ಜೀವನ ಪಥ ಬದಲಿಸುವ ಶಕ್ತಿ ವಚನಗಳಿಗಿದೆ: ಪ್ರಭಾಕರ ಕೋರೆ


Team Udayavani, Aug 20, 2024, 6:04 PM IST

ಜೀವನ ಪಥ ಬದಲಿಸುವ ಶಕ್ತಿ ವಚನಗಳಿಗಿದೆ: ಪ್ರಭಾಕರ ಕೋರೆ

ಉದಯವಾಣಿ ಸಮಾಚಾರ
ಬೆಳಗಾವಿ: ಮಹಾಮಾನವತಾವಾದಿ ಬಸವಣ್ಣನವರ ವಿಚಾರಗಳು ಎಲ್ಲ ಕಾಲಕ್ಕೂ ಮೌಲಿಕವೆನಿಸಿವೆ. ಅವುಗಳು ನಮ್ಮ ಅನುಕರಣೆಯ ಭಾಗವಾಗಬೇಕಾಗಿದೆ. ಜೀವನ ಪಥವನ್ನು ಬದಲಾಯಿಸುವ ಶಕ್ತಿ ಬಸವಣ್ಣನವರ ವಚನಗಳಲ್ಲಿ ಅಡಗಿದೆ ಎಂದು
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಹೇಳಿದರು.

ಇಲ್ಲಿಯ ಶಹಾಪುರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಪೀಠ ಹಾಗೂ ಶ್ರೀ ಜಗಜ್ಯೋತಿ ಬಸವೇಶ್ವರ ಕಲ್ಯಾಣ ಮಂಟಪ, ಶ್ರೀ ದಾನಮ್ಮದೇವಿ ಮಂದಿರ ಟ್ರಸ್ಟ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವ ವಾಹಿನಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶತಶತಮಾನಗಳವರೆಗೆ ನಾವು ಬಸವಣ್ಣನವರನ್ನು ರಾಜ್ಯದ ಆಚೆಗೆ ಬಿಟ್ಟುಕೊಡಲಿಲ್ಲ.ಇಂದು ಅವರ ಸಂದೇಶಗಳು ವಿಶ್ವಮಾನ್ಯವೆನಿಸಿವೆ.

ಇಂದಿನ ಯುವಜನಾಂಗಕ್ಕೆ ಅದನ್ನು ಮುಟ್ಟಿಸುವ ಕೆಲಸ ಮಾಡಬೇಕಾಗಿದೆ ಎಂದರು. ಫ.ಗು.ಹಳಕಟ್ಟಿಯಂತಹ ಮಹನೀಯರಿಂದ ವಚನ ಸಾಹಿತ್ಯ ಬೆಳಕು ಕಂಡಿತು. ಅವರನ್ನು ಸ್ಮರಿಸಿಕೊಳ್ಳಲೇಬೇಕು. ಧಾರವಾಡದ ಬಸವಪೀಠಕ್ಕೆ ಎಸ್‌.ವಿ.ಬೆಂಬಳಗಿಯವರ ಕೊಡುಗೆ ಅಪಾರವಾಗಿದೆ.

ಮುರಗೋಡದ ಮಹಾಂತಜ್ಜನವರ ಭಕ್ತರಾಗಿ ಅವರ ಕಾರ್ಯವನ್ನು ಬಸವಪೀಠದ ಮೂಲಕ ಯಶಸ್ವಿಯಾಗಿ ನೆರವೇರಿಸಿದರು ಎಂದು ಡಾ| ಕೋರೆ ಸ್ಮರಿಸಿದರು. ಬಸವಣ್ಣ ಸಾಂಸ್ಕೃತಿಕ ನಾಯಕ ವಿಷಯದ ಕುರಿತು ಮಾತನಾಡಿದ ವಿದ್ವಾಂಸರಾದ ಡಾ| ವಿ.ಎಸ್‌.ಮಾಳಿ ಅವರು, ಮತ, ಮೌಡ್ಯ, ಅಜ್ಞಾನ ತ್ರಿವಿಧ ಮಲಗಳನ್ನು ತೊಳೆದು ನಮ್ಮ ಆತ್ಮಹೃದಯದಲ್ಲಿ ಭಕ್ತಿಜ್ಞಾನ
ಸುಜಲವನ್ನು ತುಂಬಿದವರು ಬಸವಣ್ಣನವರು. ಕನ್ನಡ ಕುಲಕೋಟಿಯ ಸಂಸ್ಕೃತಿಯ ಕುಲಪತಿ ಬಸವಣ್ಣ. ನಡೆ ನುಡಿಯ ಮೂಲಕ ಬದುಕಲು ಕಲಿಸಿದವ ಬಸವ.

