![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 1, 2020, 6:07 PM IST
ಬೆಳಗಾವಿ: ಎಪ್ರೀಲ್ ತಿಂಗಳ ವಿತರಣೆಯಲ್ಲಿ ಸರಿಯಾದ ತೂಕದ ಪಡಿತರ ನೀಡದ ಮತ್ತು ಹಣ ಪಡೆದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 11 ನ್ಯಾಯಬೆಲೆ ಅಂಗಡಿಗಳ ಪ್ರಾಧಿಕಾರವನ್ನು ಅಮಾನತುಗೊಳಿಸಲಾಗಿದೆ.
ಹಾಗೂ 35 ನ್ಯಾಯಬೆಲೆ ಅಂಗಡಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್ಅಅದೇ ರೀತಿ ಮೇ ತಿಂಗಳ ಪಡಿತರ ವಿತರಣೆಯಲ್ಲಿ ಪಡಿತರ ಚೀಟಿದಾರರಿಗೆ ಸರಿಯಾದ ತೂಕದ ಪಡಿತರ ನೀಡದ, ಹಣ ಪಡೆದಿರುವ ಮತ್ತು ಪಡಿತರೇತರ ವಸ್ತುಗಳನ್ನು(ಮುಕ್ತ ಮಾರುಕಟ್ಟೆಯ ವಸ್ತುಗಳು) ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡುವ ಪ್ರಕರಣಗಳು ಕಂಡುಬಂದರೆ ಅಂತಹ ಅಂಗಡಿಕಾರರ ಲೈಸೆನ್ಸ್ ಪ್ರಾಧಿಕಾರ ಅಮಾನತುಗೊಳಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ಸಹ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಪಡಿತರ ಚೀಟಿದಾರರು ಯಾವುದಾದರೂ ದೂರುಗಳಿದ್ದರೆ ಬೆಳಗಾವಿ ನಗರಕ್ಕೆ ಸಂಬಂಧಿಸಿದಂತೆ ಸಹಾಯಕ ನಿರ್ದೇಶಕರು ಮತ್ತು ಆಹಾರ ನಿರೀಕ್ಷಕರಲ್ಲಿ ಹಾಗೂ ಆಯಾ ತಾಲೂಕುಗಳಲ್ಲಿ ತಹಶೀಲ್ದಾರರು ಮತ್ತು ಸಂಬಂಧಪಟ್ಟ ಆಹಾರ ನಿರೀಕ್ಷಕರಲ್ಲಿ ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 1 ರಿಂದ ಪಡಿತರ ವಿತರಣೆ: ಕೋವಿಡ್ -19 ವೈರಾಣು ಜಿಲ್ಲೆಯ ಸಾರ್ವಜನಿಕರನ್ನು ಕಂಗೆಡಿಸಿದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ ಕಲ್ಯಾಣ ಅನ್ನ ಯೋಜನೆಯ ಮೂಲಕ ಮೇ ಮೊದಲನೆಯ ತಾರೀಖೀನಿಂದ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ. ಮೇ 1 ರಿಂದ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪಡಿತರ ವಿತರಣೆ ಕಾರ್ಯ ನಡೆಸಲಾಗುವುದು. ಅಕ್ಕಿಯೊಂದಿಗೆ ಕಡ್ಡಾಯವಾಗಿ ತೊಗರಿಬೇಳೆಯನ್ನು ವಿತರಿಸಬೇಕು. ಪಡಿತರವನ್ನು ಪಡೆಯಲು ಬರುವ ಸದಸ್ಯರು ಕಡ್ಡಾಯವಾಗಿ ಮಾಸ್ಕ(ಮುಖಗವಸು) ಧರಿಸಿರಬೇಕು. ಕೇಂದ್ರ ಸರ್ಕಾರದ ಗ್ರಾಹಕರ ಮತ್ತು ಆಹಾರ ನಾಗರಿಕ ಸರಬರಾಜು ಮಂತ್ರಾಲಯದ ಆದೇಶದ ಅನ್ವಯ ಓ.ಟಿ.ಪಿ ಮೂಲಕವೇ ಕಡ್ಡಾಯವಾಗಿ ಪಡಿತರ ವಿತರಿಸುವದರಿಂದ ಪಡಿತರ ಚೀಟಿದಾರರು ನೋಂದಾಯಿತ ಮೋಬೆ„ಲ್ ತರಬೇಕು ಎಂದು ಅವರು ಹೇಳಿದ್ದಾರೆ.
ಆದ್ಯತಾ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಿದ ಪ್ರತಿ ಕುಟುಂಬಕ್ಕೆ ಸರ್ಕಾರವು 10ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದು 2019 ಮಾರ್ಚ ತಿಂಗಳಿನಿಂದ ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಮೊಬೈಲ್ ಮತ್ತು ಆಧಾರ ಕಾರ್ಡನೊಂದಿಗೆ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಓ.ಟಿ.ಪಿ. ಮೂಲಕ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಪಡೆಯಬಹುದಾಗಿದೆ. ಅಂತ್ಯೋದಯ ಪಡಿತರ ಚೀಟಿಗಳು ಹೊಂದಿರುವ ಪ್ರತಿ ಸದಸ್ಯರಿಗೆ ಉಚಿತವಾಗಿ 10ಕೆಜಿ ಅಕ್ಕಿ ಮತ್ತು ಪ್ರತಿ ಪಡಿತರ ಚೀಟಿಗೆ(ಕುಟುಂಬಕ್ಕೆ) 1ಕೆಜಿ ತೊಗರಿ ಬೇಳೆ ನೀಡಲಾಗುವುದು. ಆದ್ಯತಾ ಕುಟುಂಬಗಳ ಪ್ರತಿ ಸದಸ್ಯರಿಗೆ 10ಕೆಜಿ ಅಕ್ಕಿ ಮತ್ತು ಪ್ರತಿ ಪಡಿತರ ಚೀಟಿಗೆ(ಕುಟುಂಬಕ್ಕೆ) 1ಕೆಜಿ ತೊಗರಿ ಬೇಳೆಯನ್ನು ಉಚಿತವಾಗಿ ವಿತರಿಸಲಾಗುವದು ಎಂದು ಅವರು ತಿಳಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.