ಪಕ್ಷ-ಜಾತಿ ಭೇದ ಮರೆತು ಕನ್ನಡ ಕಟ್ಟುವ ಕೆಲಸವಾಗಲಿ

ಕಸಾಪ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ; ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

Team Udayavani, Jun 19, 2022, 4:22 PM IST

15

ಮುನವಳ್ಳಿ: ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ. ತಾಯ್ನಾಡು ಹಾಗೂ ಮಾತೃಭಾಷೆ ಉಳಿಸುವ ಕೆಲಸವಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಮುನವಳ್ಳಿ ಹೋಬಳಿ ಘಟಕದ ನೂತನ ಪದಾಧಿ ಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಅನ್ಯ ಭಾಷೆಗಳು ಹೊಕ್ಕು, ಕನ್ನಡ ನುಂಗಿ ಹಾಕುತ್ತಿವೆ. ಇದರಿಂದ ನಮ್ಮ ಕನ್ನಡ ಸಂಸ್ಕೃತಿ ಬಿಟ್ಟು ಬೇರೆ ಭಾಷೆಗಳ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದರು.

ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಮಾತನಾಡಿ, ಎಲ್ಲ ಭಾಷೆಯ ಪತ್ರಿಕೆಗಳು ಸಿಗುವ ರಾಜ್ಯ ಕರ್ನಾಟಕ ಮಾತ್ರ. ಏಕೆಂದರೆ, ತಮಿಳಿನಲ್ಲಿ ತಮಿಳು ಪತ್ರಿಕೆ, ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ, ಆಂಧ್ರದಲ್ಲಿ ತೆಲುಗು ಪತ್ರಿಕೆ ಮಾತ್ರ ಸಿಗುತ್ತವೆ. ಆದರೆ ನಮ್ಮ ಕರ್ನಾಟಕದಲ್ಲಿ ಎಲ್ಲ ಭಾಷೆ ಪತ್ರಿಕೆಗಳು ದೊರೆಯುತ್ತವೆ ಎಂದರು.

ಬಸವರಾಜ ನಾವಲಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಡಾ| ವೈ.ಎಂ. ಯಾಕೊಳ್ಳಿ, ಟಿ.ಎಂ. ಕಾಮಣ್ಣವರ, ಮುಖಂಡರಾದ ರಮೇಶ ಗೋಮಾಡಿ, ರವೀಂದ್ರ ಯಲಿಗಾರ, ಉಮೇಶ ಬಾಳಿ, ಪಂಚನಗೌಡ ದ್ಯಾಮನಗೌಡರ, ಪುರಸಭೆ ಮುಖ್ಯಾಧಿಕಾರಿ ರಮೇಶ ಹಿಟ್ಟಣಗಿ, ಅನ್ನಪೂರ್ಣ ಲಂಬೂನವರ, ಮುನವಳ್ಳಿ ಹೋಬಳಿ ಘಟಕದ ನೂತನ ಅಧ್ಯಕ್ಷ ಮೋಹನ ಸರ್ವಿ ಆಗಮಿಸಿದ್ದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸು ಬೇವಿನಗಿಡದ, ಡಾ| ಎ.ಎಸ್‌. ಅಮೋಘಿಮಠ, ಡಾ| ಎಚ್‌.ಎಸ್‌. ಗೋಟಿ, ಬಿ.ಬಿ. ಹುಲಿಗೊಪ್ಪ, ಸುಧಿಧೀರ ವಾಘೇರಿ, ಅಶ್ವಿ‌ನಿ ಪಾತಾಳಿ, ಸಹನಾ ರಾಯರ ಅವರನ್ನು ಸನ್ಮಾನಿಸಲಾಯಿತು.

ಅಲ್ಲದೇ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರುಗಿತು. ಈ ವೇಳೆ ಸುರೇಶ ಜಾವೂರ, ಶ್ರೀಕಾಂತ ಮಿರಜಕರ, ಮಂಜುನಾಥ ಭಂಡಾರಿ, ಗುರುನಾಥ ಪತ್ತಾರ, ಸುಧಿಧೀರ ವಾಘೇರಿ, ಪ್ರಶಾಂತ ತುಳಜಣ್ಣವರ, ವೀರಣ್ಣ ಕೊಳಕಿ, ರಮೇಶ ಮುರಂಕರ, ಗಂಗಾಧರ ಗೊರಾಬಾಳ, ಟಿ.ಎನ್‌. ಮುರಂಕರ, ಬಿ.ಎಚ್‌. ಖೊಂದುನಾಯ್ಕ, ಬಾಳು ಹೊಸಮನಿ, ಜಿ.ಎಸ್‌. ಚಿಪ್ಪಲಕಟ್ಟಿ, ನಾಗೇಶ ಹೊನ್ನಳ್ಳಿ, ರಾಧಾ ಕುಲಕರ್ಣಿ, ಅನುರಾಧಾ ಬೆಟಗೇರಿ, ಶಾರದಾ ದ್ಯಾಮನಗೌಡರ, ಸುಮಾ ಯಲಿಗಾರ, ಪುಷ್ಪಾ ಪಶುಪತಿಮಠ, ವೈ. ಎಫ್‌. ಶಾನಭೋಗ, ವಿರಾಜ ಕೊಳಕಿ, ಎಂ.ಬಿ. ಅಷ್ಟಗಿಮಠ, ಅರುಣಗೌಡ ಪಾಟೀಲ, ಪ್ರಾಚಾರ್ಯ ಎಂ.ಎಚ್‌. ಪಾಟೀಲ, ಶ್ರೀಶೈಲ ಗೋಪಶೆಟ್ಟಿ, ಶಂಕರ ರಾಠೊಡ, ರಾಜೇಶ್ವರಿ ಬಾಳಿ, ಎಂ.ಜಿ. ಹೊಸಮಠ, ಅನಿತಾ ಯಲಿಗಾರ ಇದ್ದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.