ಪ್ರಳಯದ ಕಸವನ್ನು ಕಿತ್ತು ಅಮೃತದ ಬೆಳೆಯನ್ನು ಬೆಳೆದವರು ಬಸವಣ್ಣ. ಅವರು ಕರ್ನಾಟಕಕ್ಕೆ ಅಷ್ಟೇ ಅಲ್ಲ, ಇಡೀ ವಿಶ್ವದ ಸಾಂಸ್ಕೃತಿಕ ನಾಯಕ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಡಾ| ಕೆ.ಬಿ.ಗುಡಸಿ ಮಾತನಾಡಿ, ಬಸವಣ್ಣನವರನ್ನು ಒಂದು ಧರ್ಮಕ್ಕೆ, ಒಂದು ಜಾತಿಗೆ ಸೀಮಿತಗೊಳಿಸುವ ಕಾರ್ಯ ನಡೆಯುತ್ತಿದೆ. ಅದು ಸಲ್ಲದು.ಅವರು ಸಮಾನತೆಯ ಹರಿಕಾರರು. ಬಸವಪೀಠ ಈ ನಿಟ್ಟಿನಲ್ಲಿ ಕಳೆದ ಐವತ್ತು ವರ್ಷಗಳಿಂದ ಮಹತ್ತರ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿಯವರು ಆಶೀರ್ವಚನ ನೀಡಿ, ಬಸವಣ್ಣನವರದು ಮಾತೃಹೃದಯಿ
ನಡೆನುಡಿಯಾಗಿತ್ತು. ಒಂದು ಕಾಲಘಟ್ಟದಲ್ಲಿ ನಿಂತು ಸಮಾಜ ಧರ್ಮಗಳನ್ನು ತಿದ್ದಿ ತೀಡುವ ಕಾರ್ಯವನ್ನು ಸೂಕ್ಷ್ಮವಾಗಿ ನಿರ್ವಹಿಸಿದರು ಎಂದು ಹೇಳಿದರು.

ಧಾರವಾಡ ಮುರಘಾಮಠದ ಡಾ| ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ಕಾಯಕದಾಸೋಹ ಸಿದ್ಧಾಂತಗಳು ವ್ಯಕ್ತಿಕಲ್ಯಾಣ ಹಾಗೂ ಸಮಾಜಕಲ್ಯಾಣದಲ್ಲಿ, ರಾಷ್ಟ್ರನಿರ್ಮಾಣದಲ್ಲಿ ಮಹತ್ವವನ್ನು ಪಡೆದಿವೆ. ಅಂತೆಯೆ ಯುಗ ಯುಗಗಳು ಕಳೆದರೂ ಸತ್ಯದರ್ಶನ ಅಡಗಿದೆ ಎಂದರು.

ಮುರಗೋಡ ದುರದುಂಡೀಶ್ವರಮಠದ ನೀಲಕಂಠ ಸ್ವಾಮಿಗಳು, ಮುರಗೋಡದ ಮಹಾಂತಜ್ಜನವರು, ಎ.ಎಸ್‌.ಪಾಟೀಲ, ಎಂ.ಜಿ.ಬೊಳಮಲ್ಲ, ಡಾ.ಎಂ. ಎಸ್‌.ಉಮದಿ, ಎಸ್‌.ವಿ. ಬಾಗಿ, ಸಚಿನ ಖಡಬಡಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕೆಎಲ್‌ಇ
ಸಂಸ್ಥೆಯಲ್ಲಿ 40 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ಡಾ| ಪ್ರಭಾಕರ ಕೋರೆ ಅವರನ್ನು ಟ್ರಸ್ಟ್‌ ವತಿಯಿಂದ ಸತ್ಕರಿಸಲಾಯಿತು.

ಮಹೇಶ್ವರಿ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬಸವಪೀಠದ ಸಂಯೋಜಕರಾದ ಡಾ| ಸಿ.ಎಂ. ಕುಂದಗೋಳ ಪ್ರಾಸ್ತಾವಿಕ ಭಾಷಣ ಮಾಡಿದರು. ದಾನಮ್ಮದೇವಿ ಟ್ರಸ್ಟ್‌ನ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ ಸ್ವಾಗತಿಸಿದರು. ಕಾರ್ಯದರ್ಶಿ ಸಿ.ಎಂ. ಕಿತ್ತೂರ ವಂದಿಸಿದರು. ಡಾ.ಮಹೇಶ ಗುರನಗೌಡರ ನಿರೂಪಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.