ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ


Team Udayavani, May 14, 2024, 2:25 PM IST

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಉದಯವಾಣಿ ಸಮಾಚಾರ
ಕೋಹಳ್ಳಿ: ಸತ್ಸಂಗದಲ್ಲಿ ಪಾಲ್ಗೊಂಡು ಶೃದ್ಧೆ, ಭಕ್ತಿ, ಜ್ಞಾನದ ಅನುಭವವನ್ನು ಪಡೆದು ಗುರುವಿಗೆ ಶರಣಾಗಬೇಕು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಅವರು ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ದೇವರ ಆರಾಧನಾ ಮಹೋತ್ಸವದ ನಿಮಿತ್ತ ನಡೆದ ಶಿವಾನುಭವಗೋಷ್ಠಿ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಕೂಡಲಸಂಗಮ ದೇವರ ಒಲಿಸಲು ಬಂದ ಪ್ರಸಾದ ಕಾಯುವ ಕೆಡಿಸಲಾಗದು ಎಂಬ ವಿಷಯದ ಕುರಿತು ಮಾತನಾಡಿ, ಸಂಸಾರದಲ್ಲಿ ಆಸ್ತಿ, ಅಂತಸ್ತು, ಸಂಪತ್ತಿಗೆ ಆಸೆ ಮಾಡದೇ ಗುರುವಿನಲ್ಲಿ ಭಕ್ತಿ, ಭಾವದಿಂದ ದುಡಿಯಬೇಕು. ಜೀವನದ ಸಂಸಾರದ ಬಂಡಿ ಸಾಗಲೆಂದು ನಿಸ್ವಾರ್ಥವಾಗಿ ದುಡಿದರೆ ಮುಕ್ತಿ ಪಡೆಯಲು ಸಾಧ್ಯವಿದೆ.

ಕಾಯಕ, ದಾಸೋಹ, ಪ್ರಸಾದ ಈ ಮೂರು ತತ್ವಗಳ ಮೂಲಕ ಕಾಯಕವನ್ನು ಮಾಡಬೇಕು. ಕಾಯಕದಲ್ಲಿ ಸತ್ಯ, ಶುದ್ಧವಾದ ಮನಸ್ಸಿನಿಂದ ದಾಸೋಹ ನೀಡಬೇಕು. ನಾವು ಗಳಿಸಿದ ಸಂಪತ್ತಿನಲ್ಲಿ ಸ್ವಲ್ಪ ಭಾಗವನ್ನು ದಾಸೋಹಕ್ಕೆ ನೀಡಬೇಕು. ದಾಸೋಹದ ಪ್ರಸಾದವನ್ನು ವಿನಿಮಯ ಮಾಡಿಕೊಂಡು ಸ್ವೀಕರಿಸಬೇಕು. ಶರಣರು ಕಂಡ ಸರಳತೆಯ, ಸಮಾನತೆಯ, ದಾಸ್ಯಮುಕ್ತ ಸಮಾಜ ಮಾಡಬೇಕು ಎಂದರು.

ವಿಜಯಪೂರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮಿಜಿ ನೇತೃತ್ವ ವಹಿಸಿ ಮಾತನಾಡಿ, ಭಗವಂತ ಕೊಟ್ಟ ಈ ಶರೀರವು ಅಪರೂಪದ ಕಾಣಿಕೆ. ಶರೀರಕ್ಕೆ ವಿವೇಕ ಕೊಟ್ಟು ಭೂಮಿಗೆ ಕಳುಹಿಸಿದ ಭಗವಂತ ನೋಡಬೇಕಾದರೆ ಒಳ್ಳೆಯ ಪ್ರಸಾದಕಾಯುವ ಕಾರ್ಯವನ್ನು ಮಾಡುವ ಮೂಲಕ ಭಗವಂತನಿಗೆ ಹತ್ತಿರವಾಗಬೇಕು. ಪ್ರಸಾದ ಕಾಯುವನಾಗಬೇಕಾದರೆ, ಸತ್ಯ, ಶುದ್ದವಾದ
ಕಾಯಕದಿಂದ ಜೀವನ ನಡೆಸಬೇಕು. ಅಧ್ಯಾತ್ಮವೆಂಬುದು ನಮ್ಮ ದೇಶಕ್ಕೆ ಕೊಟ್ಟ ಕೊಡುಗೆ. ಯಾವ ದೇಶದಲ್ಲಿ ಸಿಗದೇ ಇರುವ ಅಧ್ಯಾತ್ಮದ ರುಚಿಯನ್ನು ಸಿದ್ದೇಶ್ವರ ಶ್ರೀಗಳು ನಮ್ಮ ಭಾರತ ದೇಶದಲ್ಲಿ ಪ್ರವಚನದಿಂದ ಮೂಡಿಸಿದ್ದಾರೆ ಎಂದರು.

ಕಕಮರಿಯ ಅಭಿನವ ಗುರಲಿಂಗ ಸ್ವಾಮಿಜಿ, ಗುರುದೇವಾಶ್ರಮದ ಆತ್ಮಾರಾಮ ಸ್ವಾಮಿಜಿ, ಕಾಗವಾಡದ ಯತೀಶಾನಂದ ಸ್ವಾಮಿಜಿ, ಸವಿತಾನಂದ ಸ್ವಾಮಿಜಿ, ಅನ್ನಪೂರ್ಣ ತಾಯಿವರು, ಸಿದರಾಯ ಯಲಡಗಿ, ಅಪ್ಪಸಾಬ ಬಿರಾದಾರ, ರವಿ ಸಂಕ, ಗುರುಬಸು ಬಂಡಗರಗೋಟ್ಟಿ, ಗುರು ಮುಗ್ಗನ್ನವರ ಸೇರಿದಂತೆ ಅನೇಕ ಸದ್ಬಕ್ತ ಮಂಡಳಿಯ ಸದಸ್ಯರು ಇದ್ದರು. ಮಹೇಶ ಬಂಡರಗೊಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

Belagavi1

Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.