಗಳನ್ನು ಬಿತ್ತುವ ಕೆಲಸವನ್ನು ಮಾಡುತ್ತಿದೆ ಎಂದರು.

ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಂತನೆಗಳನ್ನು ತುಂಬಬೇಕು. ಯುವಕರನ್ನು ರಾಷ್ಟ್ರೀಯ ಮುಖ್ಯ ವಾಹಿನಿಗಳಲ್ಲಿ ತೆಗೆದುಕೊಂಡು ಹೋಗುವ
ದಿಸೆಯಲ್ಲಿ ವಿದ್ಯಾರ್ಥಿ ಪರಿಷತ್ತು ಕೆಲಸ ಮಾಡುತ್ತಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್‌ ಸಿಂಗ್‌ ಅವರಂತಹ ವೀರರು ಗಲ್ಲಿಗೆ ಏರಲು ಹಿಂದೇಟು
ಹಾಕಿದವರಲ್ಲ. ಗಲ್ಲಿಗೇರುವ ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬ್ರಿಟಿಷ್‌ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದರು. ದೇಶಪ್ರೇಮದ
ಸ್ಫೂರ್ತಿಯ ಸೆಲೆ ಅವರಾಗಿದ್ದರು. ಅವರಂತಹ ಮಹಾನ್‌ ದೇಶಪ್ರೇಮಿ ಇಂದಿನ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಜನಿಸುವ ಅಗತ್ಯ ಇದೆ ಎಂದರು.

ಎಬಿವಿಪಿ ಬೆಳಗಾವಿ ನಗರ ಘಟಕ ಅಧ್ಯಕ್ಷ ಡಾ. ಎಸ್‌.ವಿ. ಗೋರಬಾಳ, ಸಂಘಟನಾ ಜಂಟಿ ಕಾರ್ಯದರ್ಶಿ ಪ್ರಥ್ವಿ ಕುಮಾರ್‌, ಭರತೇಶ ಹೋಮಿಯೋಪಥಿಕ್‌ ವೈದ್ಯಕೀಯ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಆನಂದ ಹೊಸೂರ್‌, ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಜಂಟಿ ಕಾರ್ಯದರ್ಶಿ ರೋಹಿತ್‌ ಉಮನಾಬಾದಿಮಠ,
ನಗರ ಕಾರ್ಯದರ್ಶಿ ಕೃಷ್ಣಕುಮಾರ್‌ ಜೋಶಿ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